Hunsur: ಅಕ್ರಮ ಸಾರಾಯಿ ಮಾರಾಟ ತಡೆಗಟ್ಟುವಲ್ಲಿ ಅಬಕಾರಿ ಅಧಿಕಾರಿಗಳು ವಿಫಲ: ದ.ಸಂ.ಸ.


Team Udayavani, Apr 5, 2024, 12:34 PM IST

5-hunsur

ಹುಣಸೂರು: ತಾಲೂಕಿನ ಹಲವಾರು ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದರೂ ತಡೆಗಟ್ಟುವಲ್ಲಿ ಅಬಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ತಾಲೂಕು ದ.ಸಂ.ಸ ಆರೋಪಿಸಿದೆ.

ದ.ಸಂ.ಸ. ದ ನಿಂಗರಾಜ್‌ಮಲ್ಲಾಡಿ ಮತ್ತಿತರರು ಜಿಲ್ಲಾಕಾರಿಗಳಿಗೆ ನೀಡಿರುವ ದೂರಿನಲ್ಲಿ ತಾಲೂಕಿನ ಕಟ್ಟೆಮಳಲವಾಡಿ, ಯಶೋಧರಪುರ, ಮಂಗಳೂರುಮಾಳ, ಅಂಬೇಡ್ಕರ್‌ನಗರ, ರತ್ನಪುರಿ, ದೊಡ್ಡಹೆಜ್ಜೂರು, ನಾಗಾಪುರ ಹಾಡಿ, ನೇರಳಕುಪ್ಪೆ, ಶೆಟ್ಟಹಳ್ಳಿ ಹಾಡಿ, ಚಂದನಗಿರಿ ಹಾಡಿ, ಪಕ್ಷಿರಾಜಪುರ ಮುಂತಾದ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದರೂ ಅಬಕಾರಿ ಅಧಿಕಾರಿಗಳು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆಂದು ದೂರಿದ್ದಾರೆ.

ಈ ಬಗ್ಗೆ ಹಲವಾರು ಸಭೆಗಳಲ್ಲಿ ಅಕ್ರಮ ಸಾರಾಯಿ ಮಾರಾಟ ತಡೆಗಟ್ಟುವಂತೆ ಪ್ರಸ್ತಾಪಿಸಿದರೂ ಸಹ ಅಬಕಾರಿ ಅಧಿಕಾರಿಗಳು ನೆಪ ಮಾತ್ರಕ್ಕೆ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳೇ ಪರೋಕ್ಷವಾಗಿ ಬಾರ್ ಮಾಲೀಕರ ಜೊತೆ ಹೊಂದಾಣಿಕೆ ಮಾಡಿಕೊಂಡು ಅಕ್ರಮ ಸಾರಾಯಿ ಮಾರಾಟ ಮಾಡಲು ಸಹಕರಿಸುವಂತಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿಗಳು ವಾಸ ಮಾಡುತ್ತಿರುವ ಗ್ರಾಮಗಳನ್ನು ಗುರಿಯಾಗಿಟ್ಟುಕೊಂಡು ಅಕ್ರಮ ಸಾರಾಯಿ ಮಾರಾಟ ಮುಂಜಾನೆಯಿಂದಲೇ ಆರಂಭವಾಗುತ್ತದೆ. ಕಟ್ಟೆಮಳಲವಾಡಿ ದೊಡ್ಡ ಗ್ರಾಮದಲ್ಲೇ ಸುಮಾರು 20 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ ಮತ್ತು ಗಾಂಜಾ ಮಾರಾಟವಾಗುತ್ತಿದೆ ಎಂಬ ಕುರಿತು ಮಾಹಿತಿ ನೀಡಿದರು.

ಇದರಿಂದ ಗ್ರಾಮದ ಯುವಕರು, ಬಡ ಜನರು ಆರ್ಥಿಕವಾಗಿ ದಿವಾಳಿ ಹೊಂದಿ ಕೆಲ ಕುಟುಂಬಗಳು ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡು ಬೀದಿಗೆ ಬೀಳುತ್ತಿವೆ. ಅಕ್ರಮ ಸಾರಾಯಿ ಮಾರಾಟದ ಜೊತೆಗೆ ಮಾದಕ ವಸ್ತುವಾದ ಗಾಂಜಾವು ಸಹ ಸರಬರಾಜಾಗುತ್ತಿದೆ. ಇದರಿಂದ ಯುವಜನತೆ ಮಾದಕ ವಸ್ತುಗಳನ್ನು ಸೇವನೆ ಮಾಡಿ ತಮ್ಮ ಬದುಕನ್ನೇ ನಾಶ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

ಅಬಕಾರಿ ಅಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಂದೆಯನ್ನು ನಿಲ್ಲಿಸಬೇಕೆಂದು ದ.ಸಂ.ಸ. ದ ದೇವೇಂದ್ರ ಕುಳವಾಡಿ, ಬಲ್ಲೇನಹಳ್ಳಿಕೆಂಪರಾಜು, ಮುಖಂಡರಾದ ಶೇಖರ್‌ಯಶೋಧರಪುರ, ಮುರುಗೇಶ, ಮಾದು, ದಲಿತ ಮಹಿಳಾ ಒಕ್ಕೂಟದ ಲಕ್ಷ್ಮೀ, ಪಾರ್ವತಮ್ಮ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.