ಇನ್ನೊಬ್ಬರಿಗೆ ಬದುಕು ಕಟ್ಟಿಕೊಳ್ಳಲು ಅನುವಾಗುವುದೇ ಜೀವನ: ಪೇಜಾವರ ಶ್ರೀ

ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಲೋಕಾರ್ಪಣೆ

Team Udayavani, Apr 22, 2024, 12:41 AM IST

ಇನ್ನೊಬ್ಬರಿಗೆ ಬದುಕು ಕಟ್ಟಿಕೊಳ್ಳಲು ಅನುವಾಗುವುದೇ ಜೀವನ: ಪೇಜಾವರ ಶ್ರೀ

ಉಡುಪಿ: ಯಾರ ಬದುಕು ಹತ್ತು ಮಂದಿಯ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೋ ಅದು ನಿಜವಾದ ಬದುಕು. ವ್ಯಕ್ತಿ ದಿನ ಕಳೆದಂತೆ ಸಾವಿಗೆ ಹತ್ತಿರವಾಗುತ್ತಾನೆ. ಆದರೆ ಸಮಾಜದ ನಡುವೆ ಇರುವ ಸಂಘಟನೆ ಗಟ್ಟಿಯಾಗಿ ಬೆಳೆಯುತ್ತ ಸಮಾಜಕ್ಕೆ ಹತ್ತಿರವಾಗುತ್ತದೆ ಎಂದು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನುಡಿದರು.

ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿ ನಿರ್ಮಿಸಲಾದ ಯಕ್ಷಗಾನ ಕಲಾರಂಗದ ನೂತನ ಕಟ್ಟಡ “ಇನ್ಫೋಸಿಸ್‌ ಫೌಂಡೇಶನ್‌ ಯಕ್ಷಗಾನ ಡೆವಲಪ್‌ಮೆಂಟ್‌ ಆ್ಯಂಡ್‌ ಟ್ರೈನಿಂಗ್‌ ರಿಸರ್ಚ್‌ ಸೆಂಟರ್‌ (ಐವೈಸಿ)ನ ಶ್ರೀ ವಿಶ್ವೇಶತೀರ್ಥ ವೇದಿಕೆಯಲ್ಲಿ ರವಿವಾರ ನಡೆದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀಪಾದರು ಆಶೀರ್ವಚನ ನೀಡಿದರು.

ಸಾಮಾಜಿಕ ಕೈಂಕರ್ಯದಲ್ಲಿ ತೊಡಗಿಸಿಕೊಂಡ ಕಲಾರಂಗಕ್ಕೆ ದಾನಿಗಳು ನಿರಂತರವಾಗಿ ಸಹಾಯಹಸ್ತ ಚಾಚಲು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ. ಸಂಸ್ಥೆಯಿಂದ ಸಮಾಜಕ್ಕೆ ಇನ್ನಷ್ಟು ಕೊಡುಗೆ ಲಭಿಸಲಿ ಎಂದು ಹರಸಿದರು.

ಇನ್ಫೋಸಿಸ್‌ ಫೌಂಡೇಶನ್‌ನ ವಿಶ್ವಸ್ತ ಸುನಿಲ್‌ ಕುಮಾರ್‌ ಧಾರೇಶ್ವರ್‌ ಉದ್ಘಾಟಿಸಿ, ಯಕ್ಷಗಾನವು ಮನೋ ರಂಜನೆಯೊಂದಿಗೆ ಶಾಸ್ತ್ರೀಯ ವಿಚಾರಧಾರೆಗಳನ್ನು ಸಮಾಜಕ್ಕೆ ನೀಡುತ್ತಾ ಬಂದಿದೆ. ಕ್ಷೀಣಿಸುತ್ತಿರುವ ಕಲಾ ಪೋಷಕರಿಂದಾಗಿ ಪ್ರಸ್ತುತ ಯಕ್ಷಗಾನ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಕಲೆ ಮತ್ತು ಕಲಾಪೋಷಣೆ ಜತೆಯಾಗಿ ಹೆಜ್ಜೆ ಇರಿಸಿದಾಗ ಕಲೆಯನ್ನು ಉಳಿಸಿ ಬೆಳೆಸಬಹುದು. ಈ ನಿಟ್ಟಿನಲ್ಲಿ ಪ್ರಜ್ಞಾವಂತ ಕಲಾ ಪೋಷಕರೆಲ್ಲರೂ ಪ್ರಯತ್ನಶೀಲರಾಗಬೇಕಾಗಿದೆ ಎಂದರು.

ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಾತನಾಡಿ, ಸತøಯತ್ನ ಬಿಡದೆ ಮುಂದುವರಿದಾಗ ಯಾವುದೇ ಕೆಲಸವನ್ನು ಪೂರ್ತಿಗೊಳಿಸಬಹುದು ಎಂಬುದಕ್ಕೆ ಕಲಾರಂಗದ ಸಾಧನಾ ಕಾರ್ಯಗಳು ಸಾಕ್ಷಿಯಾಗುತ್ತವೆ. ಕಲೆ ಉಳಿಸಲು ಯುವ ಕಲಾವಿದರಿಗೆ ಈ ಸಂಸ್ಥೆ ಸ್ಫೂರ್ತಿಯಾಗಲಿ ಎಂದು ಹರಸಿದರು.

ಶ್ರೀ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಫ‌ಲವನ್ನು ಬಯಸದೇ ಕೆಲಸ ಮಾಡಿದಾಗ, ದೇವರೇ ಫ‌ಲವನ್ನು ಕೊಡುತ್ತಾರೆ ಎಂಬುದಕ್ಕೆ ಯಕ್ಷ ಕಲಾರಂಗ ಉತ್ತಮ ನಿದರ್ಶನ. ಸಂಸ್ಥೆಯ ನಿಷ್ಕಾಮ ಕಾರ್ಯಕ್ಕೆ ನೂತನ ಕಟ್ಟಡದ ಮೂಲಕ ಫ‌ಲ ಸಿಕ್ಕಿದೆ ಎಂದು ಅನುಗ್ರಹ ಸಂದೇಶ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಶುಭ ಹಾರೈಸಿದರು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌ ಶುಭಾಶಂಸನೆಗೈದರು. ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌, ಬೆಂಗಳೂರಿನ ಉದ್ಯಮಿ ರಮೇಶ್ಚಂದ್ರ ಹೆಗ್ಡೆ, ಕಲಾರಂಗದ ಉಪಾಧ್ಯಕ್ಷರಾದ ಎಸ್‌.ವಿ. ಭಟ್‌, ಕಿಶನ್‌ ಹೆಗ್ಡೆ ಪಳ್ಳಿ, ವಿ.ಜಿ. ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾರ್ಯದರ್ಶಿ ಮುರಲಿ ಕಡೆಕಾರ್‌ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ತಿಳಿಸಿ, ನಿರೂಪಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು.

ಗೌರವಾಭಿನಂದನೆ
ಯತಿತ್ರಯರು ಇನ್ಫೋಸಿಸ್‌ ಫೌಂಡೇಶನ್‌ ಪರವಾಗಿ ಸುನಿಲ್‌ ಕುಮಾರ್‌ ಧಾರೇಶ್ವರ್‌ ಅವರಿಗೆ ಯಕ್ಷಗಾನದ ಬೆಳ್ಳಿಯ ಕಿರೀಟದ ಪ್ರತಿಕ್ರತಿ ನೀಡಿ ಗೌರವಿಸಿದರು. ಡಾ| ಎಚ್‌.ಎಸ್‌. ಬಲ್ಲಾಳ್‌, ಡಾ| ಜಿ. ಶಂಕರ್‌, ಡಾ| ನಿ.ಬೀ. ವಿಜಯ ಬಲ್ಲಾಳ್‌, ರಮೇಶ್ಚಂದ್ರ ಹೆಗ್ಡೆ ಅವರನ್ನು ಅಭಿನಂದಿಸಲಾಯಿತು. ತೆಂಕುತಿಟ್ಟಿನ ಸಭಾಲಕ್ಷಣ, ಬಡಗುತಿಟ್ಟಿನ ಬಾಲಗೋಪಾಲ ನರ್ತನ ನಡೆಯಿತು. ಸಭೆಯ ಬಳಿಕ ಒಡಿಸ್ಸಿ ನೃತ್ಯ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.