Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
ಬ್ರಿಟಿಷರ ಆಳ್ವಿಕೆಯಲ್ಲೂ ಇಂತಹ ಕ್ರೌರ್ಯವು ನಡೆದಿಲ್ಲ...
Team Udayavani, Apr 21, 2024, 2:18 PM IST
ಹೊಸದಿಲ್ಲಿ: ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ತಿಹಾರ್ ಜೈಲಿನ ಹೊರಗೆ ಔಷಧ ಗಳನ್ನು ಹಿಡಿದು ಭಾನುವಾರ ಪ್ರತಿಭಟನೆಗಿಳಿದಿದೆ.
ಚುನಾಯಿತ ಸಿಎಂ ಅರವಿಂದ್ ಕೇಜ್ರಿವಾಲ್ ಮಧುಮೇಹ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಎಎಪಿಯ ಸೌರಭ್ ಭಾರದ್ವಾಜ್ ಆರೋಪ ಮಾಡಿದ್ದಾರೆ.
ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಅವರು, “ಅರವಿಂದ್ ಕೇಜ್ರಿವಾಲ್ ಅವರು ಕಳೆದ 20 ದಿನಗಳಿಂದ ಜೈಲಿನಲ್ಲಿದ್ದಾರೆ. ಅವರು 30 ವರ್ಷಗಳಿಂದ ಮಧುಮೇಹಿ ಯಾಗಿದ್ದು ಅವರ ಸಕ್ಕರೆ ಮಟ್ಟ 300 ದಾಟಿದೆ. ನೀವು ಜಗತ್ತಿನ ಯಾವುದೇ ವೈದ್ಯರನ್ನು ಕೇಳಿದರೂ 300 ಕ್ಕಿಂತ ಹೆಚ್ಚಿರುವ ಸಕ್ಕರೆಯ ಮಟ್ಟವು ಇನ್ಸುಲಿನ್ ಇಲ್ಲದೆ ನಿಯಂತ್ರಣಕ್ಕೆ ಬರುವುದಿಲ್ಲ ಎಂದು ಹೇಳಿತ್ತಾರೆ. ತಿಹಾರ್ ಜೈಲಿನ ಆಡಳಿತವು ಇನ್ಸುಲಿನ್ ನೀಡಲು ನಿರಾಕರಿಸಿದೆ. 300 ಕ್ಕಿಂತ ಹೆಚ್ಚು ಸಕ್ಕರೆ ಮಟ್ಟ ಹೊಂದಿದ್ದರೂ ಇನ್ಸುಲಿನ್ ನಿರಾಕರಿಸುತ್ತಿದ್ದಾರೆ. ಬ್ರಿಟಿಷರ ಆಳ್ವಿಕೆಯಲ್ಲೂ ಇಂತಹ ಕ್ರೌರ್ಯವು ನಡೆದಿಲ್ಲ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ತಿಹಾರ್ ಜೈಲಲ್ಲಿ ಕೇಜ್ರಿವಾಲ್ರನ್ನು ನಿಧಾವಾಗಿ ಕೊಲ್ಲಲು ಸಂಚು ನಡೆಸಲಾಗಿದೆ ಎಂದು ಆಪ್ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದರು.
ಬಂಧನಕ್ಕೂ ಹಲವು ತಿಂಗಳುಗಳ ಮೊದಲಿನಿಂದಲೇ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇನ್ಸುಲಿನ್ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದಾರೆ. ದೇಹದ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಪರ್ಯಾಯ ಔಷಧ ಮೆಟ್ಫೋರ್ಮಿನ್ ಮಾತ್ರೆ ಸೇವಿಸುತ್ತಿದ್ದಾರೆ. ಆರೋಗ್ಯ ತಪಾಸಣೆಯ ವೇಳೆ ಸ್ವತಃ ಕೇಜ್ರಿವಾಲ್ ಅವರೇ ಈ ಮಾಹಿತಿ ನೀಡಿದ್ದಾರೆ ಎಂದು ತಿಹಾರ್ ಜೈಲು ಆಡಳಿತ ತಿಳಿಸಿದೆ. ಅಲ್ಲದೆ ಕೇಜ್ರಿವಾಲರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಆತಂಕಕಾರಿ ಪ್ರಮಾಣದಲ್ಲಿಲ್ಲ ಹಾಗೂ ಅಗತ್ಯಬಿದ್ದರೆ ಇನ್ಸುಲಿನ್ ಒದಗಿಸಲಾಗುವುದು ಎಂದಿದೆ. ಈ ವರದಿ ಲೆಫ್ಟಿನೆಂಟ್ ಗವರ್ನರ್ ಕೈಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್ ಶಾ
J&K: ಇಂದು ಜಮ್ಮು-ಕಾಶ್ಮೀರದಲ್ಲಿ 2ನೇ ಹಂತದ ಮತದಾನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.