Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

ಶಿಂಧೆ, ಪವಾರ್ ಜನ್ಮ ತಳೆದಿದ್ದಾರೆ ಚುನಾವಣೆ ನಂತರ ಪ್ರೌಢಾವಸ್ಥೆ ಗೆ ಬರುತ್ತಾರೆ...

Team Udayavani, Apr 21, 2024, 3:50 PM IST

yatnal

ಕಲಬುರಗಿ: ರಾಜ್ಯ ಸರ್ಕಾರದಲ್ಲಿ ಅಸ್ಥಿರತೆ ಕಾಡುತ್ತಿದ್ದು, ಲೋಕಸಭಾ ಚುನಾವಣೆ ನಂತರ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯ ವಿಲ್ಲ ಎಂದು ಬಿಜೆಪಿ ಮುಖಂಡ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಬಿಜೆಪಿ ಪ್ರಚಾರದಂಗವಾಗಿ ಇಲ್ಲಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಸಚಿವ ಶಿವಾನಂದ ಪಾಟೀಲ್ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಿಂಗಾಯಿತ ಸ್ವಾಮೀಜಿಯವರೊಂದಿಗೆ ಮಾತನಾಡಿರುವ ಕಾನ್ಫರೆನ್ಸ್ ಕಾಲ್ ನಲ್ಲಿ ಲಿಂಗಾಯತರ ಆಶೀರ್ವಾದ ಇರಲಿ.‌ ಒಕ್ಕಲಿಗರು- ಲಿಂಗಾಯತರು ಒಂದಾಗಿ ಲೋಕಸಭಾ ಚುನಾವಣೆ ಮುಗಿದ 15 ದಿನದೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತೇವೆ ಎಂದಿರುವುದು, ಒಕ್ಕಲಿಗರ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ಕೈ ಹಿಡಿಯಿರಿ, ಒಕ್ಕಲಿಗ ಸಿಎಂ ಆಗೋದನ್ನು ತಪ್ಪಿಸಬೇಡಿ ಎಂದಿರುವುದು ಒಂದೆಡೆಯಾದರೆ,ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಲೋಕಸಭಾ ಕ್ಷೇತ್ರದ ವರುಣಾದಲ್ಲಿ 60 ಸಾವಿರ ಮತಗಳ ಲೀಡ್ ಕೊಡಿಸದಿದ್ದರೆ ಕುರ್ಚಿ ಹೋಗುತ್ತದೆ ಎಂದಿರುವುದು ಅವಲೋಕಿಸಿದರೆ ಸರ್ಕಾರ ಉಳಿಯುವುದೇ ಇಲ್ಲ. ಈಗಾಗಲೇ ಏಕನಾಥ್ ಶಿಂಧೆ, ಅಜಿತ್ ಪವಾರ್ ಜನ್ಮ ತಳೆದಿದ್ದಾರೆ.‌ನಾಮಕರಣ ಮಾಡಲಾಗಿದೆ.‌ ಲೋಕಸಭಾ ಚುನಾವಣೆ ನಂತರ ಪ್ರೌಢಾವಸ್ಥೆ ಗೆ ಬರುತ್ತಾರೆ ಎಂದರು.

ಸಿದ್ದರಾಮಯ್ಯ- ಡಿಕೆಸಿ ನಡುವಿನ ಗುದ್ದಾಟದ ಎಲ್ಲ ಅಂಶಗಳನ್ನು ಅವಲೋಕಿಸಿದರೆ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಇಳಿಸಲು ಎಲ್ಲ ರೀತಿಯ ಅಜೆಂಡಾ ರೆಡಿ ಆಗಿದೆ ಎಂಬುದು ನಿರೂಪಿಸುತ್ತದೆ.‌ ಹೀಗಾಗಿ ಸಿಎಂ ಸಿದ್ಧ ರಾಮಯ್ಯ ಸಿಎಂ ಆಗಿ ಮುಂದುವರೆಯಲು ಹಾಲು ಮತದವರು ಎಚ್ಚರವಾಗಿರಬೇಕು.‌ ಏಲ್ಲೆಲ್ಲಿ ಡಿಕೆಶಿ ಚೀಲಾಗಳು ನಿಂತಿದ್ದಾರೆಯೋ ಅವರನ್ನು ಸೋಲಿಸಿದರೆ ಸಿದ್ದರಾಮಯ್ಯ ಸುರಕ್ಷಿತವಾಗಿ ಇರುತ್ತಾರೆ ಎಂದರು.

ಚೊಂಬು ಕಾಂಗ್ರೆಸ್ ಕೊಡುಗೆ
ದೇಶದಲ್ಲಿ ಚೊಂಬು ಕೊಟ್ಟಿರುವುದು ಕಾಂಗ್ರೆಸ್. ಚಂದ್ರಶೇಖರ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆಯಲ್ಲಿ ಸಾಲಕ್ಕಾಗಿ ದೇಶದ ಚಿನ್ನ ಅಡವು ಇಡಲಾಗಿತ್ತು.‌ ಚಂದ್ರಶೇಖರ ಅವರನ್ನು ಬೆಂಬಲ‌ ನೀಡಿದವರ್ಯಾರು? ಮೋದಿ ಅವರು ಪಿಎಂ ಆದ ನಂತರ ಅಮೃತ ಕಲಶ ನೀಡಿದ್ದಾರೆ.‌ ಮೋದಿ‌ ಅವರು 14 ವರ್ಷ ಸಿಎಂ ಹಾಗೂ 10 ಪಿಎಂ ಆಗಿ ಕೇವಲ 2.30 ಕೋ.ರೂ ಮೊತ್ತ ಆಸ್ತಿ ಹೊಂದಿದ್ದಾರೆ. ಆದರೆ ಇದೇ ಡಿಕೆಶಿ ಸಹೋದರರು 2 ಸಾವಿರಕ್ಕೂ ಅಧಿಕ ಆಸ್ತಿ ಹೊಂದಿದ್ದಾರೆ. ಇವರು ಕೆಲ ವರ್ಷಗಳ ಹಿಂದೆ ಏನು ಮಾಡುತ್ತಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ದುರಹಂಕಾರ
ಗ್ಯಾರಂಟಿಗಳ ಗಳಿಂದ ಗೆಲ್ಲುತ್ತೇವೆ ಎಂಬ ಅಂಹಕಾರ ಕಾಂಗ್ರೆಸ್ ಹೊಂದಿದೆ.‌ ಇದೇ ಕಾರಣಕ್ಕೆ ಆಡಳಿತ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಡೆದುಕೊಂಡ ರೀತಿ ಒಂದೇ ವರ್ಗದ ಪರ‌ನಿಂತಿರುವುದು ಕಂಡು ಬರುತ್ತಿದೆ.‌ ಬಿಜೆಪಿ ಯಾವುದೇ ಧರ್ಮದ ವಿರೋಧವಿಲ್ಲ. ಇಲ್ಲಿಯ ಅನ್ನ ತಿಂದು ಬೇರೆಯವರಿಗೆ ಜೈ ಅನ್ನುವರಿಗೆ ತಮ್ಮ‌ಬೆಂಬಲವಿಲ್ಲ. ಮೋದಿ ಹಾಡು ಮಾಡಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಒಟ್ಟಾರೆ ಗ್ಯಾರಂಟಿ ಹವಾ ದಲ್ಲಿ‌ ತೇಲಲಾಗುತ್ತಿದೆ ಎಂದರು.

ಸಂಸದ ಡಾ.‌ಉಮೇಶ ಜಾಧವ್, ಬಿಜೆಪಿ‌ ನಗರಾಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.