Vijayapura; ಸುರಕ್ಷಿತವಾಗಿ ಬದುಕಿಬಂದ ಸಾತ್ವಿಕಗೆ ಸಿದ್ಧಲಿಂಗ ಮಹಾರಾಜ ತೊಟ್ಟಿಲಶಾಸ್ತ್ರ

ಕೊಳವೆಬಾವಿಯಿಂದ ಬದುಕಿ ಬಂದ ಸಾತ್ವಿಕಗಾಗಿ ಪುರಾಣದ ಹರಕೆ ತೀರಿಸಿದ ಸ್ವಾಮೀಜಿ

Team Udayavani, Apr 15, 2024, 11:39 AM IST

Vijayapura; ಸುರಕ್ಷಿತವಾಗಿ ಬದುಕಿಬಂದ ಸಾತ್ವಿಕಗೆ ಸಿದ್ಧಲಿಂಗ ಮಹಾರಾಜ ತೊಟ್ಟಿಲಶಾಸ್ತ್ರ

ವಿಜಯಪುರ: ಕೊಳವೆ ಬಾವಿಗೆ ಬಿದ್ದು ಸುರಕ್ಷಿತವಾಗಿ ರಕ್ಷಿಸಲ್ಪಟ್ಟ ಸಾತ್ವಿಕನಿಗಾಗಿ ಹರಕೆ ಹೊತ್ತಿದ್ದ ಸ್ವಾಮೀಜಿಯೊಬ್ಬರು ಹರಕೆ ತೀರಿಸಿದ್ದಾರೆ.

ಏ.3 ರಂದು ಸಂಜೆ ವೇಳೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸಾತ್ವಿಕ್ ಮುಜಗೊಂಡ 14 ತಿಂಗಳ ಮಗು ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದಿದ್ದ. ಈ ಸಂದರ್ಭದಲ್ಲಿ ಹಲವರು ಸಾತ್ವಿಕ ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರಬರಲಿ ಎಂದು ವಿವಿಧ ದೈವಗಳಿಗೆ ಹರಕೆ ಹೊತ್ತಿದ್ದರು.

ಅದೇ ರೀತಿ ಕೊಲ್ಹಾರ ಪಟ್ಟಣದ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಶ್ರೀಗಳು ಸಾತ್ವಿಕ ಸುರಕ್ಷಿತವಾಗಿ ಹೊರಬಂದರೆ ತಮ್ಮ ಮಠದಲ್ಲಿ ಲಚ್ಯಾಣ ಸಿದ್ಧಲಿಂಗ ಮಹಾರಾಜರ ಪುರಾಣ ಆರಂಭಿಸುವುದಾಗಿ ಹರಕೆ ಹೊತ್ತಿದ್ದರು.

ಕೇವಲ 21 ಗಂಟೆಯಲ್ಲೇ ವಿವಿಧ ರಕ್ಷಣಾ ತಂಡಗಳು ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದವು.

ಹೀಗಾಗಿ ಕೊಲ್ಹಾರ ದಿಗಂಬರೇಶ್ವರ ಮಠಾಧೀಶ ಕಲ್ಲಿನಾಥ ಶ್ರೀಗಳು ತಮ್ಮ ಮಠದಲ್ಲಿ ಸಿದ್ಧಲಿಂಗ ಮಹಾರಾಜರ ಪುರಾಣ ಆರಂಭಿಸುವ ಮೂಲಕ ಹರಕೆ ತೀರಿಸಿದ್ದಾರೆ.

ಸಿದ್ಧಲಿಂಗ ಮಹಾರಾಜರ ಪುರಾಣದ ಸಂದರ್ಭದಲ್ಲಿ ಬಾಲ ಸಿದ್ಧಲಿಂಗನ ತೊಟ್ಟಿಲ ಶಾಸ್ತ್ರ ಸಂದರ್ಭದಲ್ಲಿ ಸಾತ್ವಿಕನ ತಾಯಿ ಪೂಜಾ ಮುಜಗೊಂಡ ಅವರಿಂದಲೇ ಸಾತ್ವಿಕನನ್ನೇ ತೊಟ್ಟಿಲಲ್ಲಿ ಹಾಕಿ ಶಾಸ್ತ್ರೋಕ್ತವಾಗಿ ಸಿದ್ಧಲಿಂಗ ಎಂದು ನಾಮಕರಣ ಮಾಡಿ ಹರಕೆ ತೀರಿಸಿದ್ದಾರೆ.

ಸಾಮಾನ್ಯವಾಗಿ ಪುರಾಣ ಕಾರ್ಯಕ್ರಮದಲ್ಲಿ ಶರಣರು, ಮಹಾತ್ಮರ ಜನನದ ಸನ್ನಿವೇಶದ ಸಂದರ್ಭದ ಬಂದಾಗ ತೊಟ್ಟಿಲಿಗೆ ಗೊಂಬೆಗಳನ್ನು ಹಾಕಿ ಶಾಸ್ತ್ರ ಮಾಡುತ್ತಾರೆ. ಆದರೆ ಕೊಲ್ಹಾರ ದಿಗಂಬರೇಶ್ವರ ಮಠಾಧೀಶರು ಮರುಜನ್ಮ ಪಡೆದ ಸಾತ್ವಿಕನನ್ನು ತಾಯಿ ಪೂಜಾ ಮೂಲಕ ತೊಟ್ಟಿಲಿಗೆ ಹಾಕಿಸಿ ಸಿದ್ಧಲಿಂಗ ಮಹಾರಾಜರ ತೊಟ್ಟಿಲ ಶಾಸ್ತ್ರ ಮಾಡಿ ಹರಕೆ ತೀರಿಸಿ ಗಮನ ಸೆಳೆದಿದ್ದಾರೆ.

ಮತ್ತೊಂದೆಡೆ ಸಾತ್ವಿಕ ಹೆತ್ತವರು ಕೂಡ ತಮ್ಮ ಮಗ ಕೊಳವೆ ಬಾವಿ ಗಂಡಾಂತರದಿಂದ ಪಾರಾಗಿ ಬಂದರೆ ಗ್ರಾಮದ ಆರಾಧ್ಯ ದೈವ ಲಚ್ಯಾಣ ಸಿದ್ಧಲಿಂಗ ಮಹಾರಾಜರ ಹೆಸರನ್ನೇ ಮರು ನಾಮಕರಣ ಮಾಡುವುದಾಗಿ ಹರಕೆ ಹೊತ್ತಿದ್ದಾರೆ.

ಏ.28 ರಂದು ಲಚ್ಯಾಣ ಸಿದ್ಧಲಿಂಗ ಮಹಾರಾಜರ ಜಾತ್ರೆ ಸಂದರ್ಭದಲ್ಲಿ ಸಾತ್ವಿಕಗೆ ಸಿದ್ಧಲಿಂಗ ಮಹಾರಾಜರ ಎಂದು ಮರು ನಾಮಕರಣ ಮಾಡುವ ಸಿದ್ಧತೆಯಲ್ಲಿದ್ದಾರೆ. ಅದಕ್ಕೂ ಮುನ್ನವೇ ಕೊಲ್ಹಾರ ದಿಗಂಬರೇಶ್ವರ ಮಠಾಧೀಶರು ಸಿದ್ಧಲಿಂಗ ಮಹಾರಾಜರ ಪುರಾಣದ ಸಂದರ್ಭದಲ್ಲಿ ಸಾತ್ವಿಕನನ್ನು ತೊಟ್ಟಿಲಿಗೆ ಹಾಕಿ ಶಾಸ್ತ್ರೋಕ್ತವಾಗಿ ಸಿದ್ಧಲಿಂಗ ಎಂದು ನಾಮಕರಣ ಮಾಡಿದ್ದಾರೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.