Kushtagi: ಕಸದ ರಾಶಿಗೆ ಬೆಂಕಿ ಹಾಕಿದ ಕಿಡಿಗೇಡಿಗಳು; ಸುಟ್ಟು ಹೋದ ಇಲಾಖಾ ವಾಹನ
Team Udayavani, Apr 6, 2024, 11:17 AM IST
ಕುಷ್ಟಗಿ: ಇಲ್ಲಿನ ಲೋಕೋಪಯೋಗಿ ಕಚೇರಿ ಆವರಣದಲ್ಲಿ ಕಸಕ್ಕೆ ಬೆಂಕಿ ತಗುಲಿ ಗುಜರಿ ಸೇರಬೇಕಿದ್ದ ಹಳೆಯ ವಾಹನಗಳು ದಹಿಸಿದ ಘಟನೆ ಏ.6ರ ಶನಿವಾರ ಬೆಳಗ್ಗೆ ನಡೆದಿದೆ.
ಇಲ್ಲಿನ ಮಾರುತಿ ವೃತ್ತದ ಬಳಿ ಇರುವ ತಾಲೂಕು ಪಂಚಾಯತಿ ವಾಣಿಜ್ಯ ಮಳಿಗೆ ಪಕ್ಕದಲ್ಲಿರುವ ಲೋಕೋಪಯೋಗಿ ಕಚೇರಿ ಆವರಣದಲ್ಲಿ ಇಲಾಖೆಯ ಹಳೆಯ ರೋಲರ್, ಟಿಪ್ಪರ್, ಜೀಪ್ ವಾಹನಗಳಿದ್ದವು.
ಈ ವಾಹನದ ಅಡಿಯಲ್ಲಿ ಕಸ ಹಾಕಲಾಗಿತ್ತು. ಕಸ ಸಕಾಲದಲ್ಲಿ ವಿಲೇವಾರಿ ಮಾಡದೇ ಕಸದ ರಾಶಿಗೆ ಕಿಡಗೇಡಿಗಳು ಬೆಂಕಿ ಹಚ್ಚಿದ್ದರಿಂದ ವಾಹನ ಸಮೇತ ಸುಟ್ಟು ಕರಕಲಾಗಿದೆ.
ಬೆಂಕಿಯ ತೀವ್ರತೆಗೆ ಕಪ್ಪು ಹೊಗೆ ದಟ್ಟವಾಗಿ ಹರಡಿದ್ದರಿಂದ ಸಾರ್ವಜನಿರಲ್ಲಿ ಅತಂಕ ನಿರ್ಮಾಣವಾಗಿತ್ತು. ಅಲ್ಲದೇ ವಿದ್ಯುತ್ ತಂತಿಗೂ ಬೆಂಕಿ ಆವರಿಸಿತ್ತು. ಅಷ್ಟೋತ್ತಿಗೆ ಜೆಸ್ಕಾಂ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಯಾವುದೇ ಅವಘಡ ನಡೆಯಲಿಲ್ಲ.
ಅಗ್ನಿಶಾಮಕ ವಾಹನ ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದೆ. ಗುಜರಿ ಸೇರಬೇಕಿದ್ದ ಲೋಕೋಪಯೋಗಿ ಇಲಾಖೆಯ ವಾಹನಗಳು ಸುಟ್ಟು ಕರಕಲಾಗಿದೆ.
ಬೆಂಕಿಯ ತೀವ್ರತೆಗೆ ತಾಲೂಕು ಪಂಚಾಯತಿ ವಾಣಿಜ್ಯ ಮಳಿಗೆಗಳಿಗೆ ಬಿಸಿ ತಾಗಿದ್ದು ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ಠಾಣೆಯ ಅಧಿಕಾರಿ ರಾಜು ನರಸಪ್ಪ ಅವರು ಕಸಕ್ಕೆ ಬೆಂಕಿ ತಗುಲಿದ್ದು, ಹಳೆಯ ವಾಹನ ಟೈರ್ ಸುಟ್ಟಿವೆ. ಯಾವುದೇ ಅನಾಹುತ ಆಗಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.