Politics: ಲೋಕ ಸಮರ; ನಾಯಕರ ನಿದ್ದೆಗೆಡಿಸಿದ ಪಕ್ಷಾಂತರ ಪರ್ವ!


Team Udayavani, Apr 12, 2024, 5:36 PM IST

Politics: ಲೋಕ ಸಮರ; ನಾಯಕರ ನಿದ್ದೆಗೆಡಿಸಿದ ಪಕ್ಷಾಂತರ ಪರ್ವ!

ಚಿಕ್ಕಬಳ್ಳಾಪುರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಯಲ್ಲಿ ಇದೀಗ ಪಕ್ಷಾಂತರ ಪರ್ವ ರಾಜಕೀಯ ಪಕ್ಷಗಳಿಗೆ ನಿದ್ದೆಗೆಡಿಸಿದ್ದು, ಪಕ್ಷಗಳಲ್ಲಿರುವ ಮುಖಂಡರು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಸವಾಲು ಎದುರಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ ಹಾಗೂ ಬಿಜೆಪಿ, ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿಗೆ ಚುನಾವಣಾ ಅಖಾಡ ಸಾಕ್ಷಿಯಾಗಿದ್ದು ಇದರ ಪರಿಣಾಮ ಪಕ್ಷಾಂತರ ಕೂಡ ರಾಜಕೀಯ ಪಕ್ಷಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣೆಯ ಮತದಾನಕ್ಕೆ ಕೇವಲ 16 ದಿನ ಮಾತ್ರ ಬಾಕಿ ಇದ್ದು ಬಹಿರಂತ ಪ್ರಚಾರಕ್ಕೆ ಕೇವಲ 13 ದಿನ ಮಾತ್ರ ಇದೆ. ಏ.24ಕ್ಕೆ ಬಹಿರಂತ ಪ್ರಚಾರ ತೆರೆ ಕಾಣಲಿದೆ. ಇದರ ನಡುವೆ ಕ್ಷೇತ್ರದಲ್ಲಿ ಮತದಾರರ ಮನವೊಸಲು ಪೈಪೋಟಿಗೆ ಇಳಿದಿರುವ ಪಕ್ಷಗಳು ಗ್ರಾಮ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಮತ ತಂದುಕೊಡಬಲ್ಲ ರಾಜಕೀಯ ಪಕ್ಷಗಳ ಮುಖಂಡರಿಗೆ, ನಾಯಕರಿಗೆ ಪಕ್ಷಗಳು ಗಾಳ ಹಾಕಿ ವಿವಿಧ ಆಸೆ, ಅಮಿಷಗಳನ್ನು ನೀಡಿ ತಮ್ಮ ಪಕ್ಷಗಳ ಕಡೆಗೆ ಸೆಳೆದುಕೊಳ್ಳುವ ಮೂಲಕ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪಕ್ಷಾಂತರಕ್ಕೆ ಒತ್ತು ಕೊಟ್ಟಿದ್ದು, ಮತಗಟ್ಟೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತ ತಂದುಕೊಡಬಲ್ಲ ನಾಯಕರನ್ನು ಆಪರೇಷನ್‌ ಮೂಲಕ ಪಕ್ಷಗಳಿಗೆ ಕರೆ ತರುವ ಕೆಲಸ ಮಾಡಲಾಗುತ್ತಿದ್ದು. ಇದಕ್ಕಾಗಿ ರಾಜಕೀಯ ಪಕ್ಷಗಳಲ್ಲಿ ಕೆಲವೊಂದು ತಂಡಗಳು ಸಕ್ರಿಯವಾಗಿ ಪಕ್ಷಾಂತರ ಮಾಡಿಸುವ ಕಾಯಕದಲ್ಲಿ ಸದ್ದಿಲ್ಲದೇ ತೊಡಗಿಸಿಕೊಂಡಿವೆ.

ಪಕ್ಷಾಂತರಗೊಂಡ ಪ್ರಮುಖ ನಾಯಕರು, ಮುಖಂಡರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಎಂ.ಶಿವಾನಂದ್‌ ರಕ್ಷಾ ರಾಮಯ್ಯಗೆ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಪಕ್ಷ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದರೆ, ಡಾ.ಕೆ.ಸುಧಾಕರ್‌, ಬಿಜೆಪಿ-ಜೆಡಿಎಸ್‌ ಮೈತ್ರಿ ಆಗಿರುವುದನ್ನು ವಿರೋಧಿಸಿ ಚಿಕ್ಕಬಳ್ಳಾಪುರದ ಜೆಡಿಎಸ್‌ನ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ.

ಕಳೆದ ಬಾರಿ ಕಾಂಗ್ರೆಸ್‌ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಶಿಡ್ಲಘಟ್ಟ ಕ್ಷೇತ್ರದ ಸಮಾಜ ಸೇವಕ ಪುಟ್ಟು ಆಂಜಿನಪ್ಪ, ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ. ಮುನೇಗೌಡ ಕಾಂಗ್ರೆಸ್‌ ಗೂಡು ಸೇರಿದ್ದಾರೆ.

ಕಳೆದ ಬಾರಿ ಗೌರಿಬಿದನೂರಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್‌.ಪುಟ್ಟಸ್ವಾಮಿಗೌಡ ಪರ ಬ್ಯಾಟಿಂಗ್‌ ಬೀಸಿದ್ದ ಜಿಪಂ ಮಾಜಿ ಅಧ್ಯಕ್ಷ ಹೆಚ್‌.ವಿ.ಮಂಜುನಾಥ ಸೇರಿ ಹಲವು ಮಂದಿ ಕೆಎಚ್‌ಪಿ ಬಣ ತೊರೆದು ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ.

ಅಲ್ಲದೇ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ನಗರಸಭಾ ಸದಸ್ಯರು ಕೂಡ ಪಕ್ಷಾಂತರ ಪರ್ವಕ್ಕೆ ಮುಂದಾಗುವ ಮೂಲಕ ತಮ್ಮ ಪಕ್ಷಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.