Lok Sabha Election: ಲೋಕಸಮರ ಅಖಾಡದಲ್ಲಿ ಕೋಟಿ ಒಡೆಯರು


Team Udayavani, Apr 5, 2024, 6:55 AM IST

Lok Sabha Election: ಲೋಕಸಮರ ಅಖಾಡದಲ್ಲಿ ಕೋಟಿ ಒಡೆಯರು

ಬೆಂಗಳೂರು: ಮೊದಲನೇ ಹಂತದ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ಬಿಜೆಪಿ- ಜೆಡಿಎಸ್‌, ಕಾಂಗ್ರೆಸ್‌ ಸಹಿತ ಹಲವು ಪಕ್ಷಗಳ ಘಟಾನುಘಟಿಗಳು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನೂ ಘೋಷಿಸಿದ್ದಾರೆ.

ಈ ಪೈಕಿ  ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಾ| ಸಿ.ಎನ್‌.ಮಂಜುನಾಥ್‌  ಅವರಿಗಿಂತ ಅವರ ಪತ್ನಿಯರೇ ಹೆಚ್ಚು ಶ್ರೀಮಂತೆಯರಾಗಿದ್ದಾರೆ. ಆಸ್ತಿ ವಿವರ ಪಟ್ಟಿಯಲ್ಲಿ  ಡಾ| ಮಂಜುನಾಥ್‌ ತಮ್ಮಲ್ಲಿರುವ ವೈದ್ಯಕೀಯ ಪುಸ್ತಕಗಳನ್ನೂ ಸೇರಿಸಿರುವುದು ವಿಶೇಷ. ಇನ್ನು ಮಾಜಿ ಸಚಿವ ಗೋವಿಂದ ಕಾರಜೋಳ ಅವರು 2.96 ಕೋಟಿ ರೂ. ಒಡೆಯರಾದರೂ ಅವರ ಬಳಿ ಸ್ವಂತ ವಾಹನ ಇಲ್ಲ, ಸಾಲವೂ ಇಲ್ಲ.

ಕುಮಾರಸ್ವಾಮಿಗಿಂತ ಪತ್ನಿ ಅನಿತಾ ಶ್ರೀಮಂತೆ :

ಎಚ್‌.ಡಿ.ಕುಮಾರಸ್ವಾಮಿ ಅವರ ಚರ ಹಾಗೂ ಸ್ಥಿರಾಸ್ತಿ ಸೇರಿ  ಒಟ್ಟು    54.65 ಕೋಟಿ ರೂ. ಮೌಲ್ಯದ ಆಸ್ತಿ ಇದ್ದು, ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹೆಸರಲ್ಲಿ  154 ಕೋಟಿ. ರೂ. ಮೌಲ್ಯದ ಆಸ್ತಿ ಇದೆ. ಕುಮಾರಸ್ವಾಮಿ   4.64 ಕೋಟಿ ರೂ. ಮೌಲ್ಯದ ಕೃಷಿ ಭೂಮಿ, 1.43 ಕೋಟಿ ರೂ. ಮೌಲ್ಯದ ಮನೆ, ಕಟ್ಟಡ ಹೊಂದಿದ್ದಾರೆ. 10.38 ಲಕ್ಷ ರೂ. ನಗದು, 12.55 ಲಕ್ಷ ರೂ. ಮೌಲ್ಯದ ಟ್ರಾÂಕ್ಟರ್‌ ಇದೆ. ಯಾವುದೇ ಕಾರುಗಳನ್ನು ಹೊಂದಿಲ್ಲ.  19.12 ಕೋ. ರೂ. ಸಾಲ ಹೊಂದಿದ್ದಾರೆ. 2 ಕ್ರಿಮಿನಲ್‌, 1ಎನ್‌ಸಿಆರ್‌ ಸಹಿತ ಲೋಕಾಯುಕ್ತದಲ್ಲಿ 3 ಪ್ರಕರಣಗಳಿವೆ.  ಅನಿತಾ ಅವರ ಬಳಿ 76 ಲಕ್ಷ ರೂ. ನಗದು, 11.15 ಲಕ್ಷ ರೂ. ಮೌಲ್ಯದ ಟಯೋಟಾ ಇನೋವಾ ಕ್ರಿಸ್ಟಾ ಕಾರು ಇದೆ. 63.05 ಕೋಟಿ ರೂ. ಸಾಲ ತೋರಿಸಿದ್ದಾರೆ.

ಡಾ| ಸಿ.ಎನ್‌.ಮಂಜುನಾಥ್‌ಗಿಂತ ಪತ್ನಿಯೇ ಶ್ರೀಮಂತೆ:

ಬೆಂಗಳೂರು ಗ್ರಾ.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌ ಅವರ ಆಸ್ತಿ ಮೌಲ್ಯ 43.63 ಕೋಟಿ ರೂ.ಆಗಿದ್ದು, ಅವರ ಪತ್ನಿಯ ಆಸ್ತಿ ಮೌಲ್ಯ 52.66 ಕೋಟಿ ರೂ. ಆಗಿದೆ.  ಡಾ| ಮಂಜುನಾಥ್‌ಗೆ 3.74 ಕೋಟಿ ರೂ. ಸಾಲ, ಅನಸೂಯಾ   11.02 ಕೋಟಿ ರೂ. ಸಾಲ ಹಾಗೂ ಅವಿಭಕ್ತ ಕುಟುಂಬದ ಹೆಸರಿನಲ್ಲಿ 5.23 ಲಕ್ಷ ರೂ. ಸಾಲ ಇದೆ. ಡಾ| ಮಂಜುನಾಥ್‌ 6.98 ಕೋಟಿ ರೂ. ಚರಾಸ್ತಿ, 36.65 ಕೋಟಿ  ಸ್ಥಿರಾಸ್ತಿ ಹೊಂದಿದ್ದರೆ, ಪತ್ನಿ ಅನುಸೂಯ 17.36 ಕೋಟಿ ರೂ. ಚರಾಸ್ತಿ, 35.30 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಡಾ| ಮಂಜುನಾಥ್‌ ಅವರಲ್ಲಿ ಮರ್ಸಿಡೀಸ್‌ ಬೆಂಜ್‌ ಕಾರು, ಹುಂಡೈ ವರ್ಣಾ ಹಾಗೂ ಪತ್ನಿಯಲ್ಲಿ ಮಾರುತಿ ಸಿಯಾಜ್‌ ಕಾರು ಇದೆ.

ಆಸ್ತಿ ಪಟ್ಟಿಯಲ್ಲಿ ವೈದ್ಯಕೀಯ ಪುಸ್ತಕಗಳು!:

ಡಾ| ಮಂಜುನಾಥ್‌ ಅವರು ಸಲ್ಲಿಸಿರುವ ಆಸ್ತಿ ವಿವರದಲ್ಲಿ 100 ವೈದ್ಯಕೀಯ ವಿಷಯಕ್ಕೆ ಸಂಬಂಧಿಸಿದ ಪುಸ್ತಕ, 125 ಕನ್ನಡ ಸಾಹಿತ್ಯ ಕೃತಿಗಳನ್ನೂ ಘೋಷಿಸಿರುವುದು ವಿಶೇಷ. ಪತ್ನಿ ಅನಸೂಯಾ ಹೆಸರಿನಲ್ಲಿ 4 ವಾಸದ ಮನೆಗಳಿದ್ದು, ಡಾ|ಮಂಜುನಾಥ್‌ ಹೆಸರಿನಲ್ಲಿ  ಮನೆ ಇಲ್ಲ.

ಕೋಲಾರ ಅಭ್ಯರ್ಥಿ ಗೌತಮ್‌ 16.89 ಕೋ.ರೂ. ಆಸ್ತಿ ಒಡೆಯ:

ಕೋಲಾರ ಕಾಂಗ್ರೆಸ್‌ ಅಭ್ಯರ್ಥಿ  ಕೆ.ವಿ.ಗೌತಮ್‌ 16.89 ಕೋ. ರೂ.ಮೌಲ್ಯದ ಚರ ಹಾಗೂ ಸ್ಥಿರ ಆಸ್ತಿ ಹೊಂದಿದ್ದರೆ, ಅವರ ಪತ್ನಿ ಎಂ.ಪದ್ಮಶ್ರಿ 2.07 ಕೋ. ರೂ.ಮೌಲ್ಯದ ಚರಾಸ್ತಿ ಹೊಂದಿದ್ದಾರೆ.  ಗೌತಮ್‌ ವಿವಿಧ ಬ್ಯಾಂಕುಗಳಲ್ಲಿ 3.57 ಕೋ. ರೂ. ಸಾಲ ಮಾಡಿದ್ದಾರೆ. ಕೈಯಲ್ಲಿ 46 ಸಾವಿರ ರೂ.,  7.50 ಲಕ್ಷ ಮೌಲ್ಯದ 150 ಗ್ರಾಂ ಚಿನ್ನ  ಹೊಂದಿದ್ದಾರೆ. ಇವರ ಪತ್ನಿ ಬಳಿ  30 ಲಕ್ಷ ಮೌಲ್ಯದ 600 ಗ್ರಾಂ ಚಿನ್ನ,  17.32 ಲಕ್ಷ ರೂ. ಸಾಲ ಇದೆ. ಗೌತಮ್‌ ಮೇಲೆ ಬೆಂಗಳೂರು ತಲಘಟ್ಟಪುರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

 ಕೋಟಿ ಒಡೆಯ ಕಾರಜೋಳ ಬಳಿ ಸ್ವಂತ ವಾಹನ ಇಲ್ಲ :

ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ  ಆಸ್ತಿ ಮೌಲ್ಯ 2.96 ಕೋಟಿ ರೂ. ಆಗಿದ್ದು, ಪತ್ನಿ ಶಾಂತಾದೇವಿ  ಹೆಸರಿನಲ್ಲಿ 1.46 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಕಾರಜೋಳ ಕೈಯಲ್ಲಿ 9 ಲಕ್ಷ ರೂ. ನಗದು, ಪತ್ನಿಯಲ್ಲಿ 2.5 ಲ. ರೂ. ಇದೆ. ಕಾರಜೋಳ ಒಟ್ಟು ಚರಾಸ್ತಿ 1.26 ಕೋ. ರೂ., ಸ್ಥಿರಾಸ್ತಿ 1.62 ಕೋ. ರೂ. ಆಗಿದೆ. ಪತ್ನಿ ಹೆಸರಿನಲ್ಲಿ 79.13 ಲ. ರೂ. ಚರಾಸ್ತಿ, 65 ಲ. ರೂ. ಮೌಲ್ಯದ ಸ್ಥಿರಾಸ್ತಿ ಇದೆ.  ಇಬ್ಬರಲ್ಲೂ ಸ್ವಂತ ವಾಹನ, ಯಾವುದೇ ಅಪರಾಧ ಪ್ರಕರಣವೂ ಇಲ್ಲ. ಸಾಲವೂ ಇಲ್ಲ.

ಚಂದ್ರಪ್ಪ 1.04 ಕೋಟಿ ಮಾಲೀಕ, 89 ಲಕ್ಷ ರೂ. ಸಾಲಗಾರ :

ಚಿತ್ರದುರ್ಗ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ ಒಟ್ಟು ಆಸ್ತಿ ಮೌಲ್ಯ 1.04 ಕೋಟಿ ರೂ., ಪತ್ನಿಯ ಒಟ್ಟು ಆಸ್ತಿ ಮೌಲ್ಯ 84.90 ಲಕ್ಷ ರೂ., ಪುತ್ರನ ಆಸ್ತಿ 35.47 ಲಕ್ಷ ರೂ. ಸಹಿತ ಕುಟುಂಬದ ಒಟ್ಟು ಚರಾಸ್ತಿ 2.25 ಕೋಟಿ ರೂ. ಆಗಿದೆ. ಬಿ.ಎನ್‌.ಚಂದ್ರಪ್ಪ ಬಳಿ 15,028 ಚ. ಅಡಿಯ 53.47 ಲಕ್ಷ ರೂ. ಮೌಲ್ಯದ 6 ನಿವೇಶನ, 8.6 ಕೋ. ರೂ. ಮೌಲ್ಯದ 2 ವಾಣಿಜ್ಯ ಕಟ್ಟಡ, 30 ಲಕ್ಷ ರೂ. ಮೌಲ್ಯದ ಕಾರು ಹೊಂದಿದ್ದು, 89.71 ಲಕ್ಷ ರೂ. ಸಾಲವನ್ನೂ ಹೊಂದಿದ್ದಾರೆ. ಪತ್ನಿ ಕಾವ್ಯಾ ಹೆಸರಲ್ಲಿ 1.25 ಕೋ. ರೂ. ಮೌಲ್ಯದ ಮನೆ, ಪುತ್ರನ ಹೆಸರಲ್ಲಿ ವಾಹನ ಸಾಲ 9.48 ಲಕ್ಷ ರೂ. ಇದೆ. ಕುಟುಂಬದ ಚರ ಹಾಗೂ ಸ್ಥಿರಾಸ್ತಿ ಸೇರಿ 14.33 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

 

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.