ಬಗೆಹರಿಯದ ಸಮಸ್ಯೆ; ಉಕ್ಕಿ ಹರಿಯುವ ಮ್ಯಾನ್‌ಹೋಲ್‌!


Team Udayavani, Apr 22, 2024, 5:45 PM IST

ಬಗೆಹರಿಯದ ಸಮಸ್ಯೆ; ಉಕ್ಕಿ ಹರಿಯುವ ಮ್ಯಾನ್‌ಹೋಲ್‌!

ಮಹಾನಗರ: ನಗರದಲ್ಲಿ ಒಳಚರಂಡಿಯ ಜಾಲಕ್ಕೆ ಮನೆ – ವಸತಿ ಸಮುಚ್ಚಯ, ವಾಣಿಜ್ಯ ಕಟ್ಟಡಗಳ ಮಳೆ ನೀರಿನ ಸಂಪರ್ಕವನ್ನು ಅನಧಿಕೃತವಾಗಿ ನೀಡುತ್ತಿರುವುದು ಮತ್ತೆ ಮತ್ತೆ ಗಮನಕ್ಕೆ ಬರುತ್ತಿದ್ದು, ಸಣ್ಣ ಮಳೆಯಾದರೂ ನಗರದ ವಿವಿಧಡೆ ಮ್ಯಾನ್‌ ಹೋಲ್‌ಗ‌ಳಿಂದ ತ್ಯಾಜ್ಯ ನೀರು ಹೊರಬರುವುದು ಕಂಡು ಬರುತ್ತದೆ.

ಶನಿವಾರ ಮುಂಜಾನೆ ವೇಳೆ ಸುರಿದ ಮಳೆಗೂ ನಗರದ ವಿವಿಧಡೆ ಒಳಚರಂಡಿ ಮ್ಯಾನ್‌ಹೋಲ್‌ಗ‌ಳಿಂದ ನೀರು ಹರಿದು ಹೋಗಿದೆ. ಮುಂದಿನ ದಿನಗಳಲ್ಲಿ ಮಳೆ ನಿರಂತರವಾಗಿ ಸುರಿಯಲು ಆರಂಭವಾದರೆ ಈ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಒಳಚರಂಡಿಗೆ ನೀರು ಹರಿಯುವ ಪೈಪ್‌ಲೈನ್‌ಗೆ ಮಳೆ ನೀರಿನ ಸಂಪರ್ಕ ನೀಡುವುದರಿಂದ ಮಳೆಗಾಲದಲ್ಲಿ ಹಲವೆಡೆ ಮ್ಯಾನ್‌ಹೋಲ್‌ ಸಮಸ್ಯೆ ಎದುರಾಗುತ್ತದೆ.

ಪ್ರತೀ ವರ್ಷ ಈ ಸಮಸ್ಯೆಗೆ ಸಂಬಂಧಿಸಿದಂತೆ ಪಾಲಿಕೆ ವತಿಯಿಂದ ಸಾರ್ವ ಜನಿಕರು, ಕಟ್ಟಡ ಮಾಲಕರಿಗೆ ಎಚ್ಚರಿಕೆ ನೀಡಲಾಗುತ್ತದೆಯಾದರೂ, ಸಮಸ್ಯೆ ಮಾತ್ರ ಪರಿಹಾರ ಕಾಣಿಸುತ್ತಿಲ್ಲ. ಹೀಗಾಗಿ ಮಳೆಗಾಲದಲ್ಲಿ ಚರಂಡಿ ನೀರು ರಸ್ತೆಯಲ್ಲಿಯೇ ಹರಿಯುವ ಪ್ರಸಂಗ ಸೃಷ್ಟಿಯಾಗುತ್ತಲೇ ಇರುತ್ತದೆ.

ನಗರದ ಕೆಲವು ಭಾಗದ ಕಟ್ಟಡದವರಿಗೆ ಮಳೆ ನೀರು ಸರಾಗ ಹರಿಯುವಿಕೆಗೆ ಬೇಕಾದ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲ. ಅಂತಹವರು  ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಸಂಪರ್ಕ ನೀಡಿರುತ್ತಾರೆ. ಪರಿಣಾಮವಾಗಿ ಮಳೆ ನೀರು, ಒಳಚರಂಡಿ ನೀರು ಜತೆಯಾಗಿ ಹರಿದು ಒತ್ತಡ ತಡೆದುಕೊಳ್ಳಲು ಸಾಧ್ಯವಾಗದೆ ಅಲ್ಲಲ್ಲಿ ಇರುವ ಮ್ಯಾನ್‌ಹೋಲ್‌ಗ‌ಳು ಬಾಯೆ¤ರೆದು ಕೊಳಚೆ ನೀರು ಹೊರಬರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ಪರಿಸರವೆಲ್ಲ ಗಲೀಜಾಗಿ ಅಸಹ್ಯ ವಾತಾವರಣ ನಿರ್ಮಾಣವಾಗುತ್ತದೆ. ಆದ್ದರಿಂದ ಈಗಿನಿಂದಲೇ ಇದರ ಕಾರ್ಯಾಚರಣೆ ಆರಂಭಿಸಿದರೆ ಮಳೆಗಾಲದಲ್ಲಿ ಮ್ಯಾನ್‌ ಹೋಲ್‌ ಸಮಸ್ಯೆ ಹೆಚ್ಚಾಗಿ ಕಾಣಿಸದು. ಅಪಾಯಕಾರಿ ನಗರದ ಅನೇಕ ಕಡೆಗಳಲ್ಲಿನ ಅರೆಬರೆ ಕಾಮಗಾರಿ ಯಿಂದಾಗಿ ಮ್ಯಾನ್‌ ಹೋಲ್‌ಗ‌ಳು ಅಪಾಯದ ಸ್ಥಿತಿಯಲ್ಲಿದೆ.

ಸಾಮಾನ್ಯವಾಗಿ ಮ್ಯಾನ್‌ಹೋಲ್‌ಗ‌ಳು ರಸ್ತೆಗೆ ಸಮನಾಂತರವಾಗಿ ಇರಬೇಕು. ನಗರದಲ್ಲಿನ ಅನೇಕ ಮ್ಯಾನ್‌ ಹೋಲ್‌ಗ‌ಳು ಸುಮಾರು 50 ವರ್ಷ ಹಳೆಯದಾಗಿದ್ದು, ಅವುಗಳ ಪೈಕಿ ರಸ್ತೆಗಳ ಮೇಲಿರುವ ಹಲವು ಮ್ಯಾನ್‌ಹೋಲ್‌ ಗಳು ಕೆಳಕ್ಕೆ ಕುಸಿದುಕೊಂಡು ಅಪಾಯದ ಸ್ಥಿತಿಯಲ್ಲಿವೆ. ಇದರ ಮೂಲಕವೂ ಮಳೆ ಬಂದಾಗ ನೀರು ಚರಂಡಿ ಬದಲಿಗೆ ಈ ಮ್ಯಾನ್‌ಹೋಲ್‌ಗೆ ನುಗ್ಗಿ ಪಕ್ಕದ ಮ್ಯಾನ್‌ ಹೋಲ್‌ ಮೂಲಕ ಹೊರಗಡೆ ಬಂದು ಸಮಸ್ಯೆಗೆ ಕಾರಣವಾಗುತ್ತಿದೆ.

25 ಸಾವಿರಕ್ಕೂ ಅಧಿಕ ಮ್ಯಾನ್‌ಹೋಲ್‌ ಪಾಲಿಕೆಯ ಒಳಚರಂಡಿ ಮೂಲ ಯೋಜನೆಯು 1957ರ ನಿರ್ದೇಶನದಂತೆ
ಕಾಮಗಾರಿಯನ್ನು 1970-71ರಲ್ಲಿ ಪೂರ್ಣಗೊಳಿಸಲಾಗಿತ್ತು. ಅಂದಿನ ಜನಸಂಖ್ಯೆ 1,80,000ಕ್ಕೆ ತಯಾರಿಸಿ ಅಂದಾಜಿತ 2 ಲಕ್ಷ ಜನಸಂಖ್ಯೆಗೆ ಇದನ್ನು ವಿನ್ಯಾಸಗೊಳಿಸಲಾಗಿತ್ತು. ಆ ಕಾಲದಲ್ಲಿ 6,000 ಮ್ಯಾನ್‌ಹೋಲ್‌ ಮಾಡಲಾಗಿತ್ತು.ಆ ನಂತರ 2006ರಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡ ಎಡಿಬಿ ಯೋಜನೆಯಡಿ ಒಟ್ಟು 14,365 ಮ್ಯಾನ್‌ ಹೋಲ್‌ ಮಾಡಲಾಗಿದೆ. ಆ ಬಳಿಕ ಅಗತ್ಯ ವಿರುವ ಕಾರಣದಿಂದ ಹೆಚ್ಚುವರಿಯಾಗಿ ಪಾಲಿಕೆಯು 5,000ರಷ್ಟು ಮ್ಯಾನ್‌ಹೋಲ್‌ ಗಳನ್ನು ನಿರ್ಮಿಸಲಾಗಿತ್ತು. ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಒಟ್ಟು 25 ಸಾವಿರಕ್ಕೂ ಅಧಿಕ ಮ್ಯಾನ್‌ಹೋಲ್‌ಗ‌ಳು ಕಾರ್ಯಾಚರಿಸುತ್ತಿವೆ.

ಶೀಘ್ರ ಕಾರ್ಯಾಚರಣೆ
ಮಳೆ ನೀರನ್ನು ಒಳಚರಂಡಿ ಲೈನ್‌ಗೆ ಸಂಪರ್ಕ ಕಲ್ಪಿಸಿದ ಬಹುತೇಕ ಪ್ರಕರಣದ ಸಂಪರ್ಕವನ್ನು ಕಡಿತ ಮಾಡಿ ದಂಡ ವಿಧಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು.
*ಆನಂದ್‌ ಸಿ.ಎಲ್‌., ಪಾಲಿಕೆ ಆಯುಕ್ತರು

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.