Koppal; ಪಕ್ಷ ಹೇಳಿದಂತೆ ಈಶ್ವರಪ್ಪ ನಡೆದರೆ ಕಾಂತೇಶಗೆ ಭವಿಷ್ಯವಿದೆ: ದೊಡ್ಡನಗೌಡ ಪಾಟೀಲ್
Team Udayavani, Apr 5, 2024, 2:51 PM IST
ಕೊಪ್ಪಳ: ಕೆ.ಎಸ್.ಈಶ್ವರಪ್ಪ ಅವರು ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಬಗ್ಗೆ ಟೀಕೆ ಮಾಡುವುದು ಸಲ್ಲದು ಎಂದು ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಂದ ಕುಟುಂಬ ರಾಜಕಾರಣ ಎಂದು ಆರೋಪ ಮಾಡಿದ್ದಾರೆ. ಈಶ್ವರಪ್ಪ ಅವರ ಈ ಹೇಳಿಕೆಯನ್ನು ನಾನು ಖಂಡಿಸುವೆ. ಯಡಿಯೂರಪ್ಪ ಅವರು ಇಳಿ ವಯಸ್ಸಿನಲ್ಲೂ ಪ್ರಚಾರ ನಡೆಸಿದ್ದಾರೆ. ಆದರೆ ಅಪ್ಪ ಮಕ್ಕಳ ಹಾಗೂ ಕುಟುಂಬ ರಾಜಕಾರಣ ಎಂಬ ಆರೋಪ ಸರಿಯಲ್ಲ ಎಂದರು.
ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರು ಪಕ್ಷ ಕಟ್ಟಿ ಬೆಳೆಸಿದವರು. ಈಶ್ವರಪ್ಪ ಅವರು ಕಳೆದ ಬಾರಿ ಸಚಿವರಾಗಿದ್ದರು. ಆಗಲೂ ಕುರುಬ ಸಮಾಜಕ್ಕೆ ಲೋಕಸಭಾ ಟಿಕೆಟ್ ಕೊಟ್ಟಿಲ್ಲ. ಆಗ ಈಶ್ವರಪ್ಪ ಅವರು ಈ ಬಗ್ಗೆ ಮಾತನಾಡಲಿಲ್ಲ. ಈ ಹಿಂದೆ ಈಶ್ವರಪ್ಪ ಅವರು ರಾಯಣ್ಣ ಬ್ರಿಗೇಡ್ ಮಾಡಿ ಟೀಕೆ ಮಾಡಿದ್ದರು. ಈಶ್ವರಪ್ಪ ಅವರಿಗೆ ಈ ಹಿಂದೆ ಸಚಿವ ಹಾಗೂ ಡಿಸಿಎಂ ಸ್ಥಾನ ಕೊಟ್ಟಿದೆ ಎಂದರು.
ಕುರುಬ ಸಮಾಜದ ಬಗ್ಗೆ ಈವರೆಗೂ ಈಶ್ವರಪ್ಪ ಅವರು ಮಾತನಾಡಿಲ್ಲ. ಮುಂದಿನ ದಿನದಲ್ಲಿ ಈಶ್ವರಪ್ಪ ಹೇಳಿಕೆ ಪರಿಣಾಮವಾಗಲ್ಲ. ತಮ್ಮ ಮಗನಿಗೆ ಟಿಕೆಟ್ ಸಿಗಲಿಲ್ಲ ಎಂದು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಯಡಿಯೂರಪ್ಪ ಅವರ ಜೊತೆ ನಾವು ಇದ್ದೇವೆ. ಅವರಿಗೆ ಚುನಾವಣೆಯಿಂದ ಹಿಂದೆ ಸರಿಯಿರಿ ಎಂದು ಸಂಘ, ಸಂಘಟನೆ ಹೇಳಿದೆ. ಈಗಲೂ ಎಂಪಿ ಟಿಕೆಟ್ ವಿಚಾರ, ಹೈಕಮಾಂಡ್ ತೀರ್ಮಾನ ಮಾಡಿದೆ. ಟಿಕೆಟ್ ಕೇಳಲಿ ಆದರೆ ಬೈಯುವುದು ಸರಿಯಲ್ಲ ಎಂದರು.
ಇದೇ ರೀತಿ ಮಾಡಿದರೆ ಮುಂದೆ ಪಕ್ಷ ಅವರ ಮೇಲೆ ಕ್ರಮ ಕೈಗೊಳ್ಳಲಿದೆ. ಪಕ್ಷ ಹೇಳಿದಂತೆ ಈಶ್ವರಪ್ಪ ಅವರು ನಡೆದರೆ ಕಾಂತೇಶಗೆ ಒಳ್ಳೆಯ ಭವಿಷ್ಯವಿದೆ. ಮುಂದೆಯೂ ಪಕ್ಷದಲ್ಲಿ ಸಮಾಜಕ್ಕೆ ಸ್ಥಾನಮಾನ ದೊರೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಂಎಲ್ಸಿ ಹೇಮಲತಾ ನಾಯಕ್ಮ, ಬಿಜೆಪಿ ಮುಖಂಡ ಹೇಶ ಹಾದಿಮನಿ, ಡಿ ಮಲ್ಲಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.