Panamburu; ಕಡಲನಗರಿಯ “ಆಕಾಶ’ದೆತ್ತರದಲ್ಲೊಂದು “ಹೊಟೇಲ್‌’!

ಪಣಂಬೂರು ಕಡಲ ಕಿನಾರೆಯಲ್ಲಿ "ಸ್ಕೈ ಡೈನಿಂಗ್‌'

Team Udayavani, Apr 21, 2024, 7:15 AM IST

Panamburu; ಕಡಲನಗರಿಯ “ಆಕಾಶ’ದೆತ್ತರದಲ್ಲೊಂದು “ಹೊಟೇಲ್‌’!

ಮಂಗಳೂರು: ಭೂಮಿಯಿಂದ 120 ಅಡಿ ಎತ್ತರದಲ್ಲಿ ಕುಳಿತು ಕಡಲ ನಗರಿ ಮಂಗಳೂರನ್ನು ನೋಡುತ್ತಲೇ ಅಹಾರ ಸವಿಯಲು ಇಲ್ಲಿದೆ ಅವಕಾಶ!

ಕಡಲಲ್ಲಿ ತೇಲುವ ಹೋಟೆಲ್‌ ಗಳನ್ನು ಕಂಡಿದ್ದೇವೆ. ಕೆಲವೆಡೆ ತೂಗುವ ಹೋಟೆಲುಗಳೂ ಇವೆ. ಆದರೆ ಮಂಗಳೂರಿನಲ್ಲಿ ಆಕಾಶದೆತ್ತರದಲ್ಲಿ ಕುಳಿತು ಆಹಾರ ಸೇವಿಸಲು ಹೋಟೆಲ್‌ ಸಿದ್ಧವಾಗುತ್ತಿದೆ.

ರಾಜ್ಯದಲ್ಲಿ ಬೀಚ್‌ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಣೀಯವಾಗಿಸಲು ಕರಾವಳಿ ತೀರದಲ್ಲೇ ಮೊದಲ ಬಾರಿಗೆ ಎಂಬಂತೆ “ಸ್ಕೈ ಡೈನಿಂಗ್‌’ ಪಣಂಬೂರು ಬೀಚ್‌ನಲ್ಲಿ ಆರಂಭವಾಗಲಿದೆ.

ಪಣಂಬೂರು ಬೀಚ್‌ನ ಅಭಿವೃದ್ಧಿಯ ಗುತ್ತಿಗೆ ಕಂಪೆನಿ “ಕದಳೀ ಬೀಚ್‌ ಟೂರಿಸಂ ಸಂಸ್ಥೆ’ ಈ ಯೋಜನೆಯನ್ನು ರೂಪಿಸಿದೆ. ಮೇ ಮೊದಲ ವಾರದಲ್ಲಿ ಸ್ಕೈ ಡೈನಿಂಗ್‌ ಕಾರ್ಯಾರಂಭಿಸುವ ಸಾಧ್ಯತೆ ಇದೆ. “ಸ್ಕೈ ಡೈನಿಂಗ್‌’ ವಿದೇಶದ ವಿವಿಧೆಡೆ ಪ್ರಸಿದ್ಧವಾಗಿದೆ. ಭಾರತದಲ್ಲೂ ಕೆಲವೆಡೆ ಈ ಪರಿಕಲ್ಪನೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮಂಗಳೂರಿನಲ್ಲೂ ಆರಂಭವಾದರೆ ಕರಾವಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶೇಷ ಅನುಭವ ನೀಡಬಹುದು ಎಂದು ಅಂದಾಜಿಸಲಾಗಿದೆ.

120 ಅಡಿ ಎತ್ತರ
ಈಗಾಗಲೇ “ಸ್ಕೈ ಡೈನಿಂಗ್‌’ಗೆ ಸಂಬಂಧಿಸಿ ನಿರ್ಮಾಣ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದರ ಪ್ರಧಾನ ಅಂಗವಾಗಿರುವ ಕ್ರೇನ್‌ ರಚನೆ ಆರಂಭವಾಗಬೇಕಿದೆ. ಅಡುಗೆ ಮನೆಯೂ ನಿರ್ಮಾಣವಾಗಲಿದೆ. ಈ ಕ್ರೇನ್‌ 120 ಅಡಿಗಳಷ್ಟು ಎತ್ತರಕ್ಕೆ ಪ್ರವಾಸಿಗರನ್ನು ಕರೆದೊಯ್ಯಲಿದೆ. ಒಂದೆಡೆ ಸಮುದ್ರ- ಇನ್ನೊಂದೆಡೆ ಮಂಗಳೂರು ನಗರದ ವಿಹಂಗಮ ದೃಶ್ಯಗಳನ್ನು ಸವಿಯುತ್ತಾ ಆಹಾರ ಸವಿಯಲು ಅವಕಾಶವಿರಲಿದೆ. ಇಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿಸಲಾಗುತ್ತಿದೆ. ಸ್ಕೈ ಡೈನಿಂಗ್‌ ಜತೆಗೆ ಸಾಹಸ ಕ್ರೀಡೆ, ವಾಟರ್‌ ಸ್ಪೋರ್ಟ್ಸ್, ರೆಸ್ಟೋರೆಂಟ್‌ ಗಳಿಗೆ ಜಿಲ್ಲಾಡಳಿತ – ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮೀಶ್‌ ಭಂಡಾರಿ. ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಪಣಂಬೂರು ಬೀಚ್‌ನಲ್ಲಿ ವಿವಿಧ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. “ಸ್ಕೈ ಡೈನಿಂಗ್‌’ ಕೂಡ ಹೊಸ ಪರಿಕಲ್ಪನೆ ಎನ್ನುತ್ತಾರೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಮಾಣಿಕ್ಯ.

16 ಮಂದಿಗೆ ಅವಕಾಶ
-ಒಮ್ಮೆ 16 ಮಂದಿಗೆ ಸಂಗೀತದ ಜತೆಗೆ ತಿನಿಸು ಸವಿಯಲು ಅವಕಾಶ
-ಪ್ರತಿಯೊಬ್ಬರಿಗೂ ಸೇಫ್ಟಿ ಬೆಲ್ಟ್ ಅಳವಡಿಕೆ
-ಪರಿಚಾರಕರಿಗೆ, ತಾಂತ್ರಿಕ ಸಿಬಂದಿಗೆ ಪ್ರತ್ಯೇಕ ಕ್ಯಾಬಿನ್‌
-ಮೆನು ಆಧರಿಸಿ ಮೊದಲೇ ಆಹಾರ ಕಾದಿರಿಸಬಹುದು
-ಶೀಘ್ರವೇ ದರ ನಿಗದಿ

ಏನಿದು “ಸ್ಕೈ ಡೈನಿಂಗ್‌’?
ನೆಲಕ್ಕಿಂತ ಹಲವು ಅಡಿಗಳಷ್ಟು ಮೇಲ್ಭಾಗದಲ್ಲಿ ಕುಳಿತು ಊಟ ಸವಿಯುವುದು. ಇದೊಂದು ಸಾಹಸವೂ ಹೌದು. ಗಾಜಿನ ಮಾದರಿಯ ಪಾರದರ್ಶಕ ವಸ್ತು ಮತ್ತು ಕಬ್ಬಿಣದಿಂದ ರಚಿಸಲಾದ ಕ್ಯಾಬಿನ್‌ ಅನ್ನು ಕ್ರೇನ್‌ ಮೂಲಕ ಮೇಲಕ್ಕೆ ಎತ್ತಲಾಗುತ್ತದೆ. ಇದರಲ್ಲಿ ಟೇಬಲ್‌, ಚೇರ್‌ ಸಹಿತ ಎಲ್ಲ ವ್ಯವಸ್ಥೆ ಇರಲಿದೆ. ಸುತ್ತಲಿನ ವಿಹಂಗಮ ದೃಶ್ಯವನ್ನು ನೋಡುತ್ತ ಊಟ/ತಿಂಡಿ ಸವಿಯಬಹುದಾಗಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.