ಚುನಾವಣ ಸಿಬಂದಿಗೆ ತರಬೇತಿ : ಊಟ, ಉಪಾಹಾರ ಅವ್ಯವಸ್ಥೆ: ಆಕ್ರೋಶ


Team Udayavani, Apr 21, 2024, 1:19 AM IST

ಚುನಾವಣ ಸಿಬಂದಿಗೆ ತರಬೇತಿ : ಊಟ, ಉಪಾಹಾರ ಅವ್ಯವಸ್ಥೆ: ಆಕ್ರೋಶ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳಿಗೆ ಎ. 20ರಂದು ಉಜಿರೆಯ ಖಾಸಗಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಹಿನ್ನೆಲೆ ಸಾವಿರಕ್ಕೂ ಅಧಿಕ ಅಧಿಕಾರಿಗಳು ಭಾಗವಹಿಸಿದ್ದರು. ಈ ವೇಳೆ ಊಟ, ಉಪಾಹಾರ ಅವ್ಯವಸ್ಥೆಯಿಂದ ಅಧಿಕಾರಿಗಳು ತರಬೇತಿ ನೀಡಲು ನಿಯೋಜಿಸಿದವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಶನಿವಾರ ಪಿಆರ್‌ಒ, ಎಪಿಆರ್‌ಒ, ಪಿಒ ಸೇರಿ ಒಟ್ಟು 281 ತಂಡದಂತೆ ಒಟ್ಟು 1156 ಮಂದಿ ಹಾಗೂ ಇವರನ್ನು ತರಬೇತಿಗೊಳಿಸುವ ಆರ್‌ಒ, ಸೆಕ್ಟರ್‌ ಅಧಿಕಾರಿಗಳು ಸೇರಿ 1,400ಕ್ಕೂ ಅಧಿಕ ಮಂದಿ ಹಾಜರಾಗಿದ್ದರು.

ಅಧಿಕಾರಿಗಳಿಗೆ ನಿಗದಿಪಡಿಸಿದಂತೆ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಭೋಜನ, ಸಂಜೆ ಲಘು ಉಪಾಹಾರ ನೀಡಬೇಕಿತ್ತು. ಆದರೆ ಬೆಳಗ್ಗೆ ಉಪಾಹಾರ ಅವ್ಯವಸ್ಥೆ, ಮಧ್ಯಾಹ್ನ ಊಟದ ಅವ್ಯವಸ್ಥೆ ಸಹಿತ, ಸಂಜೆ ಸಮರ್ಪಕವಾಗಿ ಲಘು ಉಪಾಹಾರ ನೀಡದೆ ಇರುವ ವಿಚಾರಕ್ಕೆ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಚುನಾವಣೆ ಸಂದರ್ಭದಲ್ಲಿ ಮುಂಚಿತವಾಗಿಯೇ ಚುನಾವಣ ಕರ್ತವ್ಯಕ್ಕೆ ನೇಮಿಸಿದ ಪಿಆರ್‌ಒ, ಎಪಿಆರ್‌ಒ, ಪಿಒಗಳ ಸಂಖ್ಯೆ ನಿಗದಿಯಾಗಿರುತ್ತದೆ. ಯಾರೂ ಕೂಡ ಗೈರುಹಾಜರಾಗುವುದಿಲ್ಲ. ಬೇರೆ ಜಿಲ್ಲೆಯ ಬೇರೆ ಬೇರೆ ತಾಲೂಕಿನಿಂದ ಆನೇಕ ಮಂದಿ ಮುಂಜಾನೆ ಬೇಗ ಬಂದು ತರಬೇತಿಗೆ ಹಾಜರಾಗುತ್ತಾರೆ. ಆರೋಗ್ಯ ಸಮಸ್ಯೆ ಉಳ್ಳವರು, ಲೋ ಬಿಪಿ, ಮಧುಮೇಹದಿಂದ ಬಳಲುವವರಿದ್ದಾರೆ. ಈ ವೇಳೆ ಸೂಕ್ತ ಉಪಾಹಾರ ವ್ಯವಸ್ಥೆ ಬೇಕಾಗುತ್ತದೆ. ಆದರೆ ಪ್ರತಿ ಬಾರಿ ಇಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿರುತ್ತದೆ. ಶನಿವಾರ ಮತ್ತೆ ಅದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಅಧಿಕಾರಿಗಳು ಆಕ್ರೋಶಕ್ಕೆ ಒಳಗಾಗಿದ್ದರು.

1,400 ಸಿಬಂದಿಗೆ ಆವಶ್ಯಕವಾಗುವಷ್ಟು ಭೋಜನ ಮುಂಚಿತವಾಗಿ ಸಿದ್ಧಪಡಿಸಿಲ್ಲ, ಮಧ್ಯಾಹ್ನ ಬಹುತೇಕ ಮಂದಿಗೆ ಭೋಜನ ಲಭಿಸಿರಲಿಲ್ಲ, 2 ಗಂಟೆ ವೇಳೆಗೆ ಊಟವೇ ಇಲ್ಲದ ಪರಿಸ್ಥಿತಿಯಾಗಿತ್ತು.

ಇನ್ನುಳಿದಂತೆ ನೂಕುನುಗ್ಗಲಿನ ಪರಿಸ್ಥಿತಿ ಕಂಡು ಹೆಚ್ಚಿನ ಸಿಬಂದಿ ಸ್ಥಳೀಯ ಹೊಟೇಲ್‌ಗ‌ಳಿಗೆ ಮೊರೆ ಹೋಗಿದ್ದರು. ಮತ್ತೆ ತಡವಾಗಿ ಭೋಜನ ವ್ಯವಸ್ಥೆ ಕಲ್ಪಿಸಿದ್ದು, ಆಯೋಗದ ಮೆನುವಿನಂತೆಯೂ ಭೋಜನ ನೀಡದೆ ಅವ್ಯವಸ್ಥೆ ಸೃಷ್ಟಿಸಿದ್ದಾರೆ.

ಈ ವಿಚಾರವಾಗಿ ಅಧಿಕಾರಿಗಳು ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಚುನಾವಣೆಗೆ ಆಯೋಗ ಕೋಟಿ ಕೋಟಿ ವ್ಯಯಿಸಿದರೂ ಸಿಬಂದಿಗೆ ಸ್ಥಳೀಯಾಡಳಿತ ಅಗತ್ಯ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಅಸಮಾಧಾನ ಹೊರಹಾಕಿದ ಘಟನೆ ಕಂಡುಬಂತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.