IPL; ಲಕ್ನೋ ವಿರುದ್ಧ ಜಯದ ನಗೆ ಬೀರಿದ ಡೆಲ್ಲಿ ಕ್ಯಾಪಿಟಲ್ಸ್‌

ಆಡಿದ ಮೊದಲ ಪಂದ್ಯದಲ್ಲೇ ಮಿಂಚಿದ ಆಸೀಸ್ ಆಲ್ ರೌಂಡರ್

Team Udayavani, Apr 12, 2024, 11:07 PM IST

1-wqewqeqwe

ಲಕ್ನೋ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದೆದುರು ಡೆಲ್ಲಿ ಕ್ಯಾಪಿಟಲ್ಸ್‌ 6 ವಿಕೆಟ್ ಗಳ ಜಯ ಸಾಧಿಸಿದೆ. ಲಕ್ನೋ ಆಡಿದ 5 ನೇ ಪಂದ್ಯದಲ್ಲಿ 2 ನೇ ಸೋಲು ಅನುಭವಿಸಿದರೆ, ಡೆಲ್ಲಿ ಆಡಿದ 6 ನೇ ಪಂದ್ಯದಲ್ಲಿ 2 ನೇ ಜಯ ಕಂಡಿತು.

ಲಕ್ನೋ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಕೊನೆ ಹಂತದಲ್ಲಿ ಆಯುಷ್‌ ಬದೋನಿ ಅವರು ಸಿಡಿಸಿದ ಅರ್ಧಶತಕದಿಂದಾಗಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 7 ವಿಕೆಟಿಗೆ 167 ರನ್ನುಗಳ ಸಾಧಾರಣ ಮೊತ್ತ ಪೇರಿಸಿತು.

ಗುರಿ ಬೆನ್ನಟ್ಟಿದ ಡೆಲ್ಲಿ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಅವರ ಐಪಿಎಲ್‌ ಪದಾರ್ಪಣ ಪಂದ್ಯದಲ್ಲೇ ಆಕರ್ಷಕ ಅರ್ಧ ಶತಕ ಮತ್ತು ಪ್ರಥ್ವಿ ಶಾ, ನಾಯಕ ರಿಷಭ್ ಪಂತ್ ಅವರ ಆಟದ ನೆರವಿನಿಂದ ಜಯ ಸಾಧಿಸಿತು. ಶಾ 32,
ಆಸೀಸ್ ಆಟಗಾರ ಜೇಕ್ ಫ್ರೇಸರ್ 55 ರನ್( 35 ಎಸೆತ) ಗಳಿಸಿ ಔಟಾದರು.ಅವರು 5 ಭರ್ಜರಿ ಸಿಕ್ಸರ್ ಸಿಡಿಸಿದರು. ಪಂತ್ 41(24 ಎಸೆತ) ಗಳಿಸಿ ಔಟಾದರು. 18.1 ಓವರ್ ಗಳಲ್ಲಿ4 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿ ಜಯದ ನಗೆ ಬೀರಿತು. ಕೊನೆಯಲ್ಲಿ ಟ್ರಿಸ್ಟನ್ ಸ್ಟಬ್ಸ್ 15, ಶಾಯ್ ಹೋಪ್ 11 ರನ್ ಗಳಿಸಿ ಔಟಾಗದೆ ಉಳಿದರು.

ಖಲೀಲ್‌ ಅಹ್ಮದ್‌ ಮತ್ತು ಕುಲದೀಪ್‌ ಯಾದವ್‌ ಅವರ ಮಾರಕ ದಾಳಿಗೆ ಕುಸಿದ ಲಕ್ನೋ ತಂಡವು ಒಂದು ಹಂತದಲ್ಲಿ 13 ಓವರ್‌ಗಳ ಮುಕ್ತಾಯಕ್ಕೆ 94 ರನ್‌ ಗಳಿಸುವಷ್ಟರಲ್ಲಿ 7 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಆದರೆ ಆಬಳಿಕ ಅಂತಿಮ 7 ಓವರ್‌ಗಳಲ್ಲಿ ಓವರೊಂದಕ್ಕೆ 10ರಂತೆ ರನ್‌ ಪೇರಿಸಿದ ಲಕ್ನೋ ತಂಡವು ಸಮಾಧಾನಪಟ್ಟುಕೊಂಡಿತು. ಬದೋನಿ ಮತ್ತು ಅರ್ಷದ್‌ ಖಾನ್‌ ಅವರ ಭರ್ಜರಿ ಆಟದಿಂದಾಗಿ ತಂಡದ ಮೊತ್ತ 167 ರನ್‌ ತಲುಪುವಂತಾಯಿತು.

ಇನ್ನಿಂಗ್ಸ್‌ ಆರಂಭಿಸಿದ ಕ್ವಿಂಟನ್‌ ಡಿ ಕಾಕ್‌ ಮತ್ತು ನಾಯಕ ಕೆಎಲ್‌ ರಾಹುಲ್‌ ಉತ್ತಮವಾಗಿ ಆಡಿ ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು. ಮೊದಲ ವಿಕೆಟಿಗೆ ಅವರಿಬ್ಬರು 28 ರನ್‌ ಪೇರಿಸಿದ ಬಳಿಕ ಬೇರ್ಪಟ್ಟರು. ಈ ಜೋಡಿಯನ್ನು ಮುರಿದ ಖಲೀಲ್‌ ಅಹ್ಮದ್‌ ಲಕ್ನೋಗೆ ದೊಡ್ಡ ಹೊಡೆತ ನೀಡಿದರು. ಅಹ್ಮದ್‌ ಸ್ವಲ್ಪ ಹೊತ್ತಿನಲ್ಲಿಯೇ ಪಡಿಕ್ಕಲ್‌ ಅವರ ವಿಕೆಟನ್ನು ಹಾರಿಸಿದರು.

ಗಾಯದ ಸಮಸ್ಯೆಯಿಂದಾಗಿ ಕಳೆದ ಮೂರು ಪಂದ್ಯ ಕಳೆದುಕೊಂಡಿದ್ದ ಕುಲದೀಪ್‌ ಈ ಪಂದ್ಯದ ಮೂಲಕ ತಂಡಕ್ಕೆ ಮರಳಿದ್ದರು. ಅವರು ಎಸೆದ ಮೊದಲ ಓವರಿನಲ್ಲಿಯೇ ಅಪಾಯಕಾರಿ ಮಾರ್ಕಸ್‌ ಸ್ಟೋಯಿನಿಸ್‌ ಅವರ ವಿಕೆಟನ್ನು ಹಾರಿಸಿ ಲಕ್ನೋಗೆ ಪ್ರಬಲ ಹೊಡೆತ ನೀಡಿದರು. ಅವರು ಆಬಳಿಕ ನಿಕೋಲಸ್‌ ಪೂರಣ್‌ ಮತ್ತು ನಾಯಕ ರಾಹುಲ್‌ ಅವರ ವಿಕೆಟನ್ನು ಹಾರಿಸಿದ್ದರಿಂದ ತಂಡ ಶೋಚನೀಯ ಸ್ಥಿತಿಗೆ ಬೀಳುವಂತಾಯಿತು. ತಂಡ ಮೊದಲ 13 ಓವರ್‌ಗಳ ಮುಕ್ತಾಯಕ್ಕೆ 94 ರನ್‌ ಗಳಿಸುವಷ್ಟರಲ್ಲಿ 7 ವಿಕೆಟ್‌ ಕಳೆದುಕೊಂಡಿತ್ತು.

ತಂಡ ಶೋಚನೀಯ ಸ್ಥಿತಿಯಲ್ಲಿದ್ದರೂ ಎಚ್ಚರಿಕೆಯ ಆಟವಾಡಿದ ಆಯುಷ್‌ ಬದೋನಿ ಅವರು ಕೊನೆ ಹಂತದಲ್ಲಿ ಡೆಲ್ಲಿಯ ದಾಳಿಯನ್ನು ದಿಟ್ಟವಾಗಿ ಎದುರಿಸಿ ತಂಡಕ್ಕೆ ಜೀವ ತುಂಬಿದರು. ಮುರಿಯದ ಎಂಟನೇ ವಿಕೆಟಿಗೆ ಅರ್ಷದ್‌ ಖಾನ್‌ ಜತೆಗೆ 73 ರನ್‌ ಪೇರಿಸಿ ತಂಡ ಉತ್ತಮ ಮೊತ್ತ ಪೇರಿಸಲು ಕಾರಣರಾದರು. 35 ಎಸೆತ ಎದುರಿಸಿದ ಬದೋನಿ 5 ಬೌಂಡರಿ ಮತ್ತು 1 ಸಿ ಕ್ಸರ್‌ ನೆರವಿನಿಂದ 55 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಬಿಗು ದಾಳಿ ಸಂಘಟಿಸಿದ ಕುಲದೀಪ್‌ ಯಾದವ್‌ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 20 ರನ್‌ ನೀಡಿ ಮೂರು ವಿಕೆಟ್‌ ಹಾರಿಸಿದರೆ ಖಲೀಲ್‌ ಅಹ್ಮದ್‌ 41 ರನ್ನಿಗೆ 2 ವಿಕೆಟ್‌ ಪಡೆದರು. ಇಶಾಂತ್‌ ಶರ್ಮ ಮತ್ತು ಮುಕೇಶ್‌ ಕುಮಾರ್‌ ತಲಾ ಒಂದು ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.