ಕೃಷಿಕರಿಗೆ ಪೂರಕ ಯೋಜನೆಗಳು ಮತ ಕೇಳಲು, ಚರ್ಚಿಸಲು ಸಹಾಯ: ಜೆಪಿ ಹೆಗ್ಡೆ

ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.

Team Udayavani, Apr 22, 2024, 10:07 AM IST

ಕೃಷಿಕರಿಗೆ ಪೂರಕ ಯೋಜನೆಗಳು ಮತ ಕೇಳಲು, ಚರ್ಚಿಸಲು ಸಹಾಯ: ಜೆಪಿ ಹೆಗ್ಡೆ

ಚಿಕ್ಕಮಗಳೂರು: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತಯಾಚನೆಯ ವೇಳೆ ಜನರು ಅಪಾರ ಅಭಿಮಾನ, ಪ್ರೀತಿ, ಪ್ರೋತ್ಸಾಹ ನೀಡಿದ್ದಾರೆ. ಈ ಅಭಿಮಾನ ಮತ್ತು ಪ್ರೀತಿ ಮತವಾಗಿ ಬದಲಾಗುತ್ತದೆ ಎಂಬ ನಂಬಿಕೆ ಇದೆ. ಜನ ಬದಲಾವಣೆ ಬಯಸಿದ್ದಾರೆ. ಇದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಬಡವರ ಬದುಕಿಗೆ ನೆರವಾದ ಐದು ಗ್ಯಾರೆಂಟಿಗಳೇ ಕಾರಣ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಹೇಳಿದರು.

ಅವರು ತಾಲೂಕಿನ ಆಲ್ದೂರಿನಲ್ಲಿ ನಡೆದ ಬೃಹತ್‌ ಜಾಥಾದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹತ್ತು ವರ್ಷ ಕಳೆದರೂ ಮತ್ತೊಂದು ರೈಲು ತರಲಾಗಲಿಲ್ಲ ಕಳೆದ ನಾಲ್ಕು ದಶಕಗಳಿಂದ ರಾಜಕೀಯದಲ್ಲಿ ತೊಡಗಿಕೊಂಡಿದ್ದ ನನ್ನ ಬಗ್ಗೆ ಜನರು ಅಪಾರ ಪ್ರೀತಿ ತೋರಿಸುತ್ತಿರುವುದು ಮಾಡಿರುವ ಕೆಲಸಗಳನ್ನು ನೋಡಿ. ಕೇವಲ 20 ತಿಂಗಳ ಕಾಲ ಸಂಸದನಾಗಿದ್ದರೂ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.

ಒಂದು ರೈಲ್ವೆ ಆರಂಭವಾಗಿ ಹತ್ತು ವರ್ಷ ಕಳೆದರೂ ಅನಂತರ ಅಧಿಕಾರಕ್ಕೆ ಬಂದವರಿಗೆ ಮತ್ತೂಂದು ರೈಲು ತರಲಾಗಲಿಲ್ಲ. ಪಕ್ಷದ ಜನರೇ “ಗೋ ಬ್ಯಾಕ್‌’ ಎಂದು ಹೇಳುವ ಸ್ಥಿತಿ ನಿರ್ಮಾಣವಾಯಿತು. ಇದರಿಂದಾಗಿ ಪ್ರತಿಸ್ಪರ್ಧಿ ಕ್ಷೇತ್ರವನ್ನೇ ತೊರೆದು ಹೋಗುವಂತಾಯಿತು. ಏನಾದರೂ ಅಭಿವೃದ್ಧಿ ಮಾಡಿದರೆ ಕ್ಷೇತ್ರದ ಜನರು ಚುನಾವಣೆ ಬಂದಾಗ ಸ್ಮರಿಸುತ್ತಾರೆ. ಚಿಕ್ಕಮಗಳೂರಿನ ಬೀದಿ ಬೀದಿಗಳಲ್ಲಿ ಮತ ಯಾಚನೆ ಮಾಡುವಾಗ ಜನ ತೋರುತ್ತಿರುವ ಪ್ರೀತಿಯನ್ನು ಕಂಡಾಗ ಗೆಲ್ಲುವ ಆತ್ಮವಿಶ್ವಾಸ ಮೂಡಿದೆ ಎಂದರು.

ಜನಪ್ರತಿನಿಧಿಯಾಗಿ ಅಡಿಕೆ ಬೆಳೆಗಾರರಿಗೆ ಮಾಡಿದ ನೆರವು, ಕಾಂಗ್ರೆಸ್‌ ಸರಕಾರದ ಕೃಷಿಕರಿಗೆ ಪೂರಕವಾದ ಯೋಜನೆಗಳು ಮತ ಕೇಳಲು ಮತ್ತು ಮತದಾರರೊಂದಿಗೆ ಚರ್ಚಿಸಲು ಸಹಾಯ ಮಾಡಿದೆ. ಜನಪ್ರತಿನಿಧಿ ಎನಿಸಿ  ಕೊಂಡವರು, ಚುನಾವಣೆ ವೇಳೆ ಮತ ಯಾಚಿಸುವಾಗ ಅವರು ಕ್ಷೇತ್ರದ ಜನರಿಗಾಗಿ ಮಾಡಿದ ಯಾವುದಾದರೂ ಕೆಲಸಗಳಿದ್ದರೆ ನೆರವಾಗುತ್ತದೆ. ಇಲ್ಲಿನ ಮತದಾರರು ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯ ನೋಡಿಕೊಂಡು ಜಯಕ್ಕಾಗಿ ಹಾರೈಸುತ್ತಿದ್ದಾರೆ. ಇದು ಯಶಸ್ಸಿನ ಹಾದಿಗೆ ನೆರವಾಗುತ್ತದೆ ಎಂದರು. ಮಾಜಿ ಶಾಸಕಿ ಮೋಟಮ್ಮ, ಎಂ.ಪಿ. ಕುಮಾರ ಸ್ವಾಮಿ ಹಾಗೂ ಕಾಂಗ್ರೆಸ್‌ನ ಇತರ ಗಣ್ಯರು ಈ
ಸಂದರ್ಭದಲ್ಲಿ ಹಾಜರಿದ್ದರು.

“ಗ್ಯಾರಂಟಿಯಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಲೇವಡಿ ಮಾಡಿರುವುದು ಖಂಡನೀಯ’

ಮೂಡಿಗೆರೆ ಶಾಸಕಿ, ನಯನಾ ಮೋಟಮ್ಮ ಮಾತನಾಡಿ, “ಇವತ್ತು ರಾಜ್ಯ ಮಹಿಳೆಯರು ಖುಷಿಯಿಂದ, ಆತ್ಮವಿಶ್ವಾಸದಿಂದ ಇರಲು ಕಾಂಗ್ರೆಸ್‌ ಸರಕಾರ ನೀಡಿದ ಐದು ಗ್ಯಾರಂಟಿಗಳೇ ಕಾರಣವಾಗಿವೆ. ಮಾಜಿ ಮುಖ್ಯಮಂತ್ರಿಗಳು ಈ ಗ್ಯಾರಂಟಿಯಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಲೇವಡಿ ಮಾಡಿರುವುದು ಖಂಡನೀಯ. ಎ. 26ರಂದು ನಡೆಯುವ ಮತದಾನದ ವೇಳೆ ಕ್ಷೇತ್ರದ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್‌ ಸರಕಾರ ನೀಡಿರುವ ಐದು ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯ ಮರೆತ ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಸೋಲಿನ ಆತಂಕ ಕಾಡಿದಾಗ ಲೇವಡಿಯೇ ಅಸ್ತ್ರವಾಗುತ್ತದೆ. ನಮ್ಮ
ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸುತ್ತಿದ್ದಾರೆಯೇ ಹೊರತು ಪ್ರತಿಸ್ಪರ್ಧಿಗಳನ್ನು ಟೀಕಿಸಿಯೋ ಅಥವಾ ಲೇವಡಿ ಮಾಡಿಯೋ ಮತ ಯಾಚಿಸುತ್ತಿಲ್ಲ. ಮಹಿಳೆಯರನ್ನು ಅವಮಾನಿಸುವುದು ಕಾಂಗ್ರೆಸ್‌ ಸಂಸ್ಕೃತಿಯಲ್ಲ. ನಾಳೆಯ ನೆಮ್ಮದಿಗಾಗಿ ಇಂದು ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ಟಾಪ್ ನ್ಯೂಸ್

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.