Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
ಗಡಿ ಕಾದ "ಸೈನಿಕ'ನ ಪರ ಮಿಡಿದ ನಿವೃತ್ತ ಯೋಧನ ಮನ
Team Udayavani, Apr 23, 2024, 12:22 AM IST
ಮಂಗಳೂರು: ಭಾರತೀಯ ವಾಯುಪಡೆಯಲ್ಲಿ ಸೇವೆ ಮಾಡಿ ನಿವೃತ್ತರಾಗಿರುವ ಕಂಕನಾಡಿಯ ನಿವಾಸಿ, ಹಿರಿಯರಾದ ದಿವಾಕರ್ ಒಂದು ತಿಂಗಳ ಪಿಂಚಣಿ ಮೊತ್ತವನ್ನು ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಹಸ್ತಾಂತರಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿ ಸೇನೆಯಲ್ಲಿ ದುಡಿದ ವ್ಯಕ್ತಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡಿದ್ದು ನಮಗೆಲ್ಲ ಹೆಮ್ಮೆಯ ವಿಷಯ. ಅವರನ್ನು ಗೆಲ್ಲಿಸಲು ನಾವು ಪೂರ್ಣ ಮಟ್ಟದ ಬೆಂಬಲ ನೀಡುತ್ತೇವೆ. ನನ್ನ ಒಂದು ತಿಂಗಳ ಪಿಂಚಣಿ ದುಡ್ಡು ಸಣ್ಣ ಮೊತ್ತ. ಆದರೆ ನನ್ನದೂ ಕಿಂಚಿತ್ತು ಸಹಾಯ ಇರಲೆಂದು ದೇಣಿಗೆ ನೀಡಿದ್ದೇನೆ ಎಂದರು.
ಕಾಂಗ್ರೆಸ್ ದೇಶ ಹಿತ ಬಯಸುವ ಪಕ್ಷ ಅಲ್ಲ. ಮೋದಿಯವರು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಯೋಧರ ಬಗ್ಗೆ ಕಾಳಜಿ ಹೊಂದಿದ್ದಾರೆ. ಸೇನೆಯಲ್ಲಿ ಹಲವಾರು ಸೌಲಭ್ಯ ಹೆಚ್ಚಿಸಿದ್ದಾರೆ. ಹಾಗಾಗಿ ಮತದಾರರು ದೇಶದ ಹಿತಕ್ಕಾಗಿ ಬಿಜೆಪಿ ಪರ ಮತ ಚಲಾಯಿಸಬೇಕು. ಮೋದಿಯವರನ್ನು ಮತ್ತೆ ಪ್ರಧಾನ ಮಂತ್ರಿಯಾಗಿ ಮಾಡಬೇಕು ಎಂದರು.
ಕ್ಯಾ| ಬ್ರಿಜೇಶ್ ಚೌಟ ಸೇನೆಯಲ್ಲಿದ್ದವರು ದೇಶದ ಬಗ್ಗೆ ಕಾಳಜಿ ಇರುವವರು. ಅವರು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ರಹಿತ ಅಭಿವೃದ್ಧಿಪರ್ವ ಮುಂದುವರಿಯುವ ವಿಶ್ವಾಸ ಇದೆ. ಜನಸಾಮಾನ್ಯರ ಪರ ಸಂಸತ್ತಿನಲ್ಲಿ ಮಾತನಾಡುತ್ತಾರೆಂಬ ಭರವಸೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.