ಮದ್ದೂರು: ಜನಸ್ನೇಹಿಯಾಗದ ಕೆ.ಹೊನ್ನಲಗೆರೆ ಅಟಲ್‌ ಜೀ ಕೇಂದ್ರ

ಪವರ್‌ ಕಟ್‌ ಆದರೆ ಕಚೇರಿಯಲ್ಲಿನ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿವೆ.

Team Udayavani, Apr 4, 2024, 5:41 PM IST

ಮದ್ದೂರು: ಜನಸ್ನೇಹಿಯಾಗದ ಕೆ.ಹೊನ್ನಲಗೆರೆ ಅಟಲ್‌ ಜೀ ಕೇಂದ್ರ

ಉದಯವಾಣಿ ಸಮಾಚಾರ
ಮದ್ದೂರು: ತಾಲೂಕಿನ ಕೆ.ಹೊನ್ನಲಗೆರೆ ಅಟಲ್‌ ಜೀ ಜನಸ್ನೇಹಿ ಕೇಂದ್ರ (ನಾಡಕಚೇರಿ) ಅವ್ಯವಸ್ಥೆಯ ಆಗರವಾಗಿದ್ದು, ನಾಡಕಚೇರಿ ಜನಸ್ನೇಹಿಯಾಗಿ ಉಳಿದಿಲ್ಲ. ಕಚೇರಿ ತುಂಬಾ ಸಮಸ್ಯೆಗಳ ಸರಮಾಲೆ ತಾಂಡವ ವಾಡುತ್ತಿದೆ. ಸಮಸ್ಯೆಗಳ ಪರಿಹಾರಕ್ಕೆಂದು ನಾಗರಿಕರು ಮತ್ತಷ್ಟು ಪರದಾಡುವಂತಾಗಿದ್ದು, ತಾಲೂಕು ಆಡಳಿತದ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ತಾಲೂಕಿನ ಕಸಬಾ ಕಂದಾಯ ವಿಭಾಗದ ಎರಡನೇ ವೃತ್ತಕ್ಕೆ ಒಳಪಡುವ ಹತ್ತಾರು ಹಳ್ಳಿಗಳು, ಸಾರ್ವಜನಿಕರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ವೃದ್ಧರು, ಕಂದಾಯ ಇಲಾಖೆ ಹಾಗೂ ಇನ್ನಿತರೆ ದಿನನಿತ್ಯದ ಕೆಲಸ ಕಾರ್ಯಗಳಿಗೆ ಸದರಿ ಕೇಂದ್ರಕ್ಕೆ ದಿನನಿತ್ಯ ಬಂದು ಹೋಗುತ್ತಿದ್ದಾರೆ. ಆದರೆ, ಕೇಂದ್ರದಲ್ಲಿನ ಹಲವು ಸಮಸ್ಯೆಗಳು ನಾಗರಿಕರ ಬೇಸರಕ್ಕೆ ಕಾರಣವಾಗಿದೆ.

ಮೌನಕ್ಕೆ ಶರಣಾದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು: ರೈತರು, ನಾಗರಿಕರಿಗೆ ಉತ್ತಮ ಸೇವೆ ದೊರೆಯಲೆಂಬ ಉದ್ದೇಶದಿಂದ ಅಟಲ್‌ ಜೀ ಜನಸ್ನೇಹಿ ಕೇಂದ್ರ ತೆರೆಯಲಾಗಿದೆ. ಆದರೆ, ಕೆ.ಹೊನ್ನಲಗೆರೆ ನಾಡಕಚೇರಿ ಯಲ್ಲಿ ಉದ್ದೇಶಿತ
ಕಾರ್ಯ ಮಾತ್ರ ಈಡೇರಿಲ್ಲ. ಅಧಿಕಾರಿಗಳಾಗಲೀ, ಚುನಾಯಿತ ಪ್ರತಿನಿಧಿಗಳಾಗಲೀ, ಇಲ್ಲಿನ ಸಮಸ್ಯೆಗಳು ಕಂಡೂ ಕಾಣದಂತೆ ವರ್ತಿಸುತ್ತಿರುವುದು ಆಡಳಿತ ವೈಫ‌ಲ್ಯಕ್ಕೆ ಹಿಡಿದ ಕೈಗನ್ನಡಿ.

ನಾಡಕಚೇರಿಗೆ ಮದ್ದೂರು ತಾಲೂಕು ಕೇಂದ್ರ ಸ್ಥಾನಕ್ಕೆ ಹೊಂದಿಕೊಂಡಿರುವ ಚನ್ನೇಗೌಡನ ದೊಡ್ಡಿ, ಚನ್ನಸಂದ್ರ, ನಗರಕರೆ, ದೇಶಹಳ್ಳಿ, ಸೋಮನಹಳ್ಳಿ, ಮೊಬ್ಬಳಗೆರೆ, ಹಾಗೂ ಉಪ್ಪಿನಕೆರೆ, ಸಾದೊಳಲು, ಅಜ್ಜಹಳ್ಳಿ, ಹುಲಿಗರೆಪುರ, ಮಾಲಗಾರನಹಳ್ಳಿ,
ಸೋಂಪುರ ಒಳಗೊಂಡಂತೆ ಹತ್ತಾರು ಹಳ್ಳಿಗಳು ಸೇರಿವೆ. ನಿತ್ಯದ ಕೆಲಸ ಕಾರ್ಯಗಳಿಗೆ ದೂರದ ಕೆ. ಹೊನ್ನಲಗೆರೆ ಗ್ರಾಮಕ್ಕೆ 20 ಕಿಲೋಮೀಟರ್‌ ಸುತ್ತಿ ಬಳಸಿ ಹೋಗಲೇಬೇಕಾದ ಅನಿವಾರ್ಯತೆ ಇದೆ.

ಕಟ್ಟಡ ನಿರ್ವಹಣೆ ಅಸಮರ್ಪಕ: ಗ್ರಾಪಂ ಕಚೇರಿ ಕಟ್ಟಡದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಸಬಾ 2ರ ನಾಡಕಚೇರಿ ಕೊಠಡಿಯು ಅವ್ಯವಸ್ಥೆಗಳಿಂದ ಕೂಡಿದೆ. ಮೇಲ್ಛಾವಣಿ ಪದರ ಕಳಚುತ್ತಿದ್ದು, ಸಿಬ್ಬಂದಿ ಜೀವಭಯದಲ್ಲೇ ಕೆಲಸ ಮಾಡಬೇಕಿದೆ.

ವಿದ್ಯುತ್‌ ಹೋದರೆ ಕಚೇರಿಯಲ್ಲಿ ಕೆಲಸವೇ ಸ್ಥಗಿತ
ಪವರ್‌ ಕಟ್‌ ಆದರೆ ಕಚೇರಿಯಲ್ಲಿನ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿವೆ. ಅವಶ್ಯವಿರುವ ಜನರೇಟರ್‌ ಅಥವಾ ಯುಪಿಎಸ್‌ ವ್ಯವಸ್ಥೆ ಕಚೇರಿಯಲ್ಲಿ ಮರೀಚಿಕೆಯಾಗಿದೆ. ಕೇಂದ್ರ ಆರಂಭದ ದಿನಗಳಲ್ಲಿ ಮದ್ದೂರು ಪಟ್ಟಣ ವ್ಯಾಪ್ತಿಗೆ ಹೊಂದಿಕೊಂಡಿರುವ ಗ್ರಾಮಗಳ ಸಾರ್ವಜನಿಕರು ತಮ್ಮ ತಕರಾರು ವ್ಯಕ್ತಪಡಿಸಿದ ವೇಳೆ ಬದಲಿ ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ದಿನಕಳೆದಂತೆ ಜಿಲ್ಲಾ ಹಾಗೂ ತಾಲೂಕು ಆಡಳಿತ ಬಳಿಕ ತನ್ನ ನಿರ್ಲಕ್ಷ್ಯ ಮುಂದುವರಿಸಿದ್ದು, ಸಮಸ್ಯೆಗಳು ಹಾಗೇ ಉಳಿದಿದ್ದು, ಪರಿಹಾರ ಮಾತ್ರ ಸಿಕ್ಕಿಲ್ಲ.

ಕೆ.ಹೊನ್ನಲಗೆರೆ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸಬಾ ಕಂದಾಯ ಎರಡನೇ ವಲಯದ ಅಟಲ್‌ ಜೀ ಜನಸ್ನೇಹಿ ಕೇಂದ್ರದ ಸ್ಥಳಾಂತರ ಸಂಬಂಧ ಈಗಾಗಲೇ ಕ್ರಮ ವಹಿಸಲಾಗಿದೆ. ನಾನೇ ಖುದ್ದು ಭೇಟಿ ನೀಡಿ ಅಲ್ಲಿನ
ವ್ಯವಸ್ಥೆಗಳನ್ನು ಪರಿಶೀಲಿಸಲಾಗಿದ್ದು ಶೀಘ್ರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
●ಕೆ.ಎಸ್‌.ಸೋಮಶೇಖರ್‌,
ತಹಶೀಲ್ದಾರ್‌, ಮದ್ದೂರ

*ಪುಟ್ಟಸ್ವಾಮಿ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.