Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ


Team Udayavani, Apr 6, 2024, 12:34 PM IST

7-rbi

ಭಾರತೀಯ ರಿಸರ್ವ್‌ ಬ್ಯಾಂಕ್‌ನ ಪ್ರಸಕ್ತ ಆರ್ಥಿಕ ಸಾಲಿನ ಮೊದಲ ಹಣ ಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದು, ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಸತತ ಏಳನೇ ಬಾರಿಗೆ ಆರ್‌ಬಿಐ ರೆಪೊ ದರವನ್ನು ಶೇ. 6.5ರಲ್ಲಿಯೇ ಮುಂದುವರಿಸುವ ಮೂಲಕ ಎಚ್ಚರಿಕೆಯ ನಡೆಯನ್ನು ಇರಿಸಿದೆ. 2023ರ ಫೆಬ್ರವರಿಯಲ್ಲಿ ಆರ್‌ ಬಿಐ ರೆಪೊ ದರದಲ್ಲಿ ಬದಲಾವಣೆ ಮಾಡಿತ್ತು.

ಚಿಲ್ಲರೆ ಹಣದುಬ್ಬರವನ್ನು ಶೇ. 4ರ ಗಡಿಯಲ್ಲಿರಿಸುವ ಗುರಿಯನ್ನು ಆರ್‌ ಬಿಐ ಹಾಕಿಕೊಂಡಿದ್ದು ಫೆಬ್ರವರಿಯಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಹಣದುಬ್ಬರ ದರ ಶೇ. 5.1ರಷ್ಟಾಗಿತ್ತು. ಇನ್ನು ಜೂನ್‌ವರೆಗೆ ದೇಶದೆಲ್ಲೆಡೆ ತಾಪಮಾನ ಅಧಿಕವಾಗಿರುವುದರಿಂದ ತರಕಾರಿ ಸಹಿತ ಆಹಾರ ಪದಾರ್ಥಗಳ ಬೆಲೆ ಏರುಗತಿಯಲ್ಲಿರುವ ಸಾಧ್ಯತೆಗಳು ದಟ್ಟವಾಗಿರುವುದು ಮತ್ತು ಜಾಗತಿಕ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಆರ್‌ಬಿಐನ ಹಣ ಕಾಸು ನೀತಿ ಪರಾಮರ್ಶೆ ಸಮಿತಿ(ಎಂಪಿಸಿ) ಈ ನಿರ್ಧಾರವನ್ನು ಕೈಗೊಂಡಿದೆ. ತನ್ಮೂಲಕ ದೇಶದ ಆರ್ಥಿಕ ಪ್ರಗತಿ ಮತ್ತು ಸ್ಥಿರತೆಗೆ ಹೆಚ್ಚಿನ ಒತ್ತನ್ನು ನೀಡಿದೆ.

ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಆರ್ಥಿಕತೆ ಪ್ರಗತಿ ಪಥದಲ್ಲಿ ಮುನ್ನಡೆದಿದೆಯಾದರೂ ಸದ್ಯದ ಸ್ಥಿತಿಯಲ್ಲಿ ಬಡ್ಡಿ ದರಗಳಲ್ಲಿ ಬದಲಾವಣೆ ಮಾಡಿದಲ್ಲಿ ಆರ್ಥಿಕ ಪ್ರಗತಿಯ ನಾಗಾಲೋಟಕ್ಕೆ ತಡೆಯಾಗಿ ಪರಿಣಮಿಸುವ ಸಾಧ್ಯತೆಗಳಿವೆ ಎಂಬ ತೀರ್ಮಾನಕ್ಕೆ ಎಂಪಿಸಿ ಬಂದಿದೆ. ಆರ್ಥಿಕ ತಜ್ಞರು ಮತ್ತು ಮಾರುಕಟ್ಟೆ ವಿಶ್ಲೇಷಕರ ನಿರೀಕ್ಷೆ ಕೂಡ ಇದೇ ಆಗಿತ್ತು.

ಆರ್‌ಬಿಐ ಗವರ್ನರ್‌ ಈ ನಿರ್ಧಾರ ಪ್ರಕಟಿಸಿದ ಬಳಿಕ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದ್ದು, ರೂಪಾಯಿ ಮೌಲ್ಯವೂ ಏರಿಕೆಯಾಗಿದೆ. ದೇಶದ ಆರ್ಥಿಕ ವ್ಯವಸ್ಥೆ, ಪ್ರಗತಿ, ಎಲ್ಲ ಕ್ಷೇತ್ರಗಳಲ್ಲೂ ಕಂಡುಬರುತ್ತಿರುವ ಚೇತರಿಕೆಯ ವಾತಾವರಣ, ಹಣದುಬ್ಬರ ನಿಯಂತ್ರಣದಲ್ಲಿರುವುದು ಸಹಿತ ಎಲ್ಲ ಸಕಾರಾತ್ಮಕ ಬೆಳವಣಿಗೆಗಳ ಕಾರಣದಿಂದಾಗಿ ಆರ್‌ಬಿಐ ಈ ಬಾರಿಯಾದರೂ ರೆಪೊ ದರದಲ್ಲಿ ಒಂದಿಷ್ಟು ಇಳಿಕೆ ಮಾಡುವ ಮೂಲಕ ಸಾಲಗಾರರಿಗೆ ಅದರಲ್ಲೂ ಮುಖ್ಯವಾಗಿ ಗೃಹ ಸಾಲಗಾರರ ನೆರವಿಗೆ ಬಂದೀತು ಎಂಬ ನಿರೀಕ್ಷೆ ಮತ್ತೆ ಹುಸಿಯಾಗಿದೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದಾಗಿ ಸಾಲದ ಕಂತು ಮತ್ತು ಬಡ್ಡಿದರದಲ್ಲಿ ಯಾವುದೇ ಬದಲಾವಣೆಯಾಗದು.

ಏತನ್ಮಧ್ಯೆ ಎಂಪಿಸಿ ಹಾಲಿ ಸಭೆಯಲ್ಲಿ ದೇಶೀಯ ಮತ್ತು ಜಾಗತಿಕ ಆರ್ಥಿಕ ಪರಿ ಸ್ಥಿತಿ ಕುರಿತಂತೆಯೂ ಚರ್ಚೆ ನಡೆಸಿದ್ದು, ಆ ಬಳಿಕವೇ ಈ ಎಚ್ಚರಿಕೆಯ ಮತ್ತು ಚಾಣಾಕ್ಷ ನಡೆಯನ್ನು ಇರಿಸಿದೆ. ಇದೇ ವೇಳೆ ಆರ್‌ಬಿಐ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಡಿಜಿಟಲ್‌ ವ್ಯವಹಾರಕ್ಕೆ ಇನ್ನಷ್ಟು ಉತ್ತೇಜನ ನೀಡಲು ಮುಂದಾಗಿದೆ.

ಚಿಲ್ಲರೆ ನೇರ ಹೂಡಿಕೆದಾರರಿಗೆ ಹೊಸ ಮೊಬೈಲ್‌ ಆ್ಯಪ್‌, ನಗದು ಠೇವಣಿಗಾಗಿ ಯುಪಿಐ ಬಳಕೆ ಮತ್ತಿತರ ಯೋಜನೆಗಳನ್ನು ಪ್ರಕಟಿಸಿದೆ. ಒಟ್ಟಿನಲ್ಲಿ ಆರ್‌ಬಿಐ ದೇಶ ಮತ್ತು ಜಾಗತಿಕ ಆರ್ಥಿಕ ದಿಗ್ಗಜ ರಾಷ್ಟ್ರಗಳ ಹಣಕಾಸು ವ್ಯವಸ್ಥೆ, ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಯಾವುದೇ ದಿಢೀರ್‌ ಲಾಭದಾಯಕವಾದ ನಿರ್ಧಾರಕ್ಕೆ ಶರಣಾಗದೆ ದೇಶದ ಆರ್ಥಿಕ ಭವಿಷ್ಯವನ್ನು ಗಮನದಲ್ಲಿರಿಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಮುಂಗಾರು ಋತುವಿನಲ್ಲಿನ ವಿದ್ಯಮಾನಗಳನ್ನು ಅವಲೋಕಿಸಿ ಆಗಸ್ಟ್‌ ವೇಳೆಗಷ್ಟೇ ರೆಪೊ ದರದಲ್ಲಿ ಬದಲಾವಣೆಯನ್ನು ಮಾಡಲು ಚಿಂತನೆ ನಡೆಸಿರುವುದು ಸುಸ್ಪಷ್ಟ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.