![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 18, 2024, 1:11 PM IST
ಬೆಂಗಳೂರು: ಅಂತರ್ಜಾಲದಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಣೆ ಮಾಡುವ ಜತೆಗೆ ಬೇರೆಯವರಿಗೆ ವರ್ಗಾವಣೆ ಮಾಡಿದ್ದ ಸೆಕ್ಯೂರಿಟಿ ಗಾರ್ಡ್ನನ್ನು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಸುನೈ ಗ್ರಾಮದ ನಿವಾಸಿ ನೂರ್ ಇಸ್ಲಾಂ ಚೌದ್ರಿ(37) ಬಂಧಿತ.
ಸಿಐಡಿಯ ಸೈಬರ್ ಕ್ರೈಂ ವಿಭಾಗದ ಪೊಲೀಸರ ಸೂಚನೆ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಪೂರ್ವ ವಿಭಾಗ ಸೆನ್ ಠಾಣೆ ಪೊಲೀಸರು ಹೇಳಿದರು.
ಆರೋಪಿ ನೂರ್ ಇಸ್ಲಾಂ ಚೌದ್ರಿ 2 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಫ್ರೆಜರ್ ಟೌನ್ನಲ್ಲಿ ವಾಸವಾಗಿದ್ದ. ನಗರದ ಹೈನ್ಸ್ ರಸ್ತೆಯಲ್ಲಿರುವ ಎಟಿಎಂ ಕೇಂದ್ರಕ್ಕೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಆರೋಪಿ ತನ್ನ ಮೊಬೈಲ್ ನಲ್ಲಿ ಆನ್ಲೈನ್ ಮೂಲಕ ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸುತ್ತಿದ್ದ. ಜತೆಗೆ ಅದನ್ನು ಬೇರೆಯವರಿಗೆ ವರ್ಗಾವಣೆ ಮಾಡಿದ್ದ.
ಈ ಮಾಹಿತಿ ಸಂಗ್ರಹಿಸಿದ್ದ ಕೇಂದ್ರ ಗೃಹ ಇಲಾಖೆ ಅಧೀನದಲ್ಲಿರುವ ಎನ್ಸಿಆರ್ಬಿ ಪೋರ್ಟಲ್ ವಿಭಾಗ ರಾಜ್ಯದ ಸಿಐಡಿ ಸೈಬರ್ ಅಧಿಕಾರಿಗಳಿಗೆ ಸೈಬರ್ ಟಿಪ್ಲೈನ್ ನಂಬರ್ ಸಹಿತ ಮಾಹಿತಿ ನೀಡಿತ್ತು. ಇಲ್ಲಿನ ಸಿಐಡಿ ಅಧಿಕಾರಿಗಳು ಆರೋಪಿ ಮೊಬೈಲ್ನ ಐಪಿ ವಿಳಾಸ ಮತ್ತು ಇತರೆ ಮಾಹಿತಿ ಸಂಗ್ರಹಿಸಿ ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರಿಗೆ ದೂರು ದಾಖಲಿಸಿ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು. ಪೂರ್ವ ವಿಭಾಗದ ಸಿಇಎನ್ ಠಾಣೆಯ ಇನ್ಸ್ಪೆಕ್ಟರ್ ಉಮೇಶ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.
ಇಂತಹ ಕೃತ್ಯಗಳ ಪತ್ತ ಹೇಗೆ?
ಇಂತಹ ಕೃತ್ಯಗಳ ಪತ್ತೆಗಾಗಿ ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿರುವ ಸೈಬರ್ ಕ್ರೈಂ ಪ್ರಿವೇಷನ್ ಎಗೆನೆಷ್ಟ್ ವುಮೆನ್ ಆ್ಯಂಡ್ ಚಿಲ್ಡ್ರನ್, ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟ್ ಪೋರ್ಟಲ್, ನ್ಯಾಷನಲ್ ಸೆಂಟರ್ ಮಿಸ್ಸಿಂಗ್ ಆ್ಯಂಡ್ ಎಕ್ಸ್ಪ್ಲೆ„ಟೆಡ್ ಚಿಲ್ಡರ್ನ್(ಎನ್ ಸಿಎಂಇಸಿ) ಎಂಬ ಪೋರ್ಟಲ್ ತೆರೆಯಲಾಗಿದೆ.
ಈ ಸಾಫ್ಟ್ವೇರ್ಗಳ ಮೂಲಕ ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಫೋಟೋವನ್ನು ಆನ್ಲೈನ್ ಮೂಲಕ ಡೌನ್ಲೋಡ್ ಮಾಡುವುದು, ವೀಕ್ಷಿಸುವುದು, ವರ್ಗಾಯಿ ಸುವ ವ್ಯಕ್ತಿಗಳ ಚಲನವಲನಗಳನ್ನು ಎಲೆಕ್ಟ್ರಾನಿಕ್ಸ್ ಸರ್ವಿಸ್ ಪ್ರೋವೈಡರ್ಗಳ ಮೂಲಕ ಮಾಹಿತಿ ಪಡೆದುಕೊಂಡು, ಸೈಬರ್ ಟಿಪ್ ಲೈನ್ ವರದಿ ನಂಬರ್ ಸಮೇತ ರಾಜ್ಯದ ಸಿಐಡಿಗೆ ಮಾಹಿತಿ ನೀಡಲಾಗುತ್ತದೆ. ಸಿಐಡಿ ಅಧಿಕಾರಿಗಳು ಆರೋಪಿಯ ಐಪಿ ವಿಳಾಸ ಹಾಗೂ ಇತರೆ ಮಾಹಿತಿ ಸಂಗ್ರಹಿಸಿ ಸಂಬಂಧಿಸಿದ ಪೊಲೀಸ್ ಠಾಣೆ ಮಾಹಿತಿ ನೀಡುತ್ತಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.