Lok Sabha Election 2024: ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು


Team Udayavani, Apr 10, 2024, 4:24 PM IST

Udayavani Kannada Newspaper

ಉದಯವಾಣಿ ಸಮಾಚಾರ
ರಾಯಚೂರು: ಲೋಕಸಭೆ ಚುನಾವಣೆ ಎರಡು ಹಂತಗಳಲ್ಲಿ ನಡೆಯುತ್ತಿರುವ ಕಾರಣಕ್ಕೆ ದಕ್ಷಿಣ ಕರ್ನಾಟಕ ಭಾಗದ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದ್ದರೆ, ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ಕಾರ್ಯ ನೀರಸವಾಗಿದೆ. ಅಭ್ಯರ್ಥಿಗಳ ಪರ ಪ್ರಚಾರ ಸ್ಟಾರ್‌ ಪ್ರಚಾರಕರು ಸಿಗದ ಕಾರಣಕ್ಕೆ ಟೆಂಪಲ್‌ ರನ್‌ ನಡೆಸುತ್ತಿದ್ದಾರೆ.

ಈಗಾಗಲೇ ದೇಶದಲ್ಲಿ ಚುನಾವಣೆ ಕಾವೇರಿದೆ. ಎಲ್ಲೆಲ್ಲೂ ಅಬ್ಬರದ ಪ್ರಚಾರ ಜೋರಾಗಿದೆ. ಅದರಲ್ಲೂ ಮೊದಲನೇ ಹಂತದ ಚುನಾವಣೆ ಇರುವಂಥ ಕೆಲವೊಂದು ಹೈವೋಲ್ಟೆಜ್‌ ಕ್ಷೇತ್ರಗಳಲ್ಲಂತೂ ಬಿಸಿಲು ಲೆಕ್ಕಿಸದೆ ಪ್ರಚಾರ ನಡೆಸಲಾಗುತ್ತಿದೆ. ಅದೇ ರೀತಿ ಬಹುತೇಕ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕೂಡ ಅಂತಿಮಗೊಳಿಸಿದ್ದು, ಎರಡನೇ ಹಂತದ ಚುನಾವಣೆಗಳಿರುವ ಕಡೆ ಮಾತ್ರ ಪ್ರಚಾರ ಭರಾಟೆ ಅಷ್ಟಾಗಿ ಕಾಣಿಸುತ್ತಿಲ್ಲ.

ಸ್ಥಳೀಯವಾಗಿರುವ ಸಚಿವರು, ಶಾಸಕರೇ ಸದ್ಯಕ್ಕೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮೇ 7ರಂದು ಎರಡನೇ ಹಂತದಲ್ಲಿ ರಾಯಚೂರು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ದಾವಣಗೆರೆ, ಶಿವಮೊಗ್ಗದಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲೂ ಬೆಳಗಾವಿ, ಶಿವಮೊಗ್ಗ, ಧಾರವಾಡದಂಥ ಹೈವೋಲ್ಟೆಜ್‌ ಕ್ಷೇತ್ರಗಳಲ್ಲಿ ಪ್ರಚಾರ ಜೋರಾಗಿದೆ.

ಪ್ರಧಾನಿ ಮೋದಿ ಕಲಬುರಗಿಯಲ್ಲಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದು ಬಿಟ್ಟರೆ ಈ ಭಾಗದಲ್ಲಿ ದೊಡ್ಡ ನಾಯಕರು ಯಾರೂ ಬಂದಿಲ್ಲ. ರಾಯಚೂರು ಲೋಕಸಭೆ ಕ್ಷೇತ್ರ ಎಂಟು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಸಮಯ ಕೂಡ ಸಾಲುವುದಿಲ್ಲ. ಹೀಗಾಗಿ ಅಭ್ಯರ್ಥಿಗಳು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಆದರೆ, ಸ್ಟಾರ್‌ ಪ್ರಚಾರಕರೆಲ್ಲ ಮೊದಲ ಹಂತದ ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಇರುವ ಕಾರಣಕ್ಕೆ ಸ್ಥಳೀಯ ನಾಯಕರನ್ನೇ ನೆಚ್ಚಿಕೊಳ್ಳಬೇಕಿದೆ. ಎಲ್ಲ ಕಡೆ ಬಣ ರಾಜಕೀಯ ಇರುವುದರಿಂದ ಸ್ಥಳೀಯ ನಾಯಕರೊಟ್ಟಿಗೆ ಪ್ರಚಾರ ನಡೆಸಿದರೆ
ಅನುಕೂಲವೋ ಅನಾನುಕೂಲವೋ ಎಂಬ ಗೊಂದಲ ಅಭ್ಯರ್ಥಿಗಳಲ್ಲಿದ್ದು, ಪಕ್ಷದ ರಾಜ್ಯ, ರಾಷ್ಟ್ರ ಮಟ್ಟದ ನಾಯಕರ ಬರುವಿಕೆಗಾಗಿ ಕಾಯುವಂತಾಗಿದೆ.

ಬಿಸಿಲ ಝಳದ ಭೀತಿ
ಈಗಾಗಲೇ ಬಿಸಿಲಿನ ಝಳ ದಿನೇ ದಿನೆ ಹೆಚ್ಚಾಗುತ್ತಿದ್ದು, 42 ಡಿಗ್ರಿ ಸೆಲ್ಸಿಯಸ್‌ ಸಮೀಪಿಸಿದೆ. ಅಭ್ಯರ್ಥಿಗಳು ಬಿಸಿಲಲ್ಲಿ ಪ್ರಚಾರ ಕಾರ್ಯಕ್ಕೆ ಮುಂದಾಗಲು ಹಿಂಜರಿಯುವಂತಾಗಿದೆ. ಹೀಗಾಗಿ ಬೆಳಗ್ಗೆ ಬೇಗನೆ ಮನೆ ಬಿಡುತ್ತಿದ್ದು, ಮಧ್ಯಾಹ್ನ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಂಜೆ ನಂತರ ಮತ್ತೆ ಪ್ರಚಾರಕ್ಕೆ ಮುಂದಾಗುತ್ತಿದ್ದಾರೆ. ಮಧ್ಯಾಹ್ನ ಹೋದರೂ ಹೆಚ್ಚು ಜನ ಸೇರುತ್ತಿಲ್ಲ.

ಅಭ್ಯರ್ಥಿಗಳಿಂದ ಟೆಂಪಲ್‌ ರನ್‌
ಚುನಾವಣೆ ರ್ಯಾಲಿ, ಬಹಿರಂಗ ಸಮಾವೇಶಗಳಿಗಿಂತ ಟೆಂಪಲ್‌ ರನ್‌ಗೆ ಅಭ್ಯರ್ಥಿಗಳು ಹೆಚ್ಚು ಒತ್ತು ನೀಡುತ್ತಿದ್ದಾರೆ. ಕ್ಷೇತ್ರದಲ್ಲಿರುವ ಪ್ರಮುಖ ಮಠ ಮಾನ್ಯಗಳು, ದೇವಸ್ಥಾನಗಳಿಗೆ ಅಭ್ಯರ್ಥಿಗಳು ಭೇಟಿ ನೀಡಿ ದರ್ಶನ ಪಡೆಯುವ ಮೂಲಕ ಅಲ್ಲಿನ ಭಕ್ತರ ವಿಶ್ವಾಸ ಗಳಿಸುವ ಪ್ರಯತ್ನದಲ್ಲಿದ್ದಾರೆ. ಇನ್ನೂ ವಿವಿಧ ತಾಲೂಕು ಕೇಂದ್ರಗಳಲ್ಲಿ ಸಣ್ಣ ಪ್ರಮಾಣದ ಕಾರ್ಯಕ್ರಮಗಳನ್ನು  ನಡೆಸಿ ಕಾರ್ಯಕರ್ತರನ್ನು ಸೇರಿಸಿಕೊಳ್ಳುವ ಮೂಲಕ ಪಕ್ಷ  ಸಂಘಟನೆಗೂ ಒತ್ತ ನೀಡಲಾಗುತ್ತಿದೆ.

*ಸಿದ್ದಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.