JD(S) ; ಎಚ್.ಡಿ.ಕುಮಾರಸ್ವಾಮಿ ಅವರಿಗಿಂತ ಪತ್ನಿಯೇ ಸಿರಿವಂತೆ

37.48 ಕೋಟಿ ಮೌಲ್ಯದ ಕೃಷಿ ಭೂಮಿ.... ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ...

Team Udayavani, Apr 4, 2024, 8:08 PM IST

1-wwewqewq

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದ ಜತೆಗೆ ಸಲ್ಲಿಸಿದ ಅಫಿಡವಿಟ್ ಪ್ರಕಾರ ಪತ್ನಿ ಅನಿತಾ ಅವರ ಆಸ್ತಿ ಸೇರಿ ಒಟ್ಟು 217.21 ಕೋಟಿ ರೂಪಾಯಿ ಮೌಲ್ಯದ ಸಿರಿ ಸಂಪತ್ತು ಹೊಂದಿದ್ದಾರೆ.

ಮಾಜಿ ಶಾಸಕಿಯಾಗಿರುವ ಅನಿತಾ ಅವರು ಕುಮಾರಸ್ವಾಮಿ ಅವರಿಗಿಂತ ಶ್ರೀಮಂತರಾಗಿದ್ದು, ಒಟ್ಟು ಆಸ್ತಿ 154.39 ಕೋಟಿ ರೂ.ಆಸ್ತಿ ಮೌಲ್ಯ ಹೊಂದಿದ್ದು, ಕುಮಾರಸ್ವಾಮಿ ಅವರ ಒಟ್ಟು ಆಸ್ತಿ 54.65 ಕೋಟಿ ರೂ. ಆಗಿದೆ. HUF (ಹಿಂದೂ ಅವಿಭಜಿತ ಕುಟುಂಬ) ನಿಂದ ಅವರ ಹೆಸರಿನಲ್ಲಿ ಸುಮಾರು 8.17 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

65 ರ ಹರೆಯದ ಮಾಜಿ ಮುಖ್ಯಮಂತ್ರಿ, ಬಿಎಸ್ಸಿ ಪದವೀಧರರು, ಸಮಾಜ ಸೇವಕ, ರಾಜಕಾರಣಿ ಮತ್ತು ಕೃಷಿಕ ಎಂದು ಘೋಷಿಸಿಕೊಂಡಿದ್ದಾರೆ.

ಅನಿತಾ ಅವರು ವ್ಯಾಪಾರ ಮತ್ತು ಬಾಡಿಗೆ ಆದಾಯವನ್ನು ಹೊಂದಿದ್ದಾರೆ. ನಿಖಿಲ್ ಮತ್ತು ಕೋ ಹೆಸರಿನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವ್ಯಾಪಾರದಲ್ಲಿ ತೊಡಗಿರುವ ಉದ್ಯಮಿಯಾಗಿದ್ದು, ಕಸ್ತೂರಿ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆ.

ಕುಮಾರಸ್ವಾಮಿ ಅವರ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವರು ಯಾವುದೇ ಕಾರು ಹೊಂದಿಲ್ಲ, ಆದರೆ 12.55 ಲಕ್ಷ ಮೌಲ್ಯದ ಟ್ರ್ಯಾಕ್ಟರ್ ಹೊಂದಿದ್ದಾರೆ, ಆದರೆ ಅನಿತಾ ಅವರು ನಿಖಿಲ್ ಮತ್ತು ಕಂಪನಿಯಿಂದ 11.15 ಲಕ್ಷ ರೂ. ಮೌಲ್ಯದ ಕಾರು ಹೊಂದಿದ್ದಾರೆ.

ಕುಮಾರಸ್ವಾಮಿ ಬಳಿ 47.06 ಲಕ್ಷ ಮೌಲ್ಯದ ಚಿನ್ನ ಮತ್ತು 2.60 ಲಕ್ಷ ಮೌಲ್ಯದ ವಜ್ರ, ಅನಿತಾ ಬಳಿ ಕ್ರಮವಾಗಿ 2.41 ಕೋಟಿ ಮೌಲ್ಯದ ಚಿನ್ನ ಮತ್ತು 33.09 ಲಕ್ಷ ರೂ.ಮೌಲ್ಯದ ವಜ್ರವಿದೆ ಎಂದು ಘೋಷಿಸಿದ್ದಾರೆ. 37.48 ಕೋಟಿ ಮೌಲ್ಯದ ಕೃಷಿ ಭೂಮಿ ಮತ್ತು ಜೆಪಿ ನಗರ ಮೂರನೇ ಹಂತದಲ್ಲಿ 6.46 ಕೋಟಿ ರೂ.ಮೌಲ್ಯದ ನಿವಾಸ. ಎಚ್‌ಯುಎಫ್‌ನಿಂದ ವಾಣಿಜ್ಯ ಕಟ್ಟಡದಲ್ಲಿ ಕುಮಾರಸ್ವಾಮಿ ಅವರ ಪಾಲು ಸುಮಾರು 6.97 ಕೋಟಿ ರೂ. ಆಗಿದೆ. ಅನಿತಾ ಅವರು 28.38 ಕೋಟಿ ರೂ ಮೌಲ್ಯದ ಕೃಷಿ ಭೂಮಿಯನ್ನು ಹೊಂದಿದ್ದು, 35.69 ಕೋಟಿ ರೂ ಮೌಲ್ಯದ ಎರಡು ವಾಣಿಜ್ಯ ಕಟ್ಟಡಗಳನ್ನು ಹೊಂದಿದ್ದಾರೆ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.