Vijayapura; ರಾಹುಲ್ ಗಾಂಧಿ ತೇಜೋವಧೆಗೆ ಮೋದಿ ತಂಡ ಕಟ್ಟಿದ್ದಾರೆ: ಸಂತೋಷ ಲಾಡ್


Team Udayavani, Apr 21, 2024, 2:48 PM IST

v

ವಿಜಯಪುರ: ಇವಿಎಂ ಟ್ಯಾಂಪರಿಂಗ್ ಆಗಿರುವುದು ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಪರ ಸುಳ್ಳು ಪ್ರಚಾರಕ್ಕೆ 65 ಸಾವಿರ ಕೋಟಿ ರೂ. ವೆಚ್ಚ ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೇಜೋವಧೆ ಮಾಡುದಕ್ಕಾಗಿಯೇ ತಂಡವನ್ನು ಕಟ್ಟಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಗಂಭೀರ ಆರೋಪ ಮಾಡಿದರು.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ, ಮುಸ್ಲಿಂ, ರಾಮ ಮಂದಿರದಂಥ ವಿಷಯಗಳೇ ಇವರ ಪ್ರಚಾರದ ವಿಷಯಗಳಾಗಿವೆ. ವಿವಾದಾತ್ಮಕ ವಿಷಯಗಳ ಹೊರತಾಗಿ ಅಭಿವೃದ್ಧಿ ಹಾಗೂ ರಚನಾತ್ಮಕ ವಿಷಯದ ಚರ್ಚೆಗೆ ಬಿಜೆಪಿ ನಾಯಕರು ಸಿದ್ಧರಿಲ್ಲ ಎಂದು ದೂರಿದರು.

ಬಿಎಸ್‍ಎನ್‍ಎಲ್ ಸೇರಿದಂತೆ ಸರ್ಕಾರಿ ಸಹಭಾಗಿತ್ವದ ಸಂಸ್ಥೆಗಳನ್ನೆಲ್ಲ ಖಾಸಗಿಯರಿಗೆ ಮಾರಾಟ ಮಾಡಿದ್ದಾರೆ ಎಂದು ದೂರಿದ ಲಾಡ್, ಮೋದಿ ಹೋದಲೆಲ್ಲ ಜೈ ಶ್ರೀರಾಮ ಘೋಷಣೆ ಕೂಗುತ್ತಾರೆ, ಎಲ್ಲಡೆ ಟಾರ್ಚ್ ಹಾಕಿ ಜೈ ಶ್ರೀರಾಮ, ಎನ್ನುವುದು ನೀತಿ ಸಂಹಿತೆ ಉಲ್ಲಂಘನೆ ಅಲ್ಲವೇ. ಯಾವುದೇ ಸಾಮಾಜಿಕ ಜಾಲತಾಣಗಳ ಆ್ಯಪ್ ಆನ್ ಮಾಡಿದರೂ ಮೋದಿ ಬರುವಂತೆ ಮಾಡಿದ್ದಾರೆ. ಜಾಹಿರಾತು ನೀಡುತ್ತೇವೆ, ಹಣ ಕೊಡುತ್ತೇವೆ ಎಂದರೂ ಪೇಡ್ ಪ್ರಚಾರಕ್ಕೂ ರಾಹುಲ್ ಗಾಂದಿ ಅವರಿಗೆ ಅವಕಾಶ ಸಿಗದಂತೆ ಮಾಡಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಗ್ರಾ.ಪಂ.ನಿಂದ ಲೋಕಸಭೆವರೆಗೆ ಮೋದಿ ಒಬ್ಬರೇ ಸ್ಟಾರ್ ಕ್ಯಾಂಪೇನರ್. ಪ್ರಧಾನಿ ಮೋದಿ ನಿಜಕ್ಕೂ ದೇಶವನ್ನು ಉದ್ಧರಿಸಿದ್ದರೆ ಇಷ್ಟೊಂದು ಓಡಾಟವೇಕೆ ಮಾಡುತ್ತಿದ್ದಾರೆ. ವಿಶ್ವಗುರು ಎನ್ನುವ ಮೋದಿ ನಿಜಕ್ಕೂ ದೇಶದ ಅಭಿವೃದ್ಧಿ ಮಾಡಿದ್ದರೆ ಮನೆಯಲ್ಲಿ ಕುಳಿತುಕೊಳ್ಳಲಿ, ಜನ ವೋಟ್ ಹಾಕುತ್ತಾರ ನೋಡೋಣ ಎಂದರು.

ಸೋಲುವ ಭೀತಿಯಿಂದ ಅಬ್ಬರದಿಂದ ಸುಳ್ಳುಗಳ ಪ್ರಚಾರ ಮಾಡುತ್ತಿದ್ದಾರೆ. ನಿಜಕ್ಕೂ ಬಿಜೆಪಿ ಪಕ್ಷಕ್ಕೆ ಗೆಲ್ಲುವ ತಾಕತ್ತಿದ್ದರೆ ಜೆಡಿಎಸ್ ಸೇರಿದಂತೆ ಸಣ್ಣ ಪಕ್ಷಗಳೊಂದಿಗೆ ಹೊಂದಾಣಿಕೆ ಬೇಕಿತ್ತೆ. ಜನಾರ್ದನರೆಡ್ಡಿಯನ್ನು ಸೇರಿಸಿಕೊಳ್ಳುವಷ್ಟು ಬಿಜೆಪಿ ದುರ್ಬಲವಾಗಿದೆ ಎಂದು ಟೀಕಿಸಿದರು.

ದೇಶಕ್ಕೆ ಇಂದಿರಾ ಗಾಂಧಿ, ಯುಪಿಎ ಸರ್ಕಾರಗಳು ಅನುಪಮ ಕೊಡುಗೆ ನೀಡಿವೆ. ಆದರೆ ಬಿಜೆಪಿ-ಎನ್‍ಡಿಎ ಸರ್ಕಾರದಲ್ಲಿ ಫಸಲ ಭಿಮಾ ಯೋಜನೆಯಲ್ಲಿ ಕಂಪನಿಗಳು ಉದ್ಧಾರ ಆಗಿವೆ. ಅಂಬಾನಿ, ಅದಾನಿ ಅಭಿವೃದ್ಧಿ ಆಗಿದ್ದಾರೆ. ನಿಜಕ್ಕೂ ದೇಶವನ್ನು ಅಭಿವೃದ್ಧಿ ಮಾಡಿದ್ದರೆ ಇಷ್ಟೊಂದು ಅಬ್ಬರದ ಪ್ರಚಾರವೇಕೆ. ಅಭಿವೃದ್ಧಿ ಆಧಾರಿತವಾಗಿ ಮೋದಿ, ಬಿಜೆಪಿ ನಾಯಕರು ಚರ್ಚೆಗೆ ಬರಲು ಸಿದ್ಧರಿಲ್ಲ ಎಂದು ಕುಟುಕಿದರು.

ಕಾಂಗ್ರೆಸ್ ಪಕ್ಷದ ಚಂಬು ಪ್ರತಿಭಟನೆಗೆ ದೇವೇಗೌಡರು ಮೋದಿ ಅಕ್ಷಯ ಪಾತ್ರೆ ಎಂದಿರುವ ಬಗ್ಗೆ ಹಿರಿಯರಾದ ಅವರ ಬಗ್ಗೆ ಮಾತನಾಡಲಾರೆ. ಅವರೀಗ ಬಿಜೆಪಿ ಜೊತೆ ಸೇರಿದ್ದು, ಅಂಥ ಹೇಳಿಕೆ ನೀಡುವುದು ಸಹಜ. ಎಂದರು.

ರಾಜ್ಯದ ಜನರು ಕಾಂಗ್ರೆಸ್ ಪರ ನಿಲ್ಲುತ್ತಾರೆ, ವಿಜಯಪುರ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 18-20 ಸ್ಥಾನ ಗೆಲ್ಲುವುದು ಖಚಿತ ಎಂದ ಸಚಿವ ಲಾಡ್, ವಿಜಯಪುರ ಕ್ಷೇತ್ರದ ಹಿರಿಯ ಸಂಸದ ರಮೇಶ ಜಿಗಜಿಣಗಿ ಸತತ ಆರು ಬಾರಿ ಗೆದ್ದಿದ್ದು, ಮಾಡಿದ ಅಭಿವೃದ್ಧಿ ಏನು ಎಂದು ಪ್ರಶ್ನಿಸಿದರು.

ವಿಜಯಪುರ ಕ್ಷೇತ್ರದ ಕಾಂಗ್ರೆಸ್ ರಾಜು ಆಲಗೂರ, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಶಾಸಕ ವಿಠ್ಠಲ ಕಟಕಧೋಂಡ, ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.