Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Apr 13, 2024, 9:12 PM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಬಾಲಕಿಗೆ ಕಿರುಕುಳ: ಕೇಸು ದಾಖಲು
ಬದಿಯಡ್ಕ: ಐದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ 50ರ ಹರೆಯದ ವ್ಯಕ್ತಿಯ ವಿರುದ್ಧ ಬದಿಯಡ್ಕ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ. ಬದಿಯಡ್ಕ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದ ವ್ಯಕ್ತಿ ಬಾಲಕಿಗೆ ಕಿರುಕುಳ ನೀಡಿರುವುದಾಗಿ ದೂರಲಾಗಿದೆ.

ನಗ್ನ ಪ್ರದರ್ಶನ : ಸಜೆ
ಕಾಸರಗೋಡು: ವಿದ್ಯಾರ್ಥಿನಿಯ ಮುಂದೆ ದೋತಿ ಬಿಚ್ಚಿ ನಗ್ನತೆ ಪ್ರದರ್ಶಿಸಿದ ಪ್ರಕರಣದಲ್ಲಿ ಪಳ್ಳಿಕ್ಕೆರೆ ಇಲ್ಯಾಸ್‌ ನಗರದ ಅಬ್ದುಲ್ಲ(54)ನಿಗೆ ಹೊಸದುರ್ಗ ಫಾಸ್ಟ್‌ ಟ್ರ್ಯಾಕ್ ಸ್ಪೆಷಲ್‌ ನ್ಯಾಯಾಲಯ ಒಂದು ವರ್ಷ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಎರಡು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2022 ಮಾರ್ಚ್‌ 27ರಂದು ಬೆಳಗ್ಗೆ ಪಳ್ಳಿಕೆರೆಯಲ್ಲಿ 11 ವರ್ಷದ ಬಾಲಕಿಯ ಮುಂದೆ ನಗ್ನ ಪ್ರದರ್ಶನ ಮಾಡಿದ ಬಗ್ಗೆ ಬೇಕಲ ಪೊಲೀಸರು ಕೇಸು ದಾಖಲಿಸಿದ್ದರು.

ಗಾಂಜಾ ಸಹಿತ ಬಂಧನ
ಕಾಸರಗೋಡು: ಹೊಸದುರ್ಗ ತಾಲೂಕು ಪುದುಕೈ ವಿಲ್ಲೇಜ್‌ ವಾಳನ್ನೋರಡಿ ನಿವಾಸಿ ಶಾಜಿ ಪಿ. (49) ಎಂಬಾತನನ್ನು 1.250 ಕಿಲೋ ಗಾಂಜಾ ಸಹಿತ ಹೊಸದುರ್ಗ ಅಬಕಾರಿ ದಳ ಬಂಧಿಸಿದೆ. ನೋರ್ತ್‌ ಕೋಟ್ಟಚ್ಚೇರಿಯಲ್ಲಿ ಅಬಕಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಪತ್ತೆಯಾಯಿತು.

ವಾಟರ್‌ ಅಥಾರಿಟಿ ನೀಡಿದ ಬಿಲ್‌
ಗ್ರಾಹಕ ನ್ಯಾಯಾಲಯದಲ್ಲಿ ಅಸಿಂಧು
ಕಾಸರಗೋಡು: ಕುಡಿಯುವ ನೀರಿನ ಫಲಾನುಭವಿಗೆ ಕೇರಳ ವಾಟರ್‌ ಅಥಾರಿಟಿ ಎರಡು ತಿಂಗಳಿಗೆ ಮಿತಿಗಿಂತಲೂ ಹೆಚ್ಚಿನ ಮೊತ್ತ ಪಾವತಿಸುವಂತೆ ನೀಡಿದ್ದ ನೋಟಿಸ್‌ ಅನ್ನು ಗ್ರಾಹಕರ ವ್ಯಾಜ್ಯ ಪರಿಹಾರ ಫಾರಂ ಅಸಿಂಧುಗೊಳಿಸಿದೆ. ಮಾತ್ರವಲ್ಲ ದೂರುಗಾರರಾದ ಕುಡಿಯುವ ನೀರು ಫಲಾನುಭವಿಗೆ ವಾಟರ್‌ ಅಥಾರಿಟಿ 30 ದಿನಗಳೊಳಗಾಗಿ 5,000 ರೂ. ನಷ್ಟ ಪರಿಹಾರ ನೀಡುವಂತೆ ತಿಳಿಸಿದೆ.

ಇದರಂತೆ ಕಾಸರಗೋಡು ಪಿಲಿಕುಂಜೆ ಕ್ಷೇತ್ರ ರಸ್ತೆಯ ಶ್ರೀ ಕೃಷ್ಣ ನಿವಾಸ್‌ನ ಕೆ.ಬಾಲಕೃಷ್ಣ ರಾವ್‌ ಅವರಿಗೆ ಕೇರಳ ವಾಟರ್‌ ಅಥಾರಿಟಿಯ ಡಬ್ಲ್ಯೂ ಎಸ್‌ಪಿ ಸಬ್‌ ಡಿವಿಶನ್‌ 5,000 ರೂ. ನಷ್ಟ ಪರಿಹಾರ ನೀಡಬೇಕಾಗಿದೆ.

ಕೆ.ಬಾಲಕೃಷ್ಣ ರಾವ್‌ ಪ್ರತಿ ತಿಂಗಳು ಸರಾಸರಿ 264 ಯೂನಿಟ್‌ ನೀರು ಬಳಸುತ್ತಿದ್ದರು. ಆದರೆ 2022 ಎಪ್ರಿಲ್‌ 12ರಂದು ನೀಡಿದ ಬಿಲ್‌ನಲ್ಲಿ ಎರಡು ತಿಂಗಳ ಮೊತ್ತವಾಗಿ 8,356 ರೂ. ಪಾವತಿಸುವಂತೆ ತಿಳಿಸಲಾಗಿದೆ. ಈ ಬಗ್ಗೆ ಬಾಲಕೃಷ್ಣ ರಾವ್‌ ಅವರು ವಾಟರ್‌ ಅಥಾರಿಟಿಯನ್ನು ಸಂಪರ್ಕಿಸಿ ವಿಚಾರಿಸಿದರೂ ಸೂಕ್ತ ಉತ್ತರ ಲಭಿಸಿಲ್ಲ. ಆದರೆ ಮೊತ್ತವನ್ನು ಪಾವತಿಸಬೇಕೆಂದು ತಿಳಿಸಿದ ಹಿನ್ನೆಲೆಯಲ್ಲಿ ಬಾಲಕೃಷ್ಣ ರಾವ್‌ ಗ್ರಾಹಕರ ವ್ಯಾಜ್ಯ ಪರಿಹಾರ ಫಾರಂ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.