ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ


Team Udayavani, Apr 22, 2024, 11:12 PM IST

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಕುಂಬಳೆ: ಎಣ್ಮಕಜೆ ಗ್ರಾಮ ಪಂಚಾಯತ್‌ನ ಹದಿನಾಲ್ಕನೇ ವಾರ್ಡ್‌ ವ್ಯಾಪ್ತಿಯ ಶೇಣಿ ಮಣಿಯಂಪಾರೆ ಸಮೀಪದ ಬಾರೆದಳ ಎಂಬಲ್ಲಿ ಜನ ವಾಸ ಇರುವ ಮನೆಯೊಂದಕ್ಕೆ ಸೋಮವಾರ ಮಧ್ಯಾಹ್ನದ ಬಳಿಕ ಆಕಸ್ಮಿಕವಾಗಿ ಬೆಂಕಿ ಹಿಡಿದು ಹೊತ್ತಿ ಉರಿದು ಸಂಪೂರ್ಣ ನಾಶವಾದ ಘಟನೆ ನಡೆದಿದೆ.

ದಿ| ಕುಟ್ಟಿ ನಾಯ್ಕ ಅವರ ಪುತ್ರ ಬಟ್ಯ ನಾಯ್ಕ ಅವರ ಹೆಂಚು ಹಾಸಿದ ಮನೆಗೆ ಬೆಂಕಿ ಹಿಡಿದು ನಾಶವಾಗಿದೆ. ಬಟ್ಯ ನಾಯ್ಕ ಹಾಗೂ ಇವರ ಪುತ್ರನ ಇಬ್ಬರು ಪುಟಾಣಿ ಮಕ್ಕಳು ಮಾತ್ರವೇ ಮನೆಯೊಳಗಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.

ಮಧ್ಯಾಹ್ನ ಬಳಿಕ ಮನೆಯಲ್ಲಿ ಸಾಕಿದ ದನದ ಹಾಲು ಕರೆದು ಸಮೀಪದ ಡೇರಿಗೆ ಕೊಡಲು ಇವರ ಪುತ್ರನ ಪತ್ನಿ ನಳಿನಿ ತೆರಳಿದ್ದು, ಅ ಬಳಿಕ ಅಲ್ಪ ಹೊತ್ತಿನಲ್ಲಿ ಮನೆಯ ಕೋಣೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಸ್ಥಳದಲ್ಲಿದ್ದ ಬಟ್ಯ ನಾಯ್ಕ ತಿಳಿಸಿದ್ದಾರೆ.

ತತ್‌ಕ್ಷಣ ಮಕ್ಕಳನ್ನು ಕರೆದುಕೊಂಡು ಸಮೀಪದಲ್ಲಿರುವವರಿಗೆ ವಿಷಯ ತಿಳಿಸುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಮರದ ಮಾಡನ್ನು ಸಂಪೂರ್ಣ ಅವರಿಸಿಕೊಂಡಿತ್ತು.

ಮನೆಯಲ್ಲಿದ್ದ ನಗ-ನಗದು,
ಸೊತ್ತುಗಳು ಬೆಂಕಿಗಾಹುತಿ
ಬೆಂಕಿಯನ್ನು ನಂದಿಸುವ ಪ್ರಯತ್ನದ ನಡುವೆ ಮನೆಯೊಳಗೆ ಇದ್ದ ನಗ-ನಗದು ಸಹಿತ ಸ್ಥಳದ ರೇಕಾರ್ಡ್‌, ಗಾದ್ರೆಜ್‌, ಟಿವಿ, ಫ್ರಿಡ್ಜ್ ಬೆಂಕಿಗೆ ಆಹುತಿಯಾಗಿದೆ. ತುಂಬಿಸಿಟ್ಟಿದ್ದ ಗ್ಯಾಸ್‌ ಸಿಲಿಂಡರ್‌ ಬೆಂಕಿ ಹಿಡಿದು ಸುಟ್ಟು ರಟ್ಟಿತ್ತು. ಇದರ ರಭಸಕ್ಕೆ ಮನೆಯ ಗೋಡೆಗಳು ಒಡೆದು ಹೋಗಿದೆ. ಸ್ಥಳೀಯರು ಹರಸಾಹಸ ಪಟ್ಟು ಮನೆಯ ಅಡುಗೆ ಕೋಣೆಯೊಳಗಿದ್ದ ಗ್ಯಾಸ್‌ ಸಿಲಿಂಡರ್‌ ಅನ್ನು ಹೊರ ತೆಗೆದು ಬೆಂಕಿ ಆರಿಸುವ ಕಾರ್ಯದಲ್ಲಿ ತೊಡಗಿದ್ದರು.

ತತ್‌ಕ್ಷಣ ಕಾಸರಗೋಡಿನಿಂದ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಸಹಕರಿಸಿದ್ದರು. ಮನೆಯೊಳಗಿದ್ದ ಮನೆಯ ರೇಕಾರ್ಡ್‌, ಐಡೆಂಟಿ ಕಾರ್ಡ್‌ ಶಾಲಾ ಸರ್ಟಿಫಿಕೇಟ್‌ ಸಹಿತ ಚಿನ್ನ ಹಣ ಇನ್ನಿತರ ವಸ್ತುಗಳು ಮನೆ ಸಂಪೂರ್ಣ ಹೊತ್ತಿ ನಾಶವಾಗಿದೆ. ಎಣ್ಮಕಜೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಸೋಮಶೇಖರ್‌ ಸ್ಥಳಕ್ಕೆ ಆಗಮಿಸಿ ಸ್ಥಳೀಯರೊಂದಿಗೆ ಸೇರಿಕೊಂಡು ಮನೆಯವರಿಗೆ ವಾಸಿಸಲು ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಿದ್ದಾರೆ.

 

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.