SonuSrinivasGowda: ಜೈಲಿನಲ್ಲಿನ ಕರಾಳ ದಿನಗಳ ಅನುಭವ ಹಂಚಿಕೊಂಡ ಸೋನು ಗೌಡ


Team Udayavani, Apr 13, 2024, 3:32 PM IST

SonuSrinivasGowda: ಜೈಲಿನಲ್ಲಿನ ಕರಾಳ ದಿನಗಳ ಅನುಭವ ಹಂಚಿಕೊಂಡ ಸೋನು ಗೌಡ

ಬೆಂಗಳೂರು: ಅಕ್ರಮವಾಗಿ ಮಗು ದತ್ತು ಪಡೆದ ಆರೋಪದಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿರುವ ಬಿಗ್‌ ಬಾಸ್‌ ಹಾಗೂ ಟಿಕ್‌ ಟಾಕ್‌ ಸ್ಟಾರ್ ಖ್ಯಾತಿಯ ಸೋನು ಶ್ರೀನಿವಾಸ್‌ ಗೌಡ ತಮ್ಮ ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ.

ಈ ಬಗ್ಗೆ ತಮ್ಮ ಯೂಟ್ಯೂಬ್‌ ನಲ್ಲಿ ವಿಡಿಯೋ ಮಾಡಿರುವ ಅವರು,  “ಮೊದಲಿಗೆ ನನ್ನನ್ನು ಕಾನೂನತ್ಮಕವಾಗಿ ವಿಚಾರಣೆ ಮಾಡಲೆಂದು ಕರೆದುಕೊಂಡು ಹೋದರು. ಆ ಬಳಿಕ ನನ್ನನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರು. ಅಲ್ಲಿಗೆ ಹೋದ ಬಳಿಕ ತುಂಬಾ ಬೇಸರವಾಯಿತು. 23 -24 ರ ವಯಸಿಗೆ ಆ ನಾಲ್ಕು ಗೋಡೆಗಳ ಮಧ್ಯೆ ಇದ್ದೆ. ಅಲ್ಲಿರುವ ಜನ, ಸ್ಥಳ, ವಾತಾವಾರಣ ನೋಡಿ ಯಾಕೆ ಇವೆಲ್ಲಾ ಬೇಕಿತ್ತಾ ಅಂಥ ಅನ್ನಿಸಿತು. ಜೈಲಿನಲ್ಲಿ ನನ್ನ ಅನುಭವ ಹೇಗಿತ್ತು ಅಂದ್ರೆ, ನನ್ನ ರೀತಿಯೇ ಸಾಕಷ್ಟು ಜನ ಇರ್ತಾರೆ. ಏನೇನೋ ಕೇಸ್‌ಗಳು. ಅವರ ಮಧ್ಯೆ ನಾನು ಇದ್ದೆ ಅದಕ್ಕೆ ಏನು ಹೇಳೋದಂತೆಲ್ಲೇ ನನಗೆ ಗೊತ್ತಾಗ್ತಾ ಇಲ್ಲ” ಎಂದು ಹೇಳಿದ್ದಾರೆ.

“ಜೈಲಿನಲ್ಲಿ ಮೂರು ದಿನಕ್ಕೆ ಒಂದು ಸಲಿ ಫೋನ್‌ ಕೊಡ್ತಾರೆ. ಆಗ ನಾವು ಫ್ಯಾಮಿಲಿ ಜೊತೆ ಮಾತನಾಡಬಹುದು, ವಕೀಲರ ಜೊತೆ, ಯಾರ ಜೊತೆ ಬೇಕಾದರೂ ಮಾತನಾಡಬಹುದು. ನನ್ನ ಜೊತೆ ಮಾತನಾಡುವವರು ಇದ್ದರು, ಅನ್‌ ಲಿಮಿಟಿಡ್‌ ಕಾಲ್ಸ್‌ ಕೂಡ ಇತ್ತು. ಆದರೆ ನಾನು ಮಾತನಾಡುತ್ತಿರಲಿಲ್ಲ. ಅಲ್ಲಿದ್ದು ನಮಗೆ ವ್ಯಕ್ತಿಯ ಮೌಲ್ಯ ಗೊತ್ತಾಗುತ್ತದೆ. ನಾಲ್ಕು ಗೋಡೆಯೇ ನಿಮ್ಮ ಜೊತೆ ಏನೆಲ್ಲಾ ಆಯಿತೆಂದು ಹೇಳಿಕೊಡುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೌದಿಯಲ್ಲಿ ಮರಣದಂಡನೆಗೆ ಒಳಗಾದ ಕೇರಳದ ವ್ಯಕ್ತಿಗಾಗಿ 34 ಕೋಟಿ ರೂ ಸಂಗ್ರಹ: ಏನಿದು ಸ್ಟೋರಿ?

“ಸ್ಟೇಷನ್‌ನಲ್ಲಿ ಇದ್ದಾಗ ಅಕ್ಕ ಪಕ್ಕ ಇದ್ದವರ ಫೋನ್ ನೋಡುತ್ತಿದ್ದೆ. ತುಂಬಾ ನೆಗೆಟಿವ್ ಕಾಮೆಂಟ್ಸ್ ಬರುತ್ತಿತ್ತು. ಈ ವೇಳೆ ಮತ್ತೆ ನನ್ನ ಲೈಫ್ ನೆಗೆಟಿವ್ ಆಗಿಬಿಡ್ತು ಅಂತ ಬೇಸರಗೊಂಡಿದ್ದೆ. ನನ್ನ ಇಷ್ಟದ ಜನ, ಕುಟುಂಬ, ಊಟ, ಪೆಟ್ಸ್‌ ಏನೂ ಇಲ್ಲದೆ ನಾನು ಹೇಗೆ ಜೀವನ ಕಳೆದ ಅಂತ ನನಗೆ ಹೇಳೋಕೆ ಆಗ್ತಾ ಇಲ್ಲ. ನನಗೆ ತುಂಬಾ ಬೇಸರವಾಯಿತು. ನನಗೆ ತುಂಬಾನೇ ಖುಷಿ ಆದದ್ದು ಏನೆಂದರೆ ಟ್ರೋಲ್‌ ಪೇಜ್‌ ನವರು ನನಗೆ ಸಪೋರ್ಟ್‌ ಮಾಡಿದ್ದೀರಿ ಅದಕ್ಕೆ ಥ್ಯಾಂಕ್ಸ್”‌ ಎಂದು ಸೋನು ಹೇಳಿದ್ದಾರೆ.

“ಕಷ್ಟದಲ್ಲಿ ಯಾರು ಜೊತೆಗಿರುತ್ತಾರೆ ಎನ್ನುವುದು ಮುಖ್ಯ. ನನಗೆ ಅದು ಈ ಘಟನೆಯಿಂದ ಗೊತ್ತಾಯಿತು. ಜೈಲಿನಲ್ಲಿ ತುಂಬಾ ಸೊಳ್ಳೆ ಇರ್ತಿತ್ತು. ನಾವು ಹೊರಗೆ ನೋಡಿದ ಲೈಫ್ ಬೇರೆ, ಅಲ್ಲಿ ನೋಡಿದ ಲೈಫ್ ಬೇರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಅದನ್ನೆಲ್ಲಾ ನೋಡಿದೆ ಎನ್ನುವುದು ಬೇಸರ. ನಮ್ಮ ಫ್ಯಾಮಿಲಿ ಹಾಗೂ ಆಪ್ತರ ಸಹಾಯದಿಂದ ಬೇಗ ಹೊರಬಂದೆ. ನಿಯಮಗಳ ಪ್ರಕಾರ ನಾನು ಪ್ರಕರಣದ ಬಗ್ಗೆ ಮಾತನಾಡುವಂತಿಲ್ಲ. ಹಾಗಾಗಿ ಮಾತನಾಡಲಿಲ್ಲ” ಎಂದು ಸೋನು ಹೇಳಿದ್ದಾರೆ.

ಏನಿದು ಪ್ರಕರಣ: ಸೋನು ಗೌಡ ಇತ್ತೀಚೆಗೆ ಚಿಕ್ಕ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ದತ್ತು ಪಡೆದಿರುವ ರೀತಿ ನಿಯಮದ ಅನುಸಾರವಾಗಿಲ್ಲ ಎಂಬ ಕಾರಣಕ್ಕೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು. ಸೋನು ಗೌಡ ಇತ್ತೀಚೆಗೆ ಚಿಕ್ಕ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ದತ್ತು ಪಡೆದಿರುವ ರೀತಿ ನಿಯಮದ ಅನುಸಾರವಾಗಿಲ್ಲ ಎಂಬ ಕಾರಣಕ್ಕೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಶ್ರೀನಿವಾಸ್‌ ಗೌಡ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಏಪ್ರಿಲ್ 6ರಂದು ಕೇಂದ್ರ ಕಾರಾಗೃಹದಿಂದ ಜಾಮೀನು ಮೂಲಕ ಸೋನು ಹೊರ ಬಂದಿದ್ದರು.

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

ಅ.19-20ರಂದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ja

BBK11: ನೀವು ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು, ಜನರ ಮನಸ್ಸು ಗೆಲ್ಲೋದು ನಾನೇ.. ಜಗದೀಶ್

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.