RCB ಬೆನ್ನು ಬಿಡದ ದುರಾದೃಷ್ಟ!!!; ಕೆಕೆಆರ್ ಎದುರು 1 ರನ್ ಸೋಲು

ಹೋರಾಡಿದರೂ ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲವೇಕೆ??

Team Udayavani, Apr 21, 2024, 7:52 PM IST

1-eqwwqe

ಕೋಲ್ಕತಾ : ಈಡನ್ ಗಾರ್ಡನ್ಸ್ ನಲ್ಲಿ ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದೇ ಒಂದು ರನ್ ನಿಂದ ಸೋಲು ಅನುಭವಿಸಿದ್ದು ತಂಡದ ದುರಾದೃಷ್ಟಕ್ಕೆ ಸಾಕ್ಷಿಯಾಯಿತು.

ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ಕೆಕೆಆರ್ ಪರ ಓಪನರ್ ಫಿಲ್ ಸಾಲ್ಟ್ ಅವರ ಆಕ್ರಮಣಕಾರಿ 48 ರನ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು.

ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಆಘಾತ ಅನುಭವಿಸಿತು. 7 ರನ್ ಗಳಿಸಿ ನಾಯಕ ಫ್ಲೆಸಿಸ್ ಔಟಾದರೆ, ಕೊಹ್ಲಿ 18 ರನ್ ಗಳಿಸಿದ್ದ ವೇಳೆ ನಿರ್ಗಮಿಸಿದರು. ಆ ಬಳಿಕ ಭರವಸೆಯ ನಿರ್ಣಾಯಕ ಆಟವಾಡಿದ ವಿಲ್ ಜ್ಯಾಕ್ಸ್ 55(32 ಎಸೆತ) ರನ್ ಗಳಿಸಿ ಔಟಾದರು. ಅವರಿಗೆ ಸಾಥ್ ನೀಡಿದ ರಜತ್ ಪಾಟಿದಾರ್ 52 (23 ಎಸೆತ) ರನ್ ಗಳಿಸಿ ಔಟಾದರು. ವಿಫಲರಾದ ಕ್ಯಾಮರಾನ್ ಗ್ರೀನ್ 6 ರನ್ ಗೆ ಔಟಾದರು. ಸುಯಶ್ ಪ್ರಭುದೇಸಾಯಿ 24 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಗೆಲುವಿಗಾಗಿ ಹೋರಾಡಿದ ದಿನೇಶ್ ಕಾರ್ತಿಕ್ 25 ರನ್ ಗಳಿಸಿ ಔಟಾದರು. ಮಹಿಪಾಲ್ ಲೊಮ್ರೋರ್ 4 ರನ್ ಗಳಿಸಿ ಔಟಾದರು.

ಆ ಬಳಿಕ ಕರ್ಣ್ ಶರ್ಮ ಮೂರು ಸಿಕ್ಸರ್ ಸಿಡಿಸಿ ಪಂದ್ಯದ ದಿಕ್ಕು ಬದಲಿಸುವ ಸೂಚನೆ ನೀಡಿದರು. ಸ್ಟಾರ್ಕ್ ಎಸೆದ ಕೊನೆಯ ಓವರ್ ನಲ್ಲಿ ಗೆಲ್ಲಲು 20 ರನ್ ಅಗತ್ಯವಿತ್ತು. ಕರ್ಣ್ ಮೂರು ಸಿಕ್ಸರ್ ಸಿಡಿಸಿದರು. ಆದರೆ ಐದನೇ ಎಸೆತದಲ್ಲಿ ಸ್ಟಾರ್ಕ್ ತಂತ್ರ ಹೂಡಿ ಅದ್ಬುತ ಕ್ಯಾಚ್ ಪಡೆದು ಕರ್ಣ್ ಅವರನ್ನು ಪೆವಿಲಿಯನ್ ಗೆ ಕಳುಹಿಸಿದರು. ಕೊನೆಯ ಎಸೆತದಲ್ಲಿ ಮೂರು ರನ್ ಅಗತ್ಯವಿತ್ತು. ಫರ್ಗುಸನ್ ಒಂದು ರನ್ ಓಡಿ ಇನ್ನೊಂದು ಓದಲು ಪ್ರಯತ್ನಿಸುವ ವೇಳೆ ರನ್ ಔಟ್ ಆದರು. 221 ಕ್ಕೆ ಆಲೌಟಾಗುವ ಮೂಲಕ ಎಷ್ಟು ಹೋರಾಟ ಮಾಡಿದರೂ ಗೆಲುವು ನಮ್ಮ ಬಳಿ ಇಲ್ಲ ಎನ್ನುವ ನೋವು ಮತ್ತೆ ಮತ್ತೆ ತಂಡಕ್ಕೆ ಮತ್ತು ಅಭಿಮಾನಿಗಳಿಗೆ ಕಾಡಿತು. ಸೋಲಿನಲ್ಲಿ ಆರಂಭಿಕ ಆಘಾತ ಮತ್ತು ಬೌಲಿಂಗ್ ಸಾಮರ್ಥ್ಯವಿಲ್ಲದಿರುವುದು ಎದ್ದು ಕಂಡಿತು.

ಬಿಗಿ ದಾಳಿ ನಡೆಸಿದ ರಸೆಲ್ 3 ವಿಕೆಟ್ ಪಡೆದರು. ನರೇನ್ 2, ಹರ್ಷಿತ್ ರಾಣಾ 2, ಸ್ಟಾರ್ಕ್ ದುಬಾರಿ ಎನಿಸಿಕೊಂಡರೂ 1 ವಿಕೆಟ್ ಪಡೆದರು. ಮಿಥುನ್ ಚಕ್ರವರ್ತಿ 1 ವಿಕೆಟ್ ಪಡೆದರು.

ಆರ್ ಸಿಬಿ ಆಡಿದ 8 ನೇ ಪಂದ್ಯದಲ್ಲಿ 7 ನೇ ಸೋಲಿನ ಆಘಾತ ಅನುಭವಿಸಿದ್ದು, ಕೆಕೆಆರ್ 7ನೇ ಪಂದ್ಯದಲ್ಲಿ5 ನೇ ಗೆಲುವು ತನ್ನದಾಗಿಸಿಕೊಂಡು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಸಾಲ್ಟ್ ಸ್ಫೋಟಕ ಆರಂಭ

ಸುನಿಲ್ ನರೈನ್ 10(15 ಎಸೆತ) ವಿಫಲವಾದರು. ವಿಶ್ವದ ನಂ. 2 ಟಿ 20 ಬ್ಯಾಟ್ಸ್ ಮ್ಯಾನ್ ಸಾಲ್ಟ್, ಕೆಕೆಆರ್‌ಗೆ ಸ್ಫೋಟಕ ಆರಂಭ ನೀಡಿದರು. ಮೂರು ಸಿಕ್ಸರ್‌ಗಳು ಮತ್ತು ಏಳು ಬೌಂಡರಿಗಳನ್ನು ಸಿಡಿಸಿದರು. 14 ಎಸೆತಗಳಲ್ಲಿ 48 ರನ್ ಗಳಿಸಿ ಔಟಾದರು.

ಆಂಡ್ರೆ ರಸೆಲ್ ಔಟಾಗದೆ 27, ಮಣದೀಪ್ ಸಿಂಗ್ ಔಟಾಗದೆ 24, ಆತಿಥೇಯ ತಂಡ ದೊಡ್ಡ ಮೊತ್ತ ಗಳಿಸಲು ನೆರವಾದರು. ವೆಂಕಟೇಶ್ ಅಯ್ಯರ್ (16) ಮತ್ತು ರಿಂಕು ಸಿಂಗ್ (24)

ಅಯ್ಯರ್ ತಮ್ಮ 20ನೇ ಐಪಿಎಲ್ ಅರ್ಧಶತಕ, ಈ ಋತುವಿನ ಮೊದಲ ಅರ್ಧಶತಕ ದಾಖಲಿಸಿದರು. 35 ಎಸೆತಗಳಲ್ಲಿ 50 ರನ್ ಗಳಿಸಿದ ಅವರು ಮುಂದಿನ ಎಸೆತದಲ್ಲಿ ಔಟಾದರು.

ಮೊಹಮ್ಮದ್ ಸಿರಾಜ್ ಅವರು ತಮ್ಮ ಯಾರ್ಕರ್‌ಗಳು ಮತ್ತು ವೈಡ್ ಯಾರ್ಕರ್‌ಗಳೊಂದಿಗೆ ತಮ್ಮ 1 ವಿಕೆಟ್ ಪಡೆದರು. ಕ್ಯಾಮರೂನ್ ಗ್ರೀನ್ 2 ವಿಕೆಟ್ ಪಡೆದರು. ಯಶ್ ದಯಾಲ್ 2 ವಿಕೆಟ್ ಪಡೆದರು ಆದರೆ 56 ರನ್ ನೀಡಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.