Prem- Manvita ; ಅಪ್ಪಾ ಐ ಲವ್‌ ಯು ಏ.12ಕ್ಕೆ ತೆರೆಗೆ


Team Udayavani, Apr 7, 2024, 12:34 PM IST

manvitha kamath, prem starer Appa i love you movie releasing on April 12

ಪ್ರೇಮ್‌ ನಾಯಕರಾಗಿರುವ “ಅಪ್ಪಾ ಐ ಲವ್‌ ಯು’ ಚಿತ್ರ ಏ.12ಕ್ಕೆ ತೆರೆಕಾಣುತ್ತಿದೆ. ಟಗರು ಚಿತ್ರ ಖ್ಯಾತಿಯ ನಟಿ ಮಾನ್ವಿತಾ ಹರೀಶ್‌ ಪ್ರೇಮ್‌ಗೆ ಜೋಡಿ ಆಗಿದ್ದಾರೆ. ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಮಾಧ್ಯಮ ಮುಂದೆ ಬಂದ ಚಿತ್ರತಂಡ ಚಿತ್ರದ ಮಾಹಿತಿ ಹಂಚಿಕೊಂಡಿತು.

ಈ ವೇಳೆ ನಟ ಪ್ರೇಮ್‌ ಮಾತನಾಡಿ, ಸಾಮಾನ್ಯವಾಗಿ ಎಲ್ಲಾ ತಂದೆಯರು ಎಲ್ಲರಿಗೂ ಹೀರೋ. ಎಷ್ಟೇ ಬಲಹೀನ ಅಗಿದ್ದರೂ ಸಹ ರಸ್ತೆಯಲ್ಲಿ ಜಗಳ ಮಾಡಿ ಹೊಡೆದರು. ಮಕ್ಕಳ ಬಾಯಲ್ಲಿ ಬರುವ ಮಾತು ಎಂದರೆ ಅಪ್ಪನಿಗೆ ಹೇಳ್ತೀನಿ ಅಂತಾ. ಅಪ್ಪನಿಗೆ ಹೋಗಿ ಹೇಳುತ್ತಾರೆ. ನನ್ನ ತಂದೆ ನನಗೆ ಹೀರೋ. ನಾನು ಪ್ಲೇಬ್ಯಾಕ್‌ ಸಿಂಗರ್‌ ಆಗಲು ಇಷ್ಟಪಟ್ಟಿದೆ. ಯಾರಾದರೂ ಏನ್‌ ಆಗ್ತೀಯಾ ಎಂದು ಕೇಳಿದರೆ ನಾನು ಸಿಂಗರ್‌ ಆಗ್ತೀನಿ ಎನ್ನುತ್ತಿದ್ದೆ. ನಾನು ಚಿಕ್ಕವನು ಇದ್ದಾಗ ಎಲ್ಲಾ ರೀತಿ ಹುಡುಗರ ಸಹವಾಸ ಮಾಡುತ್ತಿದ್ದೆ. ಆದರೆ ನಮ್ಮ ಅಪ್ಪ ಎಂದು ಡೌಟ್‌ ಪಡಲೇಇಲ್ಲ. ನನ್ನ ಮಗ ಏನು ಅಂತ ಗೊತ್ತು ಎಂದಿದ್ದರು. ಹೀಗಾಗಿ ನಾನು ಕೆಟ್ಟ ದಾರಿ ತುಳಿಯಲಿಲ್ಲ. ನನಗೆ ಕ್ಲೈಮ್ಯಾಕ್ಸ್‌ ಬಹಳ ಕನೆಕ್ಟ್ ಆಯ್ತು. ನನಗೆ ಸಿಕ್ಕಿರುವ ಪಾತ್ರ ಬಹಳ ಅದ್ಭುತ ಪಾತ್ರ. ನನಗೋಸ್ಕರ ಹುಡುಕಿ ಬಂದ ಪಾತ್ರ. ಹೀಗಾಗಿ ಸಿನಿಮಾ ಒಪ್ಪಿಕೊಂಡೆ’ ಎಂದರು.

ನಿರ್ದೇಶಕ ಅಥರ್ವ್‌ ಆರ್ಯ ಮಾತನಾಡಿ, “ನಾವು ಹೆಡ್‌ಲೈನ್‌ ಹಾಕಿರುವ ಹಾಗೆ ಇದು ಕಾಲ್ಪನಿಕ ಕಥೆಯಲ್ಲ. ಅಪ್ಪ ಎಂಬ ದೇವರ ಸತ್ಯ ಕಥೆ. ಕಾಲ್ಪನಿಕ ಕಥೆ ಮಾಡುವುದು ಸುಲಭ. ಆದರೆ ನಮ್ಮ ನಿಮ್ಮ ನಡುವೆ ನಡೆಯುವ, ಸಮಾಜದಲ್ಲಿ ವಾಸ್ತವವಾಗಿ ನಡೆಯುವ ಕಥೆಗಳನ್ನು ಎಷ್ಟೋ ಬಾರಿ ಮೆರೆತುಬಿಟ್ಟಿರುತ್ತೇವೆ. ಆದರೆ ನಾವು ಅದನ್ನು ಅನುಭವಿಸುತ್ತಿರುತ್ತೇವೆ. ಅದು ಜೀವನದ ಭಾಗವಾಗಿರುತ್ತದೆ. ಅಂತಹ ಕಥೆಗಳನ್ನು ತೆರೆಮೇಲೆ ತರಬೇಕು ಎಂದು ಅಪ್ಪಾ ಐ ಲವ್‌ ಯೂ ಕಥೆಯನ್ನು ಆಯ್ಕೆ ಮಾಡಿಕೊಂಡೆವು. ಕಥೆ ಹುಟ್ಟಲು ನಾಣಿ ಅವರು ಮೂಲ ಕಾರಣ. ಸಿನಿಮಾವಾಗಲೂ ಅವರೇ ಕಾರಣ. ಅಪ್ಪ ಸಂಸಾರಕ್ಕೆ ಸಮಾಜಕ್ಕೆ ಎಷ್ಟು ಮುಖ್ಯ ಎಂಬುದು ನಾವು ಅಪ್ಪ ಆದಾಗ ಗೊತ್ತಾಗುತ್ತದೆ. ಅಪ್ಪನ ಮಹತ್ವ ಸಾರುವ ಚಿತ್ರ ಇದೇ 12ನೇ ತಾರೀಖು ತೆರೆಗೆ ಬರಲಿದೆ’ ಎಂದರು.

ಚಿತ್ರದ ಬಗ್ಗೆ ಮಾತನಾಡುವ ಅವರು ತಬಲಾ ನಾಣಿ, “ಕಿನ್ನಾಳ್‌ ರಾಜ್, ಈ ಸಿನಿಮಾಗೆ ಅದ್ಭುತ ಹಾಡು ಕೊಟ್ಟಿದ್ದಾರೆ. ಕಿನ್ನಾಳ್‌ ರಾಜ್‌ ಕೆಜಿಎಫ್ ಸಾಂಗ್‌ ಒಂದು ರೀತಿಯಾಯ್ತು. ನಮ್ಮ ಚಿತ್ರದಲ್ಲಿ ಅವರು ಬರೆದಿರುವ ಹಾಡನ್ನು ಆಡುವಾಗ ವಿಜಯ್‌ ಪ್ರಕಾಶ್‌ ಕಣ್ಣೀರಾದರು. ಅಂತಹ ಸಾಹಿತ್ಯ. ಅದಕ್ಕೆ ತಕ್ಕನಾದ ಟ್ಯೂನ್‌ ಆಕಾಶ್‌ ಕೊಟ್ಟಿದ್ದಾರೆ. ವಿಜಯ್‌ ಚೆಂಡೂರು ಒಳ್ಳೆ ಪಾತ್ರ ಮಾಡಿದ್ದಾರೆ’ ಎಂದರು.

ಪ್ರೇಮ್‌ ಹಾಗೂ ಮಾನ್ವಿತಾ ಕಾಮತ್‌ ಜೊತೆಗೆ ಸಂಜಯ್, ಜೀವಿತಾ, ರಂಗಿತರಂಗ ಅರವಿಂದ್‌, ವಿಜಯ್‌ ಚೆಂಡೂರ್‌, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್‌ ತೀರ್ಥಹಳ್ಳಿ, ಗಿರೀಶ್‌ ಜತ್ತಿ, ಪಟೇಲ್‌ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

ಚಿತ್ರಕ್ಕೆ ಆಕಾಶ್‌ ಪರ್ವ ಸಂಗೀತ ಒದಗಿಸಿದ್ದಾರೆ . ಕೆಜಿಎಫ್ ಕಿನ್ನಾಳ್‌ ರಾಜ್, ಕವಿರಾಜ್, ವಿ.ನಾಗೇಂದ್ರ ಪ್ರಸಾದ್, ಕೆ.ಕಲ್ಯಾಣ್‌ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ನಾಗಾರ್ಜುನ್‌ ಆರ್.ಡಿ. ಛಾಯಾಗ್ರಹಣ ಮಾಡಿದ್ದಾರೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.