Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಚುನಾವಣೆ ವೇಳೆ ಮಾತ್ರ ಮೋದಿ ಓಡೋಡಿ ಬರುವುದು

Team Udayavani, Apr 18, 2024, 9:36 PM IST

1-qeqeqwe

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆ ವೇಳೆಯಲ್ಲಿ ಬಿಟ್ಟರೆ ಬೇರೆ ಸಮಯದಲ್ಲಿ ನಮ್ಮ ರಾಜ್ಯ ನೆನಪಾಗುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಾಗೇಪಲ್ಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಮೋದಿ ಪ್ರವಾಹ ಬಂದಾಗಲೂ ಈ ಕಡೆ ತಲೆ ಹಾಕಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ ಎಂದು ಕಿಡಿಕಾರಿದರು.

ಚುನಾವಣೆ ವೇಳೆ ಭ್ರಷ್ಟರನ್ನು ಗೆಲ್ಲಿಸಲು ರಾಜ್ಯಕ್ಕೆ ಮೇಲಿಂದ ಬರುತ್ತಾರೆ ಅಂದರೆ ಅದು ರಾಜ್ಯದ ಜನತೆಗೆ ಮಾಡುವ ಅವಮಾನ ಅಲ್ಲವೇ ಎಂದು ಪ್ರಶ್ನಿಸಿದರು. ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದರು.

ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಇವರ ಜತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎನ್ನುವುದು ಎನ್ಮುವುದು ಬರೀ ದೇವೇಗೌಡರ ಭ್ರಮೆ. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರುತ್ತೇವೆಂದರು.

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.

ಈ ವೇಳೆ ಸಚಿವರಾದ ಡಾ.ಎಂ.ಸಿ.ಸುಧಾಕರ್, ವಿಧಾನ ಪರಿಷತ್ತು ಸದಸ್ಯರಾದ ಎಂ.ಆರ್.ಸೀತಾರಾಮ್, ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ, ಪ್ರದೀಪ್ ಈಶ್ವರ್, ಮಾಜಿ ಶಾಸಕ ಎನ್.ಸಂಪಂಗಿ, ವಿಧಾನ ಪರಿಷತ್ತು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

1-jds

Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.