Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!


Team Udayavani, Apr 16, 2024, 6:11 PM IST

6-thyroid

ಥೈರಾಯ್ಡ್ ಗ್ರಂಥಿಯ ಕಾರ್ಯಚಟುವಟಿಕೆಗಳಲ್ಲಿ ತೊಂದರೆ ತಲೆದೋರಿದಾಗ ಗೊಯಟರ್‌, ಹೈಪೊಥೈರಾಯ್ಡಿಸಂ ಮತ್ತು ಹೈಪರ್‌ ಥೈರಾಯ್ಡಿಸಂನಂತಹ ಅನಾರೋಗ್ಯಗಳು ಉಂಟಾಗುತ್ತವೆ. ಗೊಯಟರ್‌ ಎನ್ನುವುದು ಥೈರಾಯ್ಡ್ ಗ್ರಂಥಿಯ ಸಂರಚನೆಗೆ ಸಂಬಂಧಿಸಿದ ತೊಂದರೆ, ಇದರಿಂದಾಗಿ ಥೈರಾಯ್ಡ್ ಗ್ರಂಥಿ ಊದಿಕೊಳ್ಳುತ್ತದೆ. ಹೈಪೊಥೈರಾಯ್ಡಿಸಂ ಮತ್ತು ಹೈಪರ್‌ ಥೈರಾಯ್ಡಿಸಂಗಳು ಕ್ರಮವಾಗಿ ಥೈರಾಯ್ಡ್ ಹಾರ್ಮೋನ್‌ ಮಟ್ಟ ಕಡಿಮೆಯಾದಾಗ ಮತ್ತು ಹೆಚ್ಚಾದಾಗ ತಲೆದೋರುವ ಸಮಸ್ಯೆಗಳು. ಈ ಅನಾರೋಗ್ಯಗಳನ್ನು ನಿರ್ಲಕ್ಷಿಸಿದರೆ ಕೆಲವೊಮ್ಮೆ ಮಾರಕವಾದೀತು.

ಹೈಪರ್‌ಥೈರಾಯ್ಡಿಸಂ – ಥೈರಾಯ್ಡ್ ಪ್ರವಾಹ

ಅನಿಯಂತ್ರಿತವಾದ ಮತ್ತು ಪತ್ತೆಯಾಗದ ಹೈಪರ್‌ಥೈರಾಯ್ಡಿಸಂ ಅಥವಾ ಈ ಸಮಸ್ಯೆಗೆ ತೆಗೆದುಕೊಳ್ಳುತ್ತಿರುವ ಔಷಧವನ್ನು ಹಠಾತ್ತಾಗಿ ಸ್ಥಗಿತಗೊಳಿಸಿದರೆ ಥೈರಾಯ್ಡ್ ಹಾರ್ಮೋನ್‌ ಪ್ರವಾಹದೋಪಾದಿಯಲ್ಲಿ ಉತ್ಪಾದನೆಯಾಗಬಲ್ಲುದು. ಈ ಸಮಸ್ಯೆ ತಲೆದೋರಿದಾಗ ನಮ್ಮ ದೇಹದ ಪ್ರತಿಯೊಂದು ಅಂಗವೂ ಅತಿಯಾದ ಕಾರ್ಯಚಟುವಟಿಕೆಯಲ್ಲಿ ತೊಡಗಬಹುದು – ಈ ಸ್ಥಿತಿಯನ್ನು ಬೇಗನೆ ಪತ್ತೆಹಚ್ಚಿ ಚಿಕಿತ್ಸೆ ಒದಗಿಸದೆ ಇದ್ದಲ್ಲಿ ಪ್ರಾಣಾಪಾಯಕ್ಕೆ ಕಾರಣವಾದೀತು.

ಹೈಪರ್‌ಥೈರಾಯ್ಡಿಸಂ ಉಂಟಾದಾಗ ರೋಗಿ ದೇಹದ ತಾಪಮಾನದಲ್ಲಿ ಹೆಚ್ಚಳ, ಬೇಧಿ, ಹೃದಯ ಬಡಿತ ಹೆಚ್ಚಳ, ಗೊಂದಲ, ಕಾಲುಗಳು ಊದಿಕೊಳ್ಳುವುದು, ನಿಶ್ಶಕ್ತಿ, ತೂಕ ನಷ್ಟದಂತಹ ಲಕ್ಷಣಗಳನ್ನು ಅನುಭವಿಸಬಹುದು. ಒತ್ತಡ, ಸೋಂಕು, ಶಸ್ತ್ರಚಿಕಿತ್ಸೆಗಳು ಮತ್ತು ಹೃದಯಾಘಾತದ ಸಂದರ್ಭದಲ್ಲಿಯೂ ಇಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದಾಗಿದೆ.

ಹೈಪೊಥೈರಾಯ್ಡಿಸಂ – ಮೈಕ್ಸೆಡೇಮಾ ಕೋಮಾ

ತೀವ್ರ ತರಹದ ಹೈಪೊಥೈರಾಯ್ಡಿಸಂಗೆ ಒಳಗಾಗಿ, ಚಿಕಿತ್ಸೆಗೊಳಪಡದ ರೋಗಿಗಳು ಮೈಕ್ಸೆಡೇಮಾ ಕೋಮಾಕ್ಕೆ ತುತ್ತಾಗಬಹುದಾಗಿದೆ. ಈ ರೋಗಿಗಳು ಸಾಮಾನ್ಯವಾಗಿ ಕಾಲುಗಳು ಮತ್ತು ಮುಖದಲ್ಲಿ ಊತ, ಮಾತು ನಿಧಾನವಾಗುವುದು, ತೂಕ ಹೆಚ್ಚುವುದು, ನಿಶ್ಶಕ್ತಿ, ಜೊಂಪು ಮತ್ತು ಕೊಮಾದ ಲಕ್ಷಣಗಳನ್ನು ಹೊಂದಿರುತ್ತಾರೆ. ಈ ಅನಾರೋಗ್ಯದಿಂದ ಸಾವನ್ನಪ್ಪುವ ಪ್ರಮಾಣ ಹೆಚ್ಚಿರುವುದರಿಂದ ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಆರೈಕೆ-ಚಿಕಿತ್ಸೆ ಆವಶ್ಯಕವಾಗಿರುತ್ತದೆ.

ಗೊಯಟರ್‌

ಸಾಮಾನ್ಯವಾಗಿ ಬಹುತೇಕ ಎಲ್ಲ ಗೊಯಟರ್‌ ಪ್ರಕರಣಗಳು ಪ್ರಾಣಾಪಾಯಕರ ಅಲ್ಲದಿದ್ದರೂ ಎಂಡೊಕ್ರೈನಾಲಜಿ ತಜ್ಞರಾಗಿ ನಾವು ಇದರ ಹಿಂದೆ ಇರಬಹುದಾದ ಕ್ಯಾನ್ಸರ್‌ ಸಾಧ್ಯತೆಗಳ ಬಗ್ಗೆ ಸಂದೇಹ ಪಡುತ್ತೇವೆ. ಹಿನ್ನೆಲೆಯ ಕಾರಣಗಳನ್ನು ಅವಲಂಬಿಸಿ ಥೈರಾಯ್ಡ್ ಕ್ಯಾನ್ಸರ್‌ಗಳು ನಿಧಾನಗತಿಯಲ್ಲಿ ಅಥವಾ ಕ್ಷಿಪ್ರಗತಿಯಲ್ಲಿ ಉಲ್ಬಣಗೊಳ್ಳುವಂಥವು ಆಗಿರಬಹುದು.

ಥೈರಾಯ್ಡ್ ಕ್ಯಾನ್ಸರ್‌ಗಳಲ್ಲಿ ಪ್ಯಾಪಿಲರಿ, ಫಾಲಿಕ್ಯುಲರ್‌, ಮೆಡ್ಯುಲರಿ ಮತ್ತು ಆನಾಪ್ಲಾಸ್ಟಿಕ್‌ ಎಂಬ ವಿಧಗಳಿವೆ. ಥೈರಾಯ್ಡನ ಅಲ್ಟ್ರಾಸೌಂಡ್‌ ಮತ್ತು ಎಫ್ಎನ್‌ಎ (ಫೈನ್‌ ನೀಡಲ್‌ ಆಸ್ಪಿರೇಶನ್‌)ಗಳನ್ನು ಉಪಯೋಗಿಸಿ ಗೊಯಟರ್‌ನ ವಿಶ್ಲೇಷಣೆ ನಡೆಸಲಾಗುತ್ತದೆ ಮತ್ತು ಶಸ್ತ್ರಚಿಕಿತ್ಸೆಯನ್ನು ಯೋಜಿಸಲಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಥೈರಾಯ್ಡ್ ಸಮಸ್ಯೆ ಸಾಮಾನ್ಯ ವಾದುದಾದರೂ ಅದನ್ನು ನಿರ್ಲಕ್ಷಿಸಬಾರದು. ಕ್ಲಪ್ತ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು.

-ಡಾ| ಶ್ರೀನಾಥ್‌ ಪಿ. ಶೆಟ್ಟಿ

ಕನ್ಸಲ್ಟಂಟ್‌, ಎಂಡೊಕ್ರೈನಾಲಜಿ ವಿಭಾಗ

ಕೆಎಂಸಿ ಆಸ್ಪತ್ರೆ,

ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಎಂಡೊಕ್ರೈನಾಲಜಿ ವಿಭಾಗ, ಕೆಎಂಸಿ, ಮಂಗಳೂರು)

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

10-health

Asthma: ಎತ್ತರ ಪ್ರದೇಶಗಳು ಮತ್ತು ಅಸ್ತಮಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.