ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ


Team Udayavani, Apr 19, 2024, 6:11 PM IST

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

■ ಉದಯವಾಣಿ ಸಮಾಚಾರ
ಶಿರಸಿ: ಧರ್ಮದ ದಾರಿಯಲ್ಲಿ ನಡೆದು ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮದಲ್ಲಿ ನಡೆಯಲು ಗುರುವಿನ ಉಪದೇಶ ಪಡೆದು ಮುನ್ನಡೆಯಬೇಕು ಎಂದು ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ನುಡಿದರು.

ಗುರುವಾರ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಭೇಟಿ ನೀಡಿದ್ದ ಅವರು ಆಶೀರ್ವಚನ ನೀಡಿದರು. ಜೀವನ-ಬದುಕು ನಡೆಸುವುದು ಎಂದರೆ ಪ್ರಾಣಿಗಳೂ ಜೀವನ ಮಾಡುತ್ತವೆ. ಆದರೆ ಮನುಷ್ಯ ಅದಕ್ಕಿಂತ ಬೇರೆಯಾಗಿದ್ದಾನೆ. ಮನುಷ್ಯ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಆಗ ಈ ಜನ್ಮಸಾರ್ಥಕ ಆಗುತ್ತದೆ. ಧರ್ಮಾಚರಣೆಯಿಂದ ಇದು ಸಾಧ್ಯ. ಪರಂಪರೆಯ ಗುರುಗಳಿಂದ ಜನರಿಗೆ ಮಾರ್ಗದರ್ಶನ ಮಾಡುವ ಕಾರ್ಯ ನಡೆದಿದೆ ಎಂದರು.

ಧರ್ಮ ಮಾರ್ಗ ಬೋಧಿಸಿ, ನಿಷ್ಠೆ ತೋರಿದವರು ಶಂಕರಾಚಾರ್ಯರು. ಧರ್ಮವನ್ನು ದೃಢವಾಗಿ ಸ್ಥಾಪಿಸಿದ್ದಾರೆ. ಆಕ್ರಮಣ ಆದರೂ, ಆಗುತ್ತಿದ್ದರೂ ಧರ್ಮ ನಿಂತಿದೆ. ಶ್ರೀ ಶಂಕರರು ದೃಢವಾಗಿ ಧರ್ಮ ಸ್ಥಾಪನೆ ಮಾಡಿದ್ದು ಅದಕ್ಕೆ ಕಾರಣ. ರಾಗ, ದ್ವೇಷ ಇಲ್ಲದವರು ಸನ್ಯಾಸಿಗಳು. ಶಿಷ್ಯರಿಗೆ ವೈರಾಗ್ಯದಿಂದ ಮಾರ್ಗದರ್ಶನ ಮಾಡುತ್ತಾರೆ. ಧಾರ್ಮಿಕ ಉನ್ನತಿಗೆ, ಧರ್ಮಾಚರಣೆಗೆ ಗುರುವಿನ ಮಾರ್ಗದರ್ಶನ ಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶಬ್ಧ ಎಂಬ ಬೆಳಕು ಬೆಳಗದೇ ಇದ್ದರೆ ಮೂರು ಲೋಕಗಳು ಕತ್ತಲಾಗುತ್ತಿದ್ದವು. ಶಂಕರಾಚಾರ್ಯರು ಎಂಬ ಅವತಾರಿಗಳು ಬಾರದೇ ಇದ್ದರೆ ಲೋಕ ಅಂಧಕಾರದಲ್ಲಿ ಇರುತ್ತಿತ್ತು. ಅವರಿಂದ ಜ್ಞಾನ ಎಂಬ ಬೆಳಕು ಬಂತು. ವೇದೋಕ್ತ ಜ್ಞಾನ ಕಾಂಡಕ್ಕೆ ಶಂಕರರಿಂದ ಬೆಳಕು ಬಂದಿದೆ. ಭಗವದ್ಗೀತೆ ಗಮನಕ್ಕೆ ಬರಲು ಅವರ ಭಾಷ್ಯವೇ ಕಾರಣ. ಜ್ಞಾನದ ಬೆಳಕು ಇಷ್ಟೊಂದು ಬರಲು ಶಂಕರರೇ ಕಾರಣ ಎಂದರು.

ಮಠಗಳಲ್ಲಿ ಜ್ಞಾನದ ಪರಂಪರೆ ಇಂದಿಗೂ ಮುನ್ನಡೆಯುತ್ತಿದೆ. ಶೃಂಗೇರಿಯಲ್ಲಿ ಪರಂಪರೆ ಮುಂದುವರಿದಿದೆ. ಆನಂದದ
ಅನುಭವ ಜೀವನದಲ್ಲಿ ಮುಖ್ಯ. ಧರ್ಮದ ಅನುಭವ ಹೇಳುವಾಗಲೂ ಅದನ್ನೇ ಹೇಳುವರು. ಅಂತರಾತ್ಮಕ್ಕೆ ತೃಪ್ತಿ ಆದರೆ
ಆನಂದದ ಅನುಭವ ಬರುತ್ತದೆ. ಆನಂದದ ಅನುಭವ ಆಗಬೇಕಾದರೆ ಸಂತುಷ್ಟಿಯಿಂದ ಆತ್ಮ ಸಾಕ್ಷಿಯಾಗಬೇಕು. ಅದೇ ಧರ್ಮ.
ಶೃಂಗೇರಿ ಜಗದ್ಗುರುಗಳು ಶ್ರೀ ಮಠಕ್ಕೆ ಆಗಮಿಸಿದ್ದು ಆನಂದ ಉಂಟಾಗಿದೆ ಎಂದರಲ್ಲದೇ ಮಠದಲ್ಲಿ ನಡೆದ ಶಿಷ್ಯ ಸ್ವೀಕಾರದ ಅನುಭವ ಹಂಚಿಕೊಂಡರು. ಶ್ರೀ ಆನಂದಬೋಧೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಶ್ರೀ ಸ್ವರ್ಣವಲ್ಲೀ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್‌.ಹೆಗಡೆ ಬೊಮ್ಮನಳ್ಳಿ ಪಾದಪೂಜೆ ನೆರವೇರಿಸಿದರು.

ಕಾರ್ಯದರ್ಶಿ ಗಣಪತಿ ಹೆಗಡೆ ಗೊಡವೆಮನೆ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು. ರಾಜರಾಜೇಶ್ವರಿ ಸಂಸ್ಕೃತ
ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ವೇದ ಘೋಷ ಮಾಡಿದರು. ವಸಂತವೇದ ಶಿಭಿರಾರ್ಥಿಗಳು, ಭಕ್ತರು-ಶಿಷ್ಯರು
ಭಾಗವಹಿಸಿದ್ದರು. ಕಿರುಕುಂಭತ್ತಿ ಮಹಾಬಲೇಶ್ವರ ಭಟ್ಟ ನಿರ್ವಹಿಸಿದರು. ಮಾತೆಯರು ಪೂರ್ಣಕುಂಭ ಸ್ವಾಗತ ನೀಡಿದರು.

ಗುರುವಿನ ಮಾರ್ಗವನ್ನು ಶ್ರದ್ಧೆಯಿಂದ ಪಾಲಿಸಬೇಕು. ಗುರುವಿನ ಎದುರು ಶಿಷ್ಯರು ಶಿಷ್ಯರಾಗಿಯೇ ಇರಬೇಕು.
* ವಿಧುಶೇಖರ ಶ್ರೀ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.