![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 16, 2024, 2:39 PM IST
ಬೆಂಗಳೂರು: ಸೆಕ್ಸ್ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುವುದಲ್ಲದೆ, ಕಾಲ್ಗರ್ಲ್ಸ್ ಗಳನ್ನು ಮನೆಗೆ ಕರೆಯಿಸಿಕೊಂಡು ತನ್ನ ಎದುರೇ ಅಸಭ್ಯವಾಗಿ ವರ್ತಿಸುತ್ತಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪತಿಯ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜೆ.ಪಿ.ನಗರ ನಿವಾಸಿ 28 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆಕೆಯ ಪತಿ ವಿಘ್ನೇಶ್ವರನ್(36), ಅತ್ತೆ ವಿಜಯಲಕ್ಷ್ಮೀ (60), ಮಾವ ಕಲೈಸೆಲ್ವನ್(63), ನಾದಿನಿ ಪ್ರಿಯದರ್ಶಿನಿ(30) ಮೇಲೆ ಕೇಸು ದಾಖಲಿಸಲಾಗಿದೆ.
ದೂರುದಾರೆ ಮೊದಲೇ ಮದುವೆಯಾಗಿದ್ದು, ಕೌಟುಂಬಿಕ ವಿಚಾರವಾಗಿ ಪತಿಯಿಂದ ದೂರವಾಗಿ ಹೈದ್ರಾಬಾದ್ನಲ್ಲಿ ವಾಸವಾಗಿದ್ದರು. ಕಾಸ್ಮೋಟಾ ಲೋಜಿಸ್ಟ್ ವೃತ್ತಿ ಮಾಡುತ್ತಿದ್ದ ಸಂತ್ರಸ್ತೆಗೆ ಕೆಲ ವರ್ಷಗಳ ಹಿಂದೆ ಚೆನ್ನೈನಲ್ಲಿ ವಿಘ್ನೇಶ್ವರನ್ ಪರಿಚಯವಾಗಿ ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅಲ್ಲದೆ, ವಿಘ್ನೇಶ್ವರನ್, ಸಂತ್ರಸ್ತೆಗೆ ಮೊದಲ ಪತಿಯಿಂದ ವಿಚ್ಛೇಧನ ಪಡೆಯಲು ಸಹಾಯ ಕೂಡ ಮಾಡಿದ್ದ. ಬಳಿಕ ಇಬ್ಬರು ಹಿರಿಯ ಸಮ್ಮುಖದಲ್ಲೇ 2018ರಲ್ಲಿ ಮದುವೆಯಾಗಿದ್ದರು. ದಂಪತಿ ಹೈದ್ರಾಬಾದ್ನಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು.
ಈ ಮಧ್ಯೆ ವಿಘ್ನೇಶ್ವರನ್ ಪೋಷಕರು ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ಮನೆಯಲ್ಲಿ ದಂಪತಿ ನಡುವೆ ಜಗಳ, ಕಿರುಕುಳ ಆರಂಭವಾಗಿತ್ತು. ಈ ನಡುವೆ ಸಂತ್ರಸ್ತೆಗೆ ಒಂದು ಗುಂಡು ಮಗುವಾಗಿದೆ. ಆಗಲೂ, ಆ ಮಗು ಮತ್ತು ಸಂತ್ರಸ್ತೆಯನ್ನು ಸರಿಯಾಗಿ ನೋಡಿಕೊಂಡಿಲ್ಲ. ಮೊದಲ ಪತಿಯ ವಿಚಾರ ಪ್ರಸ್ತಾಪಿಸಿ ನಿಂದಿಸುತ್ತಿದ್ದರು. ಮಗು ಮತ್ತು ತನ್ನನ್ನು ಕೊಲ್ಲುವುದಾಗಿ ನಾದಿನಿ ಪ್ರಿಯದರ್ಶಿನಿ ಬೆದರಿಕೆ ಹಾಕಿದ್ದಾಳೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.
ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯ: ಆರೋಪಿ ವಿಘ್ನೇಶ್ವರನ್, ಪತ್ನಿಗೆ ಸೆಕ್ಸ್ ವಿಡಿಯೋ ತೋರಿಸಿ ಇದೇ ಮಾದರಿಯಲ್ಲಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾನೆ. ಇದೇ ವಿಚಾರವಾಗಿ ಮನೆಯಲ್ಲೇ ಜಗಳ ನಡೆಯುತ್ತಿತ್ತು. 2023ರ ಮೇ ನಲ್ಲಿ ಹೈದರಾಬಾದ್ನಿಂದ ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆತಂದಿದ್ದಾನೆ. ಇಲ್ಲಿಯೂ ಕಿರಕುಳ ಮುಂದುವರಿಸಿದ್ದಾನೆ. ಜತೆಗೆ ಕಾಲ್ ಗರ್ಲ್ಸ್ ಮನೆಗೆ ಕರೆಸಿಕೊಂಡು, ತನ್ನ ಎದುರೇ ಅಸಭ್ಯವಾಗಿ ವರ್ತಿಸಿ ಮಾನಸಿಕ ಕಿರುಕುಳ ನೀಡಿದ್ದಾನೆ. ಈ ಸಂಬಂಧ ಹಿಂದೆ ಪೊಲೀಸರಿಗೆ ದೂರು ನೀಡಿದ್ದಾಗ ಇನ್ನು ಮುಂದೆ ಆ ರೀತಿ ವರ್ತಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದ. ಇದೀಗ ಮತ್ತೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಅತ್ತೆ, ಮಾವ, ನಾದಿನಿಯೂ ಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.