Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು


Team Udayavani, Apr 16, 2024, 5:27 PM IST

4-health

ಹದಿಹರಯ ಎಂಬುದು ಮಗು ಪ್ರೌಢಾವಸ್ಥೆ ತಲುಪಿದಲ್ಲಿಂದ ಯೌವ್ವನವನ್ನು ಮುಟ್ಟುವ ವರೆಗಿನ ಕಾಲಾವಧಿ. ಪ್ರೌಢ ಮನುಷ್ಯನೊಬ್ಬನ ಬದುಕಿನಲ್ಲಿ ಈ ಅವಧಿಯನ್ನು ಚಿನ್ನದಂತಹ ಸಮಯ ಎಂದು ಪರಿಗಣಿಸಲಾಗುತ್ತದೆ.

ಈ ಅವಧಿಯಲ್ಲಿ ಮಕ್ಕಳು ಎತ್ತರ ಮತ್ತು ತೂಕದಲ್ಲಿ ಹೆಚ್ಚಳದ ಜತೆಗೆ ಇತರ ಹಾರ್ಮೋನ್‌ ಬದಲಾವಣೆಗಳನ್ನು ಅನುಭವಿಸುತ್ತಾರೆ. ಹದಿಹರಯದವರು ಬಹಳ ಸುಲಭವಾಗಿ ಇತರರಿಂದ, ಜಾಹೀರಾತುಗಳಿಂದ ಪ್ರಭಾವಕ್ಕೊಳಗಾಗುತ್ತಾರೆ, ಈ ಸಮಯದಲ್ಲಿ ಬಾಹ್ಯ ಅಂಶಗಳ ಪ್ರಭಾವಕ್ಕೆ ಒಳಗಾಗುವುದರಿಂದ ಒತ್ತಡ, ಖನ್ನತೆ, ಚಿಂತೆಯನ್ನು ಅನುಭವಿಸುತ್ತಾರೆ. ತಮ್ಮ ಗೆಳೆಯ-ಗೆಳತಿಯರಂತೆ ಇರಬೇಕು ಎಂದು ಬಯಸುವುದರಿಂದಾಗಿ ಬಹಳ ಸಪೂರ ಅಥವಾ ತೀರಾ ದಪ್ಪ ಆಗುತ್ತಾರೆ. ಇದಕ್ಕಾಗಿ ಅವರು ಕ್ರ್ಯಾಶ್‌ ಡಯಟ್‌, ಸೆಲ್ಫ್-ಎಮೆಸಿಸ್‌, ವೈದ್ಯರ ಸಲಹೆ ಪಡೆಯದೆಯೇ ತೂಕ ಗಳಿಸುವ ಅಥವಾ ಕಳೆದುಕೊಳ್ಳುವ ಔಷಧಗಳನ್ನು ತೆಗೆದುಕೊಳ್ಳುವುದು ಇತ್ಯಾದಿಗಳನ್ನು ಮಾಡುವ ಮೂಲಕ ಪೌಷ್ಟಿಕಾಂಶ ಕೊರತೆಗೆ ಒಳಗಾಗುತ್ತಾರೆ, ವೈದ್ಯಕೀಯ ಸಲಹೆ- ಆರೈಕೆ ಅಗತ್ಯವಾಗುವಂತಹ ಮಾನಸಿಕ ತೊಂದರೆಗಳಿಗೆ ತುತ್ತಾಗುತ್ತಾರೆ.

ಸಹಜ ಆರೋಗ್ಯದ ಹದಿಹರಯದ ವ್ಯಕ್ತಿಯೊಬ್ಬರು ಒಂದು ದಿನಕ್ಕೆ 1,800ರಿಂದ 3,000 ಕೆಸಿಎಎಲ್‌ ಮತ್ತು 35ರಿಂದ 60 ಗ್ರಾಂ ಪ್ರೊಟೀನ್‌ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳು, ತರಕಾರಿಗಳು, ಹಸುರು ಹದಿಹರಯದಲ್ಲಿ ಸೊಪ್ಪು ತರಕಾರಿಗಳು, ಕೊಬ್ಬುಗಳು ಮತ್ತು ಎಣ್ಣೆಕಾಳುಗಳು, ನಾರಿನಂಶದಂತಹ ಎಲ್ಲ ಆಹಾರ ವರ್ಗಗಳಿಂದ ಆಹಾರ ವಸ್ತುಗಳನ್ನು ಮತ್ತು ನೀರನ್ನು ಸೇವಿಸಬೇಕು. ಮೇಲೆ ಹೇಳಲಾದ ಎಲ್ಲ ಆಹಾರ ವರ್ಗಗಳ ಆಹಾರವಸ್ತುಗಳನ್ನು ಒಳಗೊಂಡಿರುವ ಸಮತೋಲಿತ ಆಹಾರ ಮತ್ತು ಯಾವುದೇ ವಿಧವಾದ ನಿಯಮಿತ ದೈಹಿಕ ಚಟುವಟಿಕೆಗಳು ಆರೋಗ್ಯಪೂರ್ಣವಾಗಿ ಇರುವುದಕ್ಕೆ ಮುಖ್ಯ. ಅತಿಯಾದ ಆಹಾರ ಸೇವನೆಯಿಂದ ಅಧಿಕ ದೇಹತೂಕವೂ ಕಡಿಮೆ ಆಹಾರ ಸೇವನೆಯಿಂದ ಪೌಷ್ಟಿಕಾಂಶ ಕೊರತೆಯೂ ಉಂಟಾಗಬಹುದು.

ಬೆಳಗ್ಗೆ ಉತ್ತಮವಾದ, ಆರೋಗ್ಯಪೂರ್ಣವಾದ ಉಪಾಹಾರವನ್ನು ಸೇವಿಸುವುದು ಆರೋಗ್ಯಯುತವಾಗಿ ಇರುವುದಕ್ಕೆ ಮೊದಲ ಹೆಜ್ಜೆ. ಇಂತಹ ಬೆಳಗಿನ ಉಪಾಹಾರವು ಮಕ್ಕಳನ್ನು ಜಾಗೃತ ಸ್ಥಿತಿಯಲ್ಲಿ ಇರಿಸುತ್ತದೆ ಮಾತ್ರವಲ್ಲದೆ ಮುಂದಿನ ಊಟ-ಉಪಾಹಾರದ ಸಂದರ್ಭದಲ್ಲಿ ಅತಿಯಾಗಿ ಆಹಾರ ಸೇವಿಸದಂತೆ ತಡೆಯುತ್ತದೆ.

ಊಟ-ಉಪಾಹಾರಗಳ ನಡು ನಡುವೆ ಒಂದು ಹಣ್ಣು ಅಥವಾ ಒಂದು ಹಿಡಿ ಒಣಹಣ್ಣು ಸೇವಿಸುವುದರಿಂದ ಮಕ್ಕಳು ಸಕ್ರಿಯರಾಗಿರುತ್ತಾರೆ. ಕಾಬೊìಹೈಡ್ರೇಟ್‌ ಗಳು, ಪ್ರೊಟೀನ್‌ಗಳು, ತರಕಾರಿಗಳು, ಹಾಲಿನ ಉತ್ಪನ್ನಗಳನ್ನು ಒಳಗೊಂಡಿರುವ ಸಮತೋಲಿತ ಮಧ್ಯಾಹ್ನದ ಉಪಾಹಾರವು ಶಾಲೆಯಲ್ಲಿ ಉಳಿದ ಅವಧಿಗೆ ಅವರಿಗೆ ಬೇಕಾದ ಇಂಧನವನ್ನು ಒದಗಿಸುತ್ತದೆ.

ಸಂಜೆ ಲಘು ಉಪಾಹಾರ, ಆ ಬಳಿಕ ಯಾವುದೇ ಸ್ವರೂಪದ ದೈಹಿಕ ಚಟುವಟಿಕೆಗಳು ಅವರಿಗೆ ಶಾಲೆ ಕೆಲಸ, ಮನೆಗೆಲಸ, ಅಧ್ಯಯನದಲ್ಲಿ ಏಕಾಗ್ರತೆಯನ್ನು ಒದಗಿಸಿಕೊಡುತ್ತವೆ. ಇದಾದ ಬಳಿಕ ಬೇಗನೆ ಲಘುವಾದ ರಾತ್ರಿಯ ಭೋಜನ ಒದಗಿಸಬೇಕು.

ಸಾಮಾನ್ಯವಾಗಿ ರಾತ್ರಿ ನಿದ್ದೆ ಹೋಗುವುದಕ್ಕಿಂತ ಎರಡು ತಾಸು ಮುಂಚಿತವಾಗಿ ರಾತ್ರಿಯೂಟ ಮಾಡುವುದು ಹಿತಕರ. ಸರಿಯಾದ ಸಮಯದಲ್ಲಿ, ಸರಿಯಾದ ಪ್ರಮಾಣದಲ್ಲಿ ಸರಿಯಾದ ಪೌಷ್ಟಿಕಾಂಶಗಳನ್ನು ಹೊಂದಿರುವ ಆಹಾರ ಸೇವನೆಯು ಆರೋಗ್ಯಪೂರ್ಣ ಜೀವನ ನಡೆಸುವುದರ ಒಳಗುಟ್ಟು ಆಗಿದೆ.

ಅರುಣಾ ಮಲ್ಯ,

ಹಿರಿಯ ಪಥ್ಯಾಹಾರ ತಜ್ಞೆ,

ಕೆಎಂಸಿ ಆಸ್ಪತ್ರೆ,

ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಪಥ್ಯಾಹಾರ ವಿಭಾಗ, ಕೆಎಂಸಿ, ಮಂಗಳೂರು)

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

10-health

Asthma: ಎತ್ತರ ಪ್ರದೇಶಗಳು ಮತ್ತು ಅಸ್ತಮಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.