Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
Team Udayavani, Apr 20, 2024, 12:48 PM IST
ಕೊಚ್ಚಿ: ಇತ್ತೀಚೆಗೆ ಮಾಲಿವುಡ್ ನಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿರುವ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ದಿನದ ಕುರಿತು ಮತ್ತೊಮ್ಮೆ ಸುದ್ದಿ ಹಬ್ಬಿದೆ.
ಮಲಯಾಳಂನಲ್ಲಿ ರಿಲೀಸ್ ಆಗಿ ಇತ್ತೀಚೆಗಷ್ಟೇ ತೆಲುಗು ಭಾಷೆಗೆ ಡಬ್ ಆಗಿ ಆಂಧ್ರದ ರಾಜ್ಯದಲ್ಲೂ ಭರ್ಜರಿ ಗಳಿಕೆ ಕಂಡಿರುವ ಸರ್ವೈವಲ್ ಥ್ರಿಲ್ಲರ್ ‘ಮಂಜುಮ್ಮೆಲ್ ಬಾಯ್ಸ್’ ಚಿದಂಬರಂ ಎಸ್. ಪೊದುವಾಳ್ ನಿರ್ದೇಶನದ ಕಣ್ಣಲ್ಲಿ ರೋಚಕವಾಗಿ ಮೂಡಿಬಂದಿದೆ.
ಫೆ.22 ರಂದು ತೆರೆಕಂಡು 50 ದಿನಗಳನ್ನು ಪೂರೈಸಿರುವ ಈ ಸಿನಿಮಾ 20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿಗೂ ಅಧಿಕ ಗಳಿಕೆಯನ್ನು ಕಾಣುವ ಮೂಲಕ ದಾಖಲೆಯನ್ನು ಬರೆದಿದೆ.
ಕುಟ್ಟನ್ (ಶೌಬಿನ್ ಶಾಹಿರ್), ಸುಭಾಷ್ (ಶ್ರೀನಾಥ್ ಬಾಷಿ) ಹಾಗೂ ಅವರ ಸ್ನೇಹಿತರು ಕೊಡೈಕೆನಾಲ್ ಪ್ರವಾಸಕ್ಕೆ ಹೋಗಿ ಅಲ್ಲಿನ ಗುಣ ಗುಹೆಗೆ ಹೋದಾಗ ನಡೆಯುವ ನೈಜ ಕಥೆಯನ್ನು ಥ್ರಿಲ್ ಆಗುವ ರೀತಿ ಹೇಳಲಾಗಿದೆ.
ಇದನ್ನೂ ಓದಿ: Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
ಥಿಯೇಟರ್ ನಲ್ಲಿ ಸಕ್ಸಸ್ ಫುಲ್ ಆಗಿ ಓಡಿದ ಸಿನಿಮಾ ಓಟಿಟಿ ರಿಲೀಸ್ ಡೇಟ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದೆ. ಸಿನಿಮಾ ತೆರೆಕಂಡು 50 ದಿನ ಹೆಚ್ಚಾದರೂ ಓಟಿಟಿಯಲ್ಲಿ ಇನ್ನು ಕೂಡ ರಿಲೀಸ್ ಆಗಿಲ್ಲ. ಟಾಲಿವುಡ್ ನಲ್ಲಿ ಡಬ್ ಆಗಿ ತೆರೆಕಂಡಿದ್ದು, ಇದೀಗ ಸಿನಿಮಾ ಓಟಿಟಿಗೆ ಬರಲಿದೆ ಎನ್ನಲಾಗುತ್ತಿದೆ.
ಇದೇ ಮೇ.3 ರಂದು ಡಿಸ್ನಿ+ ಹಾಟ್ ಸ್ಟಾರ್ ನಲ್ಲಿ ‘ಮಂಜುಮ್ಮೆಲ್ ಬಾಯ್ಸ್’ ಸ್ಟ್ರೀಮ್ ಆಗಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತವಾಗಿ ಯಾವ ಮಾಹಿತಿಯೂ ಬಂದಿಲ್ಲ. ಮೂಲಗಳ ಪ್ರಕಾರ ಮೇ.3 ರಂದು ಸಿನಿಮಾ ಓಟಿಟಿಯಲ್ಲಿ ಸ್ಟ್ರೀಮ್ ಆಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಎಸ್. ಪೊದುವಾಳ್, ಲಾಲ್ ಜೂನಿಯರ್, ದೀಪಕ್ ಪರಂಬೋಲ್, ಅಭಿರಾಮ್ ರಾಧಾಕೃಷ್ಣನ್ ಮತ್ತು ಅರುಣ್ ಕುರಿಯನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.