Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Team Udayavani, Apr 19, 2024, 3:27 PM IST
ಸಾಗರ: ಇಲ್ಲಿನ ವರದಹಳ್ಳಿ ರಸ್ತೆಯಲ್ಲಿರುವ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ವಿತರಣೆ ಮಾಡಲು ಮೀಸಲಿಟ್ಟಿದ್ದ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡುತ್ತಿರುವುದಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ತಹಶೀಲ್ದಾರ್ ಸೈಯದ್ ಕಲಿಮುಲ್ಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಪತ್ರಕರ್ತರಿಗೆ ಮೀಸಲಾಗಿರಿಸಿದ್ದ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಂಕಳಲೆ ಗ್ರಾಮದ ಸರ್ವೇ ನಂ. 40 ರಲ್ಲಿ 0.35 ಗುಂಟೆ ಜಾಗವನ್ನು ಕೆಲವರು ಅತಿಕ್ರಮ ಪ್ರವೇಶ ಮಾಡಿ ರಾತ್ರೋರಾತ್ರಿ ಅಕ್ರಮ ಶೆಡ್ ನಿರ್ಮಾಣ ಮಾಡಿದ್ದಾರೆ. ಈ ವಿಚಾರವನ್ನು ತಿಳಿದ ತಹಶೀಲ್ದಾರ್ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ತಹಶೀಲ್ದಾರ್ ಸೈಯದ್ ಕಲಿಮುಲ್ಲಾ, ಅತಿಕ್ರಮ ಪ್ರವೇಶ ಮಾಡಿದವರನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಸ್ಥಳಕ್ಕೆ ಭೇಟಿ ನೀಡಿದಾಗ ಅಕ್ರಮವಾಗಿ ತರಾತುರಿಯಲ್ಲಿ ಶೆಡ್ ನಿರ್ಮಿಸಿರುವುದು ಕಂಡುಬಂದಿದೆ. ಇದು ಕಾನೂನುಬಾಹಿರವಾಗಿದ್ದು, ಯಾರೇ ಸರ್ಕಾರಿ ಜಾಗ ಒತ್ತುವರಿ ಮಾಡಿದರೆ ಕಂದಾಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ಇದೆ. ಆದ್ದರಿಂದ ಅಕ್ರಮ ಪ್ರವೇಶ ಮಾಡಿದವರು ಶುಕ್ರವಾರ ಸಂಜೆಯೊಳಗೆ ಶೆಡ್ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಒಂದೊಮ್ಮೆ ತೆರವುಗೊಳಿಸದೆ ಹೋದಲ್ಲಿ ಕಂದಾಯ ಇಲಾಖೆ ಕಾನೂನಿನ ಪ್ರಕಾರ ಅವರ ಮೇಲೆ ಅಕ್ರಮ ಪ್ರವೇಶ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಿದರು.
ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಜಮೀನು ನೋಡಿ ಅಕ್ರಮವಾಗಿ ರಾತ್ರೋರಾತ್ರಿ ಬೇಲಿ ಹಾಕಿ, ಅಕ್ರಮ ಶೆಡ್ ನಿರ್ಮಿಸುವ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತದೆ. ಈ ಹಿಂದೆ ಕರ್ಕಿಕೊಪ್ಪ ಗ್ರಾಮದಲ್ಲಿ ಸೊಪ್ಪಿನ ಬೆಟ್ಟ ಪ್ರದೇಶ, ಅರಣ್ಯ, ಪ್ಲಾಂಟೇಶನ್ ಇನ್ನಿತರ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಂದಾಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ ಉದಾಹರಣೆಗಳು ಸಹ ಇವೆ. ಇದೀಗ ಪತ್ರಕರ್ತರ ಜಾಗದ ಮೇಲೆ ಕಣ್ಣು ಹಾಕಿರುವುದರ ಹಿಂದೆ ಕೆಲವು ರಾಜಕೀಯ ಪ್ರಭಾವಿ ಮುಖಂಡರ ಕೈವಾಡ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಇದೇ ಗ್ರಾಮ ಪಂಚಾಯ್ತಿಯ ಬಾಳೆಹಳ್ಳಿ ಗ್ರಾಮದಲ್ಲಿಯೂ ಜನರು ಸೊಪ್ಪಿನ ಬೆಟ್ಟದ ಜಾಗದಲ್ಲಿ ಅಕ್ರಮವಾಗಿ ರಾತ್ರೋರಾತ್ರಿ ಮನೆ ನಿರ್ಮಿಸಿದರೂ ಕಂದಾಯ ಇಲಾಖೆ ಅಧಿಕಾರಿಗಳು, ಪಂಚಾಯ್ತಿ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆಯೇ ವಿನಾ ಕಾನೂನುಬಾಹಿರ ಒತ್ತುವರಿಯ ತಡೆಗೆ ಕ್ರಮ ಕೈಗೊಳ್ಳದಿರುವ ಕುರಿತು ಪಂಚಾಯ್ತಿಯ ಜನಪ್ರತಿನಿಧಿಗಳೇ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಪಂಚಾಯ್ತಿಯ ಬೆಳವಣಿಗೆಗಳನ್ನು ಗಮನಿಸಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Polls ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.