BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಜನ್ಮ ಇರೋವರೆಗೂ ಕಾಂಗ್ರೆಸ್‌ಗೆ ಹೋಗಲ್ಲ, ಬಿಜೆಪಿ ಬಿಡಲ್ಲ

Team Udayavani, Apr 23, 2024, 7:47 PM IST

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಶಿವಮೊಗ್ಗ:ಬಿಜೆಪಿ ನನಗೆ ತಾಯಿ ಇದ್ದಂತೆ. ಯಡಿಯೂರಪ್ಪ ಪಕ್ಷ ಬಿಟ್ಟು ಕೆಜೆಪಿ ಕಟ್ಟಿದರು. ನಾನು ಯಾವತ್ತೂ ಪಕ್ಷ ಬಿಟ್ಟು ಹೋಗುವ ಬಗ್ಗೆ ಕಿಂಚಿತ್ತೂ ಯೋಚಿಸಿರಲಿಲ್ಲ. ಈಗ ಅಪ್ಪ-ಮಕ್ಕಳ ಷಡ್ಯಂತ್ರದಿಂದ ತಾತ್ಕಾಲಿಕವಾಗಿ ಪಕ್ಷದಿಂದ ಹೊರಗಿದ್ದೇನೆ. ಚುನಾವಣೆ ಬಳಿಕ ಯಡಿಯೂರಪ್ಪನೇ ಬಂದು ವಾಪಸ್‌ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಬಂಡಾಯ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿ ಸೋತಿದ್ದ ಜಗದೀಶ್‌ ಶೆಟ್ಟರ್‌ ಅವರನ್ನೇ ಕರೆದುಕೊಂಡು ಬಂದು ಲೋಕಸಭೆಗೆ ಟಿಕೆಟ್‌ ಕೊಡಿಸಿದ್ದಾರೆ. ಪಕ್ಷ ಕಟ್ಟಿ ಬೆಳೆಸಿದ ನನ್ನನ್ನು ಬಿಜೆಪಿಯಿಂದ ದೂರ ಮಾಡಲು ಆಗಲ್ಲ. ನನ್ನನ್ನು ಪಕ್ಷದಿಂದ ಹೊರಹಾಕಬೇಕು ಎಂದು ಅಪ್ಪ-ಮಕ್ಕಳು ಬಹಳ ಪ್ರಯತ್ನ ಮಾಡಿದ್ದರು. ಈಗ ಅವರಿಗೆ ಸಮಾಧಾನವಾಗಿದೆ. ಆದರೆ, ನನ್ನ ಜನ್ಮ ಇರೋವರೆಗೂ ಕಾಂಗ್ರೆಸ್‌ಗೆ ಹೋಗಲ್ಲ. ಈ ಉಚ್ಚಾಟನೆ ತಾತ್ಕಾಲಿಕ ಮಾತ್ರ. ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಬಿಜೆಪಿ ಸೇರುತ್ತೇನೆ ಎಂದರು.

ಮೋದಿ ಟೀಕಿಸಿದರೆ ಕಾಂಗ್ರೆಸ್‌ಗೆ ಸಿಗೋದು ಚೊಂಬು: ಈಶ್ವರಪ್ಪ
ಶಿವಮೊಗ್ಗ: ಪ್ರಧಾನಿ ಮೋದಿಯನ್ನು ಕಾಂಗ್ರೆಸ್ಸಿಗರು ಟೀಕಿಸಿದರೆ ರಾಜ್ಯದ 28 ಕ್ಷೇತ್ರಗಳಲ್ಲಿ ಅವರಿಗೆ ಸಿಗುವುದು ಚೊಂಬು ಎಂದು ಬಂಡಾಯ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಳಿ ಹಿಂದೂ ಮಹಿಳೆಯರ ಪವಿತ್ರ ಸಂಕೇತ. ಮೋದಿ ಏಕೆ ಹೇಳಿದ್ದಾರೆ ಗೊತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಏಕೆ ಹೇಳಿದ್ದಾರೋ ಗೊತ್ತಿಲ್ಲ. ಮೋದಿ ಹೇಳಿಕೆ ಬಗ್ಗೆ ಚರ್ಚೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ವಿಜಯೇಂದ್ರ ಹಣೆಯಲ್ಲಿನ ಕುಂಕುಮ ಅಳಿಸಿಕೊಂಡ ವಿಡಿಯೋ ವೈರಲ್‌ ಆಗಿದೆ.

ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಟಿಪ್ಪು ಸುಲ್ತಾನ್‌ ಟೋಪಿ ಹಾಕಿದ್ದರು. ವಿಜಯೇಂದ್ರ ಯಾವಾಗ ಬೇಕಾದರೂ ಕುಂಕುಮ ತೆಗೆಯುತ್ತಾರೆ. ಯಾವಾಗ ಬೇಕಾದರೂ ಹಚ್ಚಿಕೊಳ್ಳುತ್ತಾರೆ. ಅದೇ ರೀತಿ ಶಿವರಾಜಕುಮಾರ್‌, ಗೀತಾ ಕುಂಕುಮ ಅಳಿಸಿ ಹಾಕಿದ್ದನ್ನು ಪ್ರಶ್ನೆ ಮಾಡುತ್ತೇನೆ. ಇವರೆಲ್ಲರೂ ಹಿಂದೂ ಸಮಾಜದ ಬಳಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.