Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ


Team Udayavani, Apr 6, 2024, 12:34 PM IST

7-rbi

ಭಾರತೀಯ ರಿಸರ್ವ್‌ ಬ್ಯಾಂಕ್‌ನ ಪ್ರಸಕ್ತ ಆರ್ಥಿಕ ಸಾಲಿನ ಮೊದಲ ಹಣ ಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದು, ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಸತತ ಏಳನೇ ಬಾರಿಗೆ ಆರ್‌ಬಿಐ ರೆಪೊ ದರವನ್ನು ಶೇ. 6.5ರಲ್ಲಿಯೇ ಮುಂದುವರಿಸುವ ಮೂಲಕ ಎಚ್ಚರಿಕೆಯ ನಡೆಯನ್ನು ಇರಿಸಿದೆ. 2023ರ ಫೆಬ್ರವರಿಯಲ್ಲಿ ಆರ್‌ ಬಿಐ ರೆಪೊ ದರದಲ್ಲಿ ಬದಲಾವಣೆ ಮಾಡಿತ್ತು.

ಚಿಲ್ಲರೆ ಹಣದುಬ್ಬರವನ್ನು ಶೇ. 4ರ ಗಡಿಯಲ್ಲಿರಿಸುವ ಗುರಿಯನ್ನು ಆರ್‌ ಬಿಐ ಹಾಕಿಕೊಂಡಿದ್ದು ಫೆಬ್ರವರಿಯಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಹಣದುಬ್ಬರ ದರ ಶೇ. 5.1ರಷ್ಟಾಗಿತ್ತು. ಇನ್ನು ಜೂನ್‌ವರೆಗೆ ದೇಶದೆಲ್ಲೆಡೆ ತಾಪಮಾನ ಅಧಿಕವಾಗಿರುವುದರಿಂದ ತರಕಾರಿ ಸಹಿತ ಆಹಾರ ಪದಾರ್ಥಗಳ ಬೆಲೆ ಏರುಗತಿಯಲ್ಲಿರುವ ಸಾಧ್ಯತೆಗಳು ದಟ್ಟವಾಗಿರುವುದು ಮತ್ತು ಜಾಗತಿಕ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಆರ್‌ಬಿಐನ ಹಣ ಕಾಸು ನೀತಿ ಪರಾಮರ್ಶೆ ಸಮಿತಿ(ಎಂಪಿಸಿ) ಈ ನಿರ್ಧಾರವನ್ನು ಕೈಗೊಂಡಿದೆ. ತನ್ಮೂಲಕ ದೇಶದ ಆರ್ಥಿಕ ಪ್ರಗತಿ ಮತ್ತು ಸ್ಥಿರತೆಗೆ ಹೆಚ್ಚಿನ ಒತ್ತನ್ನು ನೀಡಿದೆ.

ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಆರ್ಥಿಕತೆ ಪ್ರಗತಿ ಪಥದಲ್ಲಿ ಮುನ್ನಡೆದಿದೆಯಾದರೂ ಸದ್ಯದ ಸ್ಥಿತಿಯಲ್ಲಿ ಬಡ್ಡಿ ದರಗಳಲ್ಲಿ ಬದಲಾವಣೆ ಮಾಡಿದಲ್ಲಿ ಆರ್ಥಿಕ ಪ್ರಗತಿಯ ನಾಗಾಲೋಟಕ್ಕೆ ತಡೆಯಾಗಿ ಪರಿಣಮಿಸುವ ಸಾಧ್ಯತೆಗಳಿವೆ ಎಂಬ ತೀರ್ಮಾನಕ್ಕೆ ಎಂಪಿಸಿ ಬಂದಿದೆ. ಆರ್ಥಿಕ ತಜ್ಞರು ಮತ್ತು ಮಾರುಕಟ್ಟೆ ವಿಶ್ಲೇಷಕರ ನಿರೀಕ್ಷೆ ಕೂಡ ಇದೇ ಆಗಿತ್ತು.

ಆರ್‌ಬಿಐ ಗವರ್ನರ್‌ ಈ ನಿರ್ಧಾರ ಪ್ರಕಟಿಸಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದ್ದು, ರೂಪಾಯಿ ಮೌಲ್ಯವೂ ಏರಿಕೆಯಾಗಿದೆ. ದೇಶದ ಆರ್ಥಿಕ ವ್ಯವಸ್ಥೆ, ಪ್ರಗತಿ, ಎಲ್ಲ ಕ್ಷೇತ್ರಗಳಲ್ಲೂ ಕಂಡುಬರುತ್ತಿರುವ ಚೇತರಿಕೆಯ ವಾತಾವರಣ, ಹಣದುಬ್ಬರ ನಿಯಂತ್ರಣದಲ್ಲಿರುವುದು ಸಹಿತ ಎಲ್ಲ ಸಕಾರಾತ್ಮಕ ಬೆಳವಣಿಗೆಗಳ ಕಾರಣದಿಂದಾಗಿ ಆರ್‌ಬಿಐ ಈ ಬಾರಿಯಾದರೂ ರೆಪೊ ದರದಲ್ಲಿ ಒಂದಿಷ್ಟು ಇಳಿಕೆ ಮಾಡುವ ಮೂಲಕ ಸಾಲಗಾರರಿಗೆ ಅದರಲ್ಲೂ ಮುಖ್ಯವಾಗಿ ಗೃಹ ಸಾಲಗಾರರ ನೆರವಿಗೆ ಬಂದೀತು ಎಂಬ ನಿರೀಕ್ಷೆ ಮತ್ತೆ ಹುಸಿಯಾಗಿದೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದಾಗಿ ಸಾಲದ ಕಂತು ಮತ್ತು ಬಡ್ಡಿದರದಲ್ಲಿ ಯಾವುದೇ ಬದಲಾವಣೆಯಾಗದು.

ಏತನ್ಮಧ್ಯೆ ಎಂಪಿಸಿ ಹಾಲಿ ಸಭೆಯಲ್ಲಿ ದೇಶೀಯ ಮತ್ತು ಜಾಗತಿಕ ಆರ್ಥಿಕ ಪರಿ ಸ್ಥಿತಿ ಕುರಿತಂತೆಯೂ ಚರ್ಚೆ ನಡೆಸಿದ್ದು, ಆ ಬಳಿಕವೇ ಈ ಎಚ್ಚರಿಕೆಯ ಮತ್ತು ಚಾಣಾಕ್ಷ ನಡೆಯನ್ನು ಇರಿಸಿದೆ. ಇದೇ ವೇಳೆ ಆರ್‌ಬಿಐ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಡಿಜಿಟಲ್‌ ವ್ಯವಹಾರಕ್ಕೆ ಇನ್ನಷ್ಟು ಉತ್ತೇಜನ ನೀಡಲು ಮುಂದಾಗಿದೆ.

ಚಿಲ್ಲರೆ ನೇರ ಹೂಡಿಕೆದಾರರಿಗೆ ಹೊಸ ಮೊಬೈಲ್‌ ಆ್ಯಪ್‌, ನಗದು ಠೇವಣಿಗಾಗಿ ಯುಪಿಐ ಬಳಕೆ ಮತ್ತಿತರ ಯೋಜನೆಗಳನ್ನು ಪ್ರಕಟಿಸಿದೆ. ಒಟ್ಟಿನಲ್ಲಿ ಆರ್‌ಬಿಐ ದೇಶ ಮತ್ತು ಜಾಗತಿಕ ಆರ್ಥಿಕ ದಿಗ್ಗಜ ರಾಷ್ಟ್ರಗಳ ಹಣಕಾಸು ವ್ಯವಸ್ಥೆ, ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಯಾವುದೇ ದಿಢೀರ್‌ ಲಾಭದಾಯಕವಾದ ನಿರ್ಧಾರಕ್ಕೆ ಶರಣಾಗದೆ ದೇಶದ ಆರ್ಥಿಕ ಭವಿಷ್ಯವನ್ನು ಗಮನದಲ್ಲಿರಿಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಮುಂಗಾರು ಋತುವಿನಲ್ಲಿನ ವಿದ್ಯಮಾನಗಳನ್ನು ಅವಲೋಕಿಸಿ ಆಗಸ್ಟ್‌ ವೇಳೆಗಷ್ಟೇ ರೆಪೊ ದರದಲ್ಲಿ ಬದಲಾವಣೆಯನ್ನು ಮಾಡಲು ಚಿಂತನೆ ನಡೆಸಿರುವುದು ಸುಸ್ಪಷ್ಟ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

GST Revise: ಆರೋಗ್ಯ ವಿಮೆ ಪ್ರಯೋಜನ ಜನಸಾಮಾನ್ಯರಿಗೂ ಕೈಗೆಟುಕಲಿ

Raichuru-Manvi

Raichuru Accident: ಶಾಲಾ ಬಸ್‌: ಬೇಜವಾಬ್ದಾರಿ ಚಾಲನೆಗೆ ಕಠಿನ ಕ್ರಮ ಅಗತ್ಯ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

CBi

Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Film

South India Film Industry: ಸಿನೆಮಾ ರಂಗ ಕಳಂಕ ಮುಕ್ತವಾಗಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.