Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Team Udayavani, Apr 23, 2024, 11:44 AM IST
ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ನಡೆಸಿದ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ನಟಿ ಹರ್ಷಿಕಾ ಪತಿ ಭುವನ್ ಪೊನಣ್ಣ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಿಸಿರುವ ಪೊಲೀಸರು ಆರೋಪಿಗಳಿ ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಭುವನ್ ದಂಪತಿ ಏ.2ರಂದು ಪುಲಕೇಶಿನಗರದ ಮಾಸ್ಕ್ ರಸ್ತೆಯಲ್ಲಿರುವ ಹೋಟೆಲ್ಗೆ ಕುಟುಂಬ ಸಮೇತ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ದಂಪತಿ ಪಾರ್ಕಿಂಗ್ನಲ್ಲಿದ್ದ ಕಾರನ್ನು ಹಿಂತೆಗೆದುಕೊಳ್ಳುವಾಗ ಕಿಡಿಗೇಡಿಯೊಬ್ಬ ನಿಮ್ಮ ಕಾರು ದೊಡ್ಡದಾಗಿದೆ. ಏಕಾಏಕಿ ಕಾರು ಚಲಾಯಿಸಿದರೆ ನಮಗೆ ತಾಗಬಹುದು ಎಂದು ವಾದಿಸಿದ್ದಾರೆ. ಅದಕ್ಕೆ ಆಯ್ತು ದಾರಿ ಬಿಡಿ ನಾನು ಹೋಗಬೇಕು ಎಂದು ದೂರುದಾರ ಭುವನ್ ಪೊನ್ನಣ್ಣ ಹೇಳಿದರೂ, ಗಲಾಟೆ ಮುಂದುವರಿಸಿ ಕಾರಿನ ಕಿಟಕಿ ತೆಗೆದು ಹಲ್ಲೆಗೆ ಮುಂದಾಗಿ, ಚಿನ್ನದ ಸರ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಬಳಿಕ ಹರ್ಷಿಕಾ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದಿದ್ದಾಗ ಹರ್ಷಿಕಾ ರನ್ನು ನೋಡಿ ಕನ್ನಡದವರು ಇಷ್ಟು ಬೆಳ್ಳಗೆ ಇರುವುದಿಲ್ಲ. ನಮ್ಮ ಏರಿಯಾ ಹುಡುಗಿಯನ್ನು ಕರೆದುಕೊಂಡು ಹೋಗುತ್ತಿದ್ದಾನೆ ಅಂತಾ ಕಾರನ್ನು ತಡೆದು ಡ್ಯಾಮೇಜ್ ಮಾಡಿದ್ದಾರೆ. ಅವರ ವರ್ತನೆಯನ್ನು ಪ್ರಶ್ನಿಸಿದಾಗ, ನಿಮ್ಮ ಕನ್ನಡ ಸ್ಟೈಲ್ ನೀವೇ ಇಟ್ಟುಕೊಳ್ಳಿ ಎಂದಿದ್ದಾರೆ. ತಮ್ಮ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಗಳು ಹಿಂದಿ, ಉರ್ದು ಮತ್ತು ಕೆಲವರು ಅರ್ಧಂಬರ್ಧ ಕನ್ನಡದಲ್ಲಿ ಮಾತನಾಡುತ್ತಿದ್ದರು. ಆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಭುವನ್ ಎಂದು ದೂರಿನಲ್ಲಿ ಕೋರಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೊಬೈಲ್ನಲ್ಲಿ ಸೆರೆಹಿಡಿರುವ ಇಬ್ಬರು ವ್ಯಕ್ತಿಗಳ ಭಾವಚಿತ್ರ ಆಧರಿಸಿ ಕಿಡಿಗೇಡಿಗಳ ಹುಡುಕಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.