Vijayapura; ಹಾರಿಕೆ ಉತ್ತರ ಕೊಡುವ ಯತ್ನಾಳ ಯುನಿವರ್ಸಲ್ ಗುರು: ಸಂತೋಷ ಲಾಡ್
Team Udayavani, Apr 21, 2024, 12:43 PM IST
ವಿಜಯಪುರ: ಯತ್ನಾಳ್ ಸಾಹೇಬರು ಯನಿವರ್ಸಲ್ ಗುರು, ದಿಂಗಾಲೇಶ್ವರ ಶ್ರೀಗಳಿಗೆ ಸ್ಪರ್ಧೆ ಮಾಡಲು ಯಾರು ರೊಕ್ಕ ಕೊಟ್ಟರು, ಯಾವ ನೋಟು ಕೊಟ್ಟರೆಂದು ಯತ್ನಾಳರನ್ನೇ ಕೇಳಿ. ಅವರು ಕೊಡುವ ಹಾರಿಕೆ ಉತ್ತರಕ್ಕೆ ನಮ್ಮನ್ನು ಪ್ರಶ್ನಿಸುತ್ತೀರಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯಿಸಿದರು.
ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರ ಐನ್ಸ್ಟಿನ್ ಥಿಯರಿ ಬಗ್ಗೆ ನನಗೆ ಗೊತ್ತಿಲ್ಲ. ಪ್ರಚಾರದ ಮೈಲೇಜ್ಗಾಗಿ ಯತ್ನಾಳ ಏನೇನೋ ಮಾತನಾಡುತ್ತಾರೆ. ನೇಹಾ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಬಂಧನವಾಗಿದೆ, ತನಿಖೆ ನಡೆದಿದೆ. ದೇಶದಲ್ಲಿ 13 ಲಕ್ಷ ಮಹಿಳೆಯರ ಕಾಣೆಯಾಗಿದ್ದರೂ ಯತ್ನಾಳ ಏಕೆ ಮಾತನಾಡುತ್ತಿಲ್ಲ ಎಂದು ಹರಿಹಾಯ್ದರು.
ವಿವಾದಾತ್ಮಕ ವಿಷಯಗಳಿಗೆ ಬಿಜೆಪಿ ಆದ್ಯತೆ, ಹತ್ಯೆ ಘಟನೆಯಲ್ಲಿ ರಾಜಕೀಯ ಸರಿಯಲ್ಲ. ದೇಶದಲ್ಲಿ ಲಕ್ಷಾಂತರ ಮಹಿಳೆಯರು ಕಾಣೆಯಾಗುತ್ತಿರುವುದು ಮಾತ್ರವಲ್ಲ, ಗುಜರಾತಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರದ ಬಗ್ಗೆ ಯತ್ನಾಳ ಅಲ್ಲಿಗೆ ಹೋಗಿ ಮಾತನಾಡಲಿ ಎಂದು ಕುಟುಕಿದರು.
ಎಂ.ಎಂ.ಕಲಬುರಗಿ, ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಿಲುವೇನಿತ್ತು ಎಂದು ಪ್ರಶ್ನಿಸಿದ ಸಚಿವ ಲಾಡ್, ಮೋದಿ ಸರ್ಕಾರದ ಅವಧಿಯಲ್ಲಿ ಐಪಿಎಲ್ ನಲ್ಲಿ ಎಷ್ಟು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುನ್ನು ಹೇಳಿ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.