Security lapse?; ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿದ್ದರಾಮಯ್ಯರಿಗೆ ಹಾರ!
ಠಾಣೆಗೆ ಕರೆಸಿ ರಿಯಾಜ್ ವಿಚಾರಣೆ ನಡೆಸಿದ ಪೊಲೀಸರು... ಭದ್ರತಾ ಲೋಪ ಎಂದ ವಿಪಕ್ಷಗಳು
Team Udayavani, Apr 8, 2024, 9:00 PM IST
ಬೆಂಗಳೂರು: ಭದ್ರತಾ ಲೋಪಕ್ಕೆ ಸಾಕ್ಷಿ ಎಂಬಂತೆ ಚುನಾವಣ ಪ್ರಚಾರ ರ್ಯಾಲಿ ವೇಳೆ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸೊಂಟದಲ್ಲಿ ಗನ್ ಇಟ್ಟುಕೊಂಡು ಪ್ರಚಾರ ವಾಹನದ ಮೇಲೇರಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಭೈರಸಂದ್ರದಲ್ಲಿ ಸೌಮ್ಯ ರೆಡ್ಡಿ ಅವರ ಪರ ಪ್ರಚಾರ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ದೃಶ್ಯ ಕೆಮರಾ ಕಣ್ಣುಗಳಲ್ಲಿ ಸೆರೆಯಾಗಿದ್ದು,ಗನ್ ಸೊಂಟದಲ್ಲಿದ್ದುದು ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಹಾರ ಹಾಕಿದ ವ್ಯಕ್ತಿ ರಿಯಾಜ್ ಎನ್ನುವವರಾಗಿದ್ದು, ಬೆಂಗಳೂರಿನ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ. 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿಕೊಂಡಿದ್ದಾರೆ.
ಘಟನೆ ಭದ್ರತಾ ಲೋಪ ಎಂದು ಬಿಂಬಿತವಾದ ಬಳಿಕ ಪೊಲೀಸ್ ಅಧಿಕಾರಿಗಳು ರಿಯಾಜ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ಹಿಂದೆ ತನ್ನ ಮೇಲೆ ದಾಳಿಯಾದ ಕಾರಣಕ್ಕಾಗಿ ಪರವಾನಗಿ ಪಡೆದು ಗನ್ ಇಟ್ಟುಕೊಂಡಿದ್ದೇನೆ, ನಾನು ಸಿದ್ದರಾಮಯ್ಯ ಅವರ ಅಭಿಮಾನಿ ಎಂದು ರಿಯಾಜ್ ಹೇಳಿರುವುದಾಗಿ ತಿಳಿದು ಬಂದಿದೆ.
ಜೆಡಿಎಸ್ ನಾಯಕ, ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿ ಬಿಜೆಪಿ ಪ್ರಮುಖರು ಇದು ಭದ್ರತಾ ಲೋಪ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.