Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ


Team Udayavani, Apr 20, 2024, 11:20 AM IST

5-karkala

ಕಾರ್ಕಳ: ಕಾರ್ಕಳದಿಂದ ಹೆಬ್ರಿಯವರೆಗೆ ಸಾವಿರಾರು ವಾಹನಗಳ ಸರದಿಯ ಪಯಣ, ರಸ್ತೆಯ ಇಕ್ಕೆಲಗಳಲ್ಲಿ ಕಾಂಗ್ರೆಸ್‌ ಅಭಿಮಾನಿಗಳ ಹರಕೆ ಹಾರೈಕೆ, ತೆರೆದ ಜೀಪಿನಲ್ಲಿ ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರ ಮೆರವಣಿಗೆ, ಸಾಗುವ ಹಾದಿಯಲ್ಲಿ ಸಾವಿರಾರು ಜನರಿಂದ ಕೈ ಪಕ್ಷಕ್ಕೆ ಜೈಕಾರ, ಇದು ವಿಜಯೋತ್ಸವವಲ್ಲ, ಆದರೆ ವಿಜಯಕ್ಕಾಗಿ ಉತ್ಸವ. ಇದು ಬದಲಾವಣೆ ದರ್ಶನ, ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ ಪ್ರಚಾರ ಅತ್ಯಂತ ಬಿರುಸಿನಿಂದ ಸಾಗುತ್ತಿದೆ. ಶುಕ್ರವಾರ ಸಂಜೆ ಕಾರ್ಕಳದಿಂದ ಹೆಬ್ರಿಗೆ ಹೊರಟ ಕಾರು ಮತ್ತು ಬೈಕ್‌ಗಳ ಮೆರವಣಿಗೆ ಜನ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ಸಾಕ್ಷಿಯಾಯಿತು.

ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ರ್‍ಯಾಲಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಕಾಂಗ್ರೆಸ್‌ ಮುಖಂಡ ಮುನಿಯಾಲ ಉದಯ ಕುಮಾರ್‌ ಶೆಟ್ಟಿ, “ಇದೇ ಸ್ಫೂರ್ತಿ ಮತದಾನದ ದಿನದವರೆಗೂ ಇರಲಿ ಎಂದು ನೆರೆದ ಕಾಂಗ್ರೆಸ್‌ ಅಭಿಮಾನಿಗಳಿಗೆ ಶುಭ ಹಾರೈಸಿದರು.

ನಮ್ಮದು ಪಕ್ಷ ಬಿಜೆಪಿ, ಓಟು ಮಾತ್ರ ಜೆಪಿಗೆ ಮೆರವಣಿಗೆಯಲ್ಲಿ ಸಾಗುತ್ತಿರುವಾಗ ಕೇಳಿ ಬಂದ ಮಾತು, “ನಮ್ಮದು ಪಕ್ಷ ಬಿಜೆಪಿ, ಓಟು ಮಾತ್ರ ಜೆಪಿಗೆ ಎಂದು ಕೂಗುತ್ತ ಸಾಗುವುದನ್ನು ಕಂಡಾಗ ಜನ ಪಕ್ಷ ನೋಡಿ ಅಲ್ಲ, ವ್ಯಕ್ತಿ ನೋಡಿ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ಎಲ್ಲ ಐದೂ ಗ್ಯಾರೆಂಟಿಗಳನ್ನು ಜನರಿಗೆ ನೀಡಿದೆ. ಇದರಿಂದಾಗಿ ಜನರಿಗೆ ಕಾಂಗ್ರೆಸ್‌ ಪಕ್ಷದ ಮೇಲೆ ಮತ್ತೆ ಭರವಸೆ ಮೂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಲಿದೆ ಎಂಬ ಆತ್ಮವಿಶ್ವಾಸ ಮೂಡಿದೆ.

ಜಯಪ್ರಕಾಶ್‌ ಹೆಗ್ಡೆ ಅಧಿಕಾರದಲ್ಲಿರಲಿ ಇಲ್ಲದಿರಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನ ಮಾತನಾಡುತ್ತಿದ್ದಾರೆ. “ನಮ್ಮ ಮತ ನಿಮಗೇ” ಎಂದು ಮುಕ್ತ ಮನಸ್ಸಿನಿಂದ ಹೇಳುತ್ತಿದ್ದಾರೆ. ಒಬ್ಬ ಜನಪ್ರತಿನಿಧಿ ಜನಮಾನಸದಲ್ಲಿ ಉಳಿಯುವುದು ಅವರು ಮಾಡಿದ ಅಭಿವೃದ್ಧಿ ಕಾರ್ಯಗಳಿಂದ. ಜನಪ್ರತಿನಿಧಿ ಎನಿಸಿಕೊಂಡವ ಜನರ ನಡುವೆ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿದರೆ ಆತ ಯಾವುದೇ ಪಕ್ಷದಲ್ಲಿದ್ದರೂ ಜನ ಬೆಂಬಲಿಸುತ್ತಾರೆ ಎಂಬುದಕ್ಕೆ ಜಯಪ್ರಕಾಶ್‌ ಹೆಗ್ಡೆ ಉತ್ತಮ ನಿದರ್ಶನ.

ಹೆಗ್ಡೆ ಮತ ಯಾಚನೆ ಮಾಡುವಾಗಲೂ ಹಾಗೆ, ತನ್ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಾರೆಯೇ ಹೊರತು ಜಾತಿ, ಧರ್ಮಗಳ ಬಗ್ಗೆ ಮಾತನಾಡುವುದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಪ್ರತಿಸ್ಪರ್ಧಿಯನ್ನು ಟೀಕಿಸುವ ಕೆಲಸವನ್ನೂ ಜೆಪಿ ಮಾಡುತ್ತಿಲ್ಲ. ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗೆ ಪಕ್ಷದ ಪ್ರಣಾಳಿಕೆಯ ಜೊತೆಯಲ್ಲೇ ತನ್ನದೇ ಆದ ಪ್ರಣಾಳಿಕೆಯನ್ನು ರೂಪಿಸಿಕೊಂಡು ಗೆದ್ದು ಬಂದರೆ ಅವೆಲ್ಲವನ್ನೂ ಕಾನೂನಿನ ಚೌಕಟ್ಟಿನಲ್ಲಿ ಈಡೇರಿಸುವುದಾಗಿ ಜನರಲ್ಲಿ ಭರವಸೆ ಮೂಡಿಸಿದ್ದಾರೆ. ಯಾರದ್ದೋ ಅಲೆಗೆ ಸಿಲುಕಿ ತೇಲಿ ಹೋಗುವುದಕ್ಕಿಂತ ತಾನು ನಿಂತ ನೆಲದಲ್ಲೇ ಇದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಜನಪ್ರತಿನಿಧಿಯನ್ನು ಜನ ಬಯಸುತ್ತಿದ್ದಾರೆಂಬುದು ಸ್ಪಷ್ಟ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.