Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Team Udayavani, Apr 19, 2024, 3:52 PM IST
ಕುಷ್ಟಗಿ: ಇಲ್ಲಿನ ರಸ್ತೆ ವಿಭಜಕದ ವಿದ್ಯುತ್ ದೀಪದ ಕಂಬಗಳಿಗೆ ಕ್ರೇನ್ ಲ್ಯಾಡರ್ ಮೇಲೆ ನಿಂತು ಎಲ್ಇಡಿ ಬಲ್ಬ್ ಅಳವಡಿಸುವ ವೇಳೆ ಪುರಸಭೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಪಟ್ಟಣದ ಮುಖ್ಯ ರಸ್ತೆಯ ವಿಭಜಕದಲ್ಲಿ ವಿದ್ದುದ್ದೀಪದ ಕಂಬಗಳಿಗೆ ಪುರಸಭೆ ಸಿಬ್ಬಂದಿ ನಾಗರಾಜ್ ಚಲವಾದಿ ಕ್ರೇನ್ ಲ್ಯಾಡರ್ ಮೇಲೆ ನಿಂತು ಎಲ್ಇಡಿ ಬಲ್ಬ್ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದರು. ಇನ್ನೇನು ಕೆಲಸದ ಅಂತಿಮದಲ್ಲಿ ಕ್ರೇನ್ ನ ಲ್ಯಾಡರ್ ಬೆಲ್ಟ್ ಕೊಂಡಿ ಜರಿದು ಕಳಚಿದಾಗ 20 ಅಡಿಯಿಂದ ಕೆಳಗೆ ಬಿದ್ದು, ತೀವ್ರ ಗಾಯಗೊಂಡಿದ್ದು, ಕಾಲು ಮುರಿತದ ತೀವ್ರ ಸ್ವರೂಪದ ಗಾಯವಾಗಿದೆ.
ಕೂಡಲೇ ಅವರನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಇಲಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್
Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು
Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ
Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ
ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್ ಚೈನ್ ಗಿಫ್ಟ್ ಕೊಟ್ಟ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.