ASHA; ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಆಶಾ ಕಾರ್ಯಕರ್ತೆಯರ ಚುನಾವಣ ಕಾರ್ಯ?


Team Udayavani, Apr 5, 2024, 6:45 AM IST

1-wqewqewq

ಬೆಂಗಳೂರು: ವಿಧಾನಸಭಾ ಚುನಾವಣೆ ಮುಗಿದು ಈಗ ಲೋಕಸಭಾ ಚುನಾವಣೆ ಬಂದರೂ ಆಶಾ ಕಾರ್ಯಕರ್ತೆಯರ ಗೋಳು ಮುಗಿದಿಲ್ಲ.ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದ್ದಕ್ಕೆ ಸೂಕ್ತ ಸಂಭಾವನೆ ಇನ್ನೂ ಆಶಾ ಕಾರ್ಯಕರ್ತೆಯರ ಕೈ ಸೇರಿಲ್ಲ.

ಈಗ ಲೋಕಸಭೆ ಚುನಾವಣೆ ಘೋಷಣೆ ಆಗಿದೆ. ಈಗಲೂ ಮತ್ತದೇ ಕೆಲಸ ಮಾಡಬೇಕಿದೆ. ಆದರೆ ಈ ಬಾರಿಯೂ ಸಂಭಾ ವನೆ ಸಿಗುವುದೋ ಇಲ್ಲವೋ ಎಂಬ ಗೊಂದಲ ಇವರದು. ರಾಜ್ಯವ್ಯಾಪಿ ಸುಮಾರು 43 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಇವರೆಲ್ಲರೂ ಆರೋಗ್ಯ ಮತ್ತು ಕುಟುಂಬ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಾರೆ. ಚುನಾವಣೆ ವೇಳೆ ಇವರು ಜಿಲ್ಲಾ ಚುನಾವಣಾಧಿಕಾರಿಗಳ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಲವು ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಮತದಾನ ಕೇಂದ್ರಗಳಲ್ಲಿ ಆರೋಗ್ಯ ಸಹಾಯಕರಾಗಿ ಕಾರ್ಯ ನಿರ್ವಹಿಸಿದ್ದರು.

ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದಂತೆ ಕೆಲಸ ಮಾಡಿದ್ದೇವೆ. ಮತಕೇಂದ್ರಕ್ಕೆ ಬರುವ ಹಿರಿಯ ಮತದಾರರಿಗೆ ನೆರವಾಗುವುದರ ಜತೆಗೆ ಬಿಸಿನ ಝಳಕ್ಕೆ ತೊಂದರೆ ಆದವರಿಗೆ ಒಆರ್‌ಎಸ್‌ ನೀಡುವ ಕಾರ್ಯ ಮಾಡಿದ್ದೇವೆ. ಆರೋಗ್ಯ ಸಮಸ್ಯೆ ಉಂಟಾದವರನ್ನು ಸಕಾಲದಲ್ಲಿ ಉಪಚರಿಸಿದ್ದೇವೆ. ಆದರೂ ನಮ್ಮ ಕೆಲಸ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎಂಬಂತಾಗಿದೆ ಎಂದು ಆಶಾ ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ.

ಪತ್ರ ಬರೆದರೂ ಪ್ರಯೋಜನವಿಲ್ಲ
ಚುನಾವಣೆ ಕಾರ್ಯ ನಿರ್ವಹಿಸಿದರೂ ಸೂಕ್ತ ಸಂಭಾವನೆ ಕೈ ಸೇರದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನಿಯೋಗ ಈಗಾಗಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ದೂರಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಗದಿಪಡಿಸುವ ಕೆಲಸವನ್ನು ಮಾತ್ರ ಆಶಾ ಕಾರ್ಯಕರ್ತೆಯರು ಮಾಡಬೇಕು. ಬೇರೆ ಕೆಲಸಗಳಿಗೆ ನಿಯೋಜನೆ ಮಾಡಿದಲ್ಲಿ ಜಿಲ್ಲಾಡಳಿತ ಸೂಕ್ತ ಸಂಭಾವನೆ ನೀಡಬೇಕು ಎಂಬ ಆದೇಶವಿದೆ. ಆದರೆ ಈಗ ತಾಂತ್ರಿಕ ನೆಪವೊಡ್ಡಿ ಚುನಾವಣ ಕಾರ್ಯದ ಸಂಭಾವನೆ ನೀಡಿಲ್ಲ. ಈ ಬಗ್ಗೆ ರಾಜ್ಯ ಮುಖ್ಯ ಚುನಾವಣ ಆಯುಕ್ತರನ್ನು ಕೂಡ ಭೇಟಿ ಮಾಡಿ ಮನವಿ ಮಾಡಲಾಗಿದೆ ಎಂದಿದ್ದಾರೆ.

ಗ್ರಾ.ಪಂ. ಚುನಾವಣೆ: 700 ರೂ. ಸಂಭಾವನೆ
ಈ ಹಿಂದೆ ಗ್ರಾ.ಪಂ. ಸಹಿತ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಆಶಾ ಕಾರ್ಯಕರ್ತೆ ಯರು ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸಿದಾಗ ತಲಾ 700ರೂ. ಸಂಭಾವನೆ ನೀಡಲಾಗಿತ್ತು. ಆದರೆ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಕಾರ್ಯವನ್ನು ಅವಗಣಿಸಲಾಗಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಚುನಾವಣ ಕೆಲಸಗಳಿಗೆ ಆಶಾ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಂಡರೆ ಊಟ-ತಿಂಡಿ, ಪ್ರಯಾಣ ಭತ್ತೆ ಮತ್ತು ತುಟ್ಟಿಭತ್ತೆ ಜತೆಗೆ ಸೂಕ್ತ ಸಂಭಾವನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್‌ ಯಾದಗಿರಿ ಒತ್ತಾಯಿಸಿದ್ದಾರೆ.

 ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.