Lok Sabha Polls: ಪ್ರಚಾರಕ್ಕೆ ಇನ್ನೂ ಬಿರುಸೆಂಬುದೇ ಬಂದಿಲ್ಲ !


Team Udayavani, Apr 21, 2024, 6:50 AM IST

eLok Sabha Polls: ಪ್ರಚಾರಕ್ಕೆ ಇನ್ನೂ ಬಿರುಸೆಂಬುದೇ ಬಂದಿಲ್ಲ !

ಸುಳ್ಯ: ತಾಲೂಕಿನಲ್ಲಿ ಚುನಾವಣ ಕಾವು ಅಷ್ಟೇನೂ ಇನ್ನಷ್ಟೇ ಏರಬೇಕಿದೆ. ಸ್ಥಳೀಯ ಚುನಾವಣೆಗಳ ಸಂದರ್ಭದಲ್ಲೂ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸುವ ದೃಶ್ಯಾವಳಿ ಹಳ್ಳಿಹಳ್ಳಿ ಗಳಲ್ಲೂ ಸಾಮಾನ್ಯ. ಆದರೆ ಈ ಬಾರಿ ಅದಾವುದೂ ಕಾಣ ಸಿಗುತ್ತಿಲ್ಲ. ಮತದಾನಕ್ಕೆ ಆರು ದಿನಗಳಷ್ಟೇ ಇದ್ದರೂ ಪ್ರಚಾರದ ಅಬ್ಬರವಾಗಲೀ, ಕಾರ್ಯಕರ್ತರ ಬಿರುಸಿನ ಓಡಾಟವಾಗಲೀ ಕಂಡುಬರುತ್ತಿಲ್ಲ.

ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ನ ಅಭ್ಯರ್ಥಿ ಗಳು ಈವರೆಗೆ ಎರಡು ಬಾರಿ ಕ್ಷೇತ್ರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ, ಸಭೆಗಳಲ್ಲಿ ಪಾಲ್ಗೊಂಡು ಪ್ರಚಾರ ನಡೆಸಿದ್ದಾರೆ. ಉಳಿದಂತೆ ಸಣ್ಣ-ಪುಟ್ಟ ಸಭೆಗಳು ನಡೆಯುತ್ತಿವೆಯೇ ಹೊರತು ಸುಳ್ಯ ವಿಧಾನಸಭಾ ಕ್ಷೇತ್ರದ ಎಲ್ಲೂ ಜೋರು ಪ್ರಚಾರ ಕಂಡಿಲ್ಲ.

ತಪ್ಪದೆ ಮತ ಚಲಾಯಿಸುತ್ತೇವೆ
ಸುಳ್ಯ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗಳು ಪ್ರಮುಖ ಕಡೆಗಳಲ್ಲಿ ಸಭೆ, ಭೇಟಿ ನೀಡಿ ಮತಯಾಚಿಸಿದ್ದನ್ನು ಹೊರತು ಪಡಿಸಿದಂತೆ ಬೃಹತ್‌ ಸಭೆ, ಸಮಾವೇಶ ನಡೆದಿಲ್ಲ. ಚುನಾವಣೆ ದಿನದಂದು ನಾವು ತಪ್ಪದೆ ಮತ ಚಲಾಯಿಸುತ್ತೇವೆ ಎನ್ನುತ್ತಾರೆ ಹಲವರು. ಪ್ರಚಾರದ ಬಗ್ಗೆ ನಮಗೂ ಅಷ್ಟಾಗಿ ಆಸಕ್ತಿ ಇಲ್ಲ ಎಂದು ಕೆಲವರು ಉತ್ತರಿಸಿದರೆ, ಮತ್ತೆ ಕೆಲವರು ರಾಜಕೀಯ ಪಕ್ಷಗಳ, ನಾಯಕರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಪತ್ರಿಕಾಗೋಷ್ಠಿ ಭರಾಟೆ
ಚುನಾವಣೆ ಘೋಷಣೆಯಾದ ದಿನದಿಂದ ರಾಜಕೀಯ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳು ಪತ್ರಿಕಾಗೋಷ್ಠಿ, ಸಭೆ ನಡೆಸಿ ಕ್ಷೇತ್ರದಲ್ಲಿನ ಸಮಸ್ಯೆಗಳು, ಜನರ ಬೇಡಿಕೆಗಳ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿ ಪರ ಮಾತನಾಡಿ, ಇನ್ನೊಂದು ಪಕ್ಷಗಳನ್ನು ದೂರುತ್ತಿದ್ದಾರೆ. ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸುತ್ತಿದ್ದಾರೆ. ಇವೆಲ್ಲದರ ನಡುವೆ ಒಂದೆರಡು ಕಡೆ ಮತದಾನ ಬಹಿಷ್ಕಾರದ ಮಾತು ಕೇಳಿಬರುತ್ತಿದೆಯಾದರೂ ಅದು ಅಷ್ಟೊಂದು ತೀವ್ರತೆಯನ್ನು ಹೊಂದಿಲ್ಲ. ಕ್ಷೇತ್ರದ ಕೆಲವೆಡೆ ಸ್ಥಳೀಯ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರ ಪಕ್ಷಾಂತರ ಪರ್ವ ಕೂಡ ನಡೆದಿದೆ.

“ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ನಾಯಕರು ನಮಸ್ಕಾರ, ಹೇಗಿದ್ದೀರಾ ಎಂದು ಕೇಳುತ್ತಾರೆ. ಚುನಾವಣೆ ಬಳಿಕ ನಾವು ನಮಸ್ಕರಿಸಿದರೂ ಅವರು ನಮ್ಮತ್ತ ನೋಡು ವುದಿಲ್ಲ. ಚುನಾವಣೆ ಸನಿಹ ವಾದಾಗ ಮಾತ್ರ ಅವರಿಗೆ ನಮ್ಮ ನೆನಪಾಗುತ್ತದೆ’ ಎಂದು ಸುಳ್ಯದ ವ್ಯಕ್ತಿಯೊಬ್ಬರು ಬೇಸರ ವ್ಯಕ್ತಪಡಿಸಿದರೆ, ಚುನಾವಣೆ ತುಂಬ ದಿನಗಳವರೆಗೆ ನಡೆಯುತ್ತಿರುವುದು ಸರಿ ಕಾಣುತ್ತಿಲ್ಲ, ಮೊದಲೇ ಸಿದ್ಧತೆಗಳನ್ನು ಮಾಡಿ ಕೊಂಡು ಅಲ್ಪ ದಿನಗಳಲ್ಲೇ ಪ್ರಕ್ರಿಯೆ ಮುಗಿಸಬೇಕು. ತುಂಬಾ ದಿನಗಳ ಕಾಲ ನೀತಿ ಸಂಹಿತೆ ಜಾರಿಯಲ್ಲಿದ್ದರೆ ಜನಸಾಮಾನ್ಯರಿಗೆ ಸಮಸ್ಯೆ ಎಂಬುದು ಹಲವು ಮತದಾರರ ಅಭಿಪ್ರಾಯ.

ವಿವಿಧ ಪಕ್ಷಗಳ ಅಭ್ಯರ್ಥಿಗಳು ಕ್ಷೇತ್ರದ ಧಾರ್ಮಿಕ ಕೇಂದ್ರಗಳನ್ನು ಸಂದರ್ಶಿಸಿ, ಪ್ರಾರ್ಥನೆ ಸಲ್ಲಿಸುವ ಕೆಲಸವೂ ನಡೆಯುತ್ತಿದೆ. ನಾಗರಿಕರು ತಮ್ಮ ಸಮಸ್ಯೆಯನ್ನು ಅಭ್ಯರ್ಥಿಗಳಿಗೆ ಮನವರಿಕೆ ಮಾಡಲು ಇದನ್ನೇ ಅವಕಾಶವನ್ನಾಗಿ ಬಳಸುತ್ತಿದ್ದಾರೆ.

ಮತದಾನಕ್ಕೆ ಬೆರಳೆಣಿಕೆಯ ದಿನಗ ಳಷ್ಟೇ ಬಾಕಿ ಇದ್ದು, ಪಕ್ಷದವರು ಮನೆ ಮನೆ ಭೇಟಿ ಯೋಜಿಸಿದ್ದಾರೆ. ಆದರೆ ಬಹುತೇಕ ಮಂದಿ ತಮ್ಮದೇ ಕಾರಣಗಳೊಂದಿಗೆ ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಿರುವಂತೆ ತೋರುತ್ತಿದ್ದು, ಪ್ರಚಾರದ ಬಗ್ಗೆ ಯೋಚಿಸುತ್ತಿಲ್ಲ ಎಂಬ ಅಭಿಪ್ರಾಯವಿದೆ. ಸಾಮಾಜಿಕ ಜಾಲ ತಾಣಗಳ ಮೂಲಕವೂ ಮತದಾರರನ್ನು ಸಂಪರ್ಕಿಸುವ ಅಭ್ಯರ್ಥಿಗಳ ಪ್ರಯತ್ನವೂ ಚಾಲ್ತಿಯಲ್ಲಿದೆ.

- ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.