Mudalagi ಬಳಿ ಸೇತುವೆ ಮೇಲೆ ನದಿ ನೀರು ಹರಿದು ರಸ್ತೆ ಸಂಚಾರ ಸ್ಥಗಿತ!
Team Udayavani, Apr 5, 2024, 8:48 PM IST
ಬೆಳಗಾವಿ: ಎಲ್ಲಿಯೂ ಮಳೆ ಇಲ್ಲ. ನೀರಿಗಾಗಿ ಹಾಹಾಕಾರ ಇದೆ. ಹೀಗಿರುವಾಗ ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿ ಸೇತುವೆ ಮೇಲೆ ನದಿ ನೀರು ಹರಿದು ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಅಚ್ಚರಿ ಪಡಬೇಡಿ. ಇಲ್ಲಿ ಮಳೆಯಾಗಿಲ್ಲ.ಬದಲಿಗೆ ಕುಡಿಯುವ ನೀರಿಗಾಗಿ ಜಲಾಶಯದಿಂದ ನದಿಗೆ ಬಿಟ್ಟ ನೀರಿನಿಂದ ಈ ಅವಾಂತರ ಆಗಿದೆ. ಹಿಡಕಲ್ ಜಲಾಶಯದಿಂದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಜನರಿಗಾಗಿ ಕುಡಿಯುವ ನೀರಿನ ಉದ್ದೇಶದಿಂದ ಘಟಪ್ರಭಾ ನದಿಗೆ ನೀರು ಬಿಡಲಾಗಿದೆ.
ಬೇಸಿಗೆ ಹಿನ್ನಲೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರನ್ನು ಬೀಡುಗಡೆ ಮಾಡಲಾಗಿದೆ. ಇದರಿಂದ ಶುಕ್ರವಾರದಂದು ಮೂಡಲಗಿ ತಾಲೂಕಿನ ಸುಣಧೋಳಿ-ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆಯು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
ಸುಣಧೋಳಿಯ ಬಳಿಯ ಘಟಪ್ರಭಾ ನದಿಯ ಸೇತುವೆಗೆ ಗೇಟ್ಗಳನ್ನು ಹಾಕಿರುವುದರಿಂದ ಸೇತುವೆ ಮೇಲೆ ನೀರು ಹರಿದು ಬರುತ್ತಿದೆ. ಇದರಿಂದ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಹಶೀಲ್ದಾರ್ ಬಿ.ಎಸ್ ಖಡಕಬಾವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.