Hassan; “ಮೈತ್ರಿ ಅಭ್ಯರ್ಥಿ ಪರ ಪ್ರೀತಂ ಕೆಲಸ ‘; ರಾಧಾ ಮೋಹನ್‌ ಅಗರ್ವಾಲ್‌


Team Udayavani, Apr 6, 2024, 10:48 PM IST

Hassan; “ಮೈತ್ರಿ ಅಭ್ಯರ್ಥಿ ಪರ ಪ್ರೀತಂ ಕೆಲಸ ‘; ರಾಧಾ ಮೋಹನ್‌ ಅಗರ್ವಾಲ್‌

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮತ ಹಾಕುವಂತೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಅವರು ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ ಎಂಬ ದೂರು ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯ ಚುನಾವಣ ಉಸ್ತುವಾರಿ ರಾಧಾ ಮೋಹನ್‌ ಅಗರ್ವಾಲ್‌ ಹೇಳಿದರು.

ಪ್ರೀತಂ ಗೌಡ ಮೈತ್ರಿ ಧರ್ಮ ಪಾಲಿಸುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ದೂರಿನ ಹಿನ್ನೆಲೆಯಲ್ಲಿ ಹಾಸನದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ತುರ್ತು ಸಮನ್ವಯ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಾವು ಹಾಸನದಲ್ಲಿ ಸಮೀಕ್ಷೆ ನಡೆಸಿದ್ದೇವೆ, ಆ ರೀತಿ ಎಲ್ಲೂ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಮುಖಂಡರಿಗೆ ಎಲ್ಲಿ ಜವಾಬ್ದಾರಿ ವಹಿಸಲಾಗುತ್ತದೆಯೋ ಅಲ್ಲಿ ಅವರವರ ಕೆಲಸದ ಮೌಲ್ಯಮಾಪನ ನಡೆಯಲಿದೆ. ಪ್ರೀತಂ ಗೌಡರಿಗೆ ಮೈಸೂರಿನಲ್ಲಿ ಕೆಲಸ ಮಾಡಲು ನಿರ್ದೇಶನ ನೀಡಲಾಗಿದೆ. ಅವರು ಮೈಸೂರು ಬಿಟ್ಟು ಬಂದರೆ ನಾನೇ ಅವರ ವಿಚಾರಣೆ ನಡೆಸುತ್ತೇನೆ ಎಂದು ಹೇಳಿದರು.

ಹಾಸನದಲ್ಲಿ ಇರಬೇಡಿ ಎಂದು ಹೇಳಿದ್ದೇನೆ
ಪ್ರೀತಂ ಗೌಡರಿಗೆ ಹಾಸನದಲ್ಲಿ ಇರಬೇಡಿ ಎಂದು ನಾನೇ ಹೇಳಿದ್ದೇನೆ. ನಮಗೆ ಹಾಸನ ಎಷ್ಟು ಮುಖ್ಯವೋ, ಮೈಸೂರು ಅಷ್ಟೇ ಮುಖ್ಯ. ಪ್ರೀತಂ ಗೌಡ ರಾಜ್ಯ ಪ್ರಧಾನ ಕಾರ್ಯದರ್ಶಿ, ಪ್ರತಿದಿನ ಅವರು ಹಾಸನದಲ್ಲೇ ಇರಬೇಕು ಎಂದು ನಿರೀಕ್ಷಿಸುವುದಿಲ್ಲ. ಅವರು ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಸಭೆಗೆ ಪ್ರೀತಂ ಗೌಡ ಬಂದಿದ್ದರು, ನಾನು ಉತ್ತರ ಪ್ರದೇಶದವನು. ಅಲ್ಲಿ 20 ವರ್ಷ ಜನಪ್ರತಿನಿಧಿಯಾಗಿದ್ದೇನೆ. ಈಗ ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ, ನಿಯೋಜಿಸಿದ ಕಡೆ ಕೆಲಸ ಮಾಡುತ್ತಿದ್ದೇನೆ. ಒಬ್ಬ ವ್ಯಕ್ತಿ ಒಂದೇ ಸಮಯದಲ್ಲಿ ಎರಡೂ ಕಡೆ ಹೇಗೆ ಇರಲು ಸಾಧ್ಯ ಎನ್ನುವ ಮೂಲಕ ಪ್ರೀತಂ ಗೌಡ ಅವರನ್ನು ಸಮರ್ಥಿಸಿಕೊಂಡರು.

ಪ್ರೀತಂ ಗೌಡರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಅವರು ನಮ್ಮ ಪಕ್ಷದ ಆಸ್ತಿ. ಅವರ ಜತೆ ಜೆಡಿಎಸ್‌ ನಾಯಕರ ವರ್ತನೆ ಬಗ್ಗೆ ಅಗರ್ವಾಲ್‌ ಅವರು ಸಮನ್ವಯ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.

ಪ್ರೀತಂಗೆ ಫೋನ್‌ ಯಾಕೆ ಮಾಡಿಲ್ಲ?
ಇದುವರೆಗೆ ನೀವು ಪ್ರೀತಂ ಗೌಡಗೆ ಯಾಕೆ ಫೋನ್‌ ಮಾಡಿಲ್ಲ ಎಂದು ಪ್ರಜ್ವಲ್‌ಗೆ ಪ್ರಶ್ನಿಸಿದ ಅಗರ್ವಾಲ್‌ ಅವರು, ಪ್ರೀತಂಗೌಡ ಬಿಟ್ಟು ಬಿಜೆಪಿಯ ಬೇರೆ ನಾಯಕರನ್ನು ಪ್ರಜ್ವಲ್‌ ರೇವಣ್ಣ ಭೇಟಿ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಜೆಡಿಎಸ್‌ ನಾಯಕರೂ ತಮ್ಮ ನಡವಳಿಕೆ ಬದಲಾವಣೆ ಮಾಡಿಕೊಳ್ಳಬೇಕು. ಪ್ರೀತಂಗೌಡ ಖಂಡಿತ ಮೈತ್ರಿ ಪರ ಕೆಲಸ ಮಾಡುತ್ತಾರೆ ಎಂದು ಭರವಸೆ ನೀಡಿದರು ಎಂದು ತಿಳಿದು ಬಂದಿದೆ.

ಸಭೆಯ ಬಳಿಕ ಮಾತನಾಡಿದ ಪ್ರಜ್ವಲ್‌ ರೇವಣ್ಣ ಅವರು, ಪ್ರೀತಂ ಗೌಡರಿಗೆ ಮೈಸೂರು ಉಸ್ತುವಾರಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್‌ ಒಗ್ಗಟ್ಟಾಗಿ ಚುನಾವಣ ಪ್ರಚಾರ ಮಾಡುತ್ತೇವೆ. ಆಗ ಪ್ರೀತಂಗೌಡ ಅವರೂ ನಮ್ಮ ಜತೆಗಿದ್ದು, ಒಗ್ಗಟ್ಟಾಗಿ ಹೋಗುವ ಕೆಲಸ ಮಾಡ್ತೀವಿ ಎಂದು ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.