Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Team Udayavani, Apr 23, 2024, 8:02 PM IST
ದಾವಣಗೆರೆ: ಅಕ್ರಮ ಮರುಳುಗಾರಿಕೆ-ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಹರಿಹರ ತಾಲೂಕಿನ ಚಿಕ್ಕಬಿದರಿ ಮತ್ತು ಹರಪನಹಳ್ಳಿ ತಾಲೂಕಿನ ವಟ್ಲಹಳ್ಳಿ ಗ್ರಾಮಗಳ ನಡುವೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿಷಯದ ಬಗ್ಗೆ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟಂತಹ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ವಿಚಾರ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದ್ದೆ.
ಕ್ರಷರ್ನ ಮಾಲೀಕರ ಸಹೋದರರಾದ ಅಮರಾವತಿ ಮಂಜುನಾಥ್ ಮಂಗಳವಾರ ಮುಂಜಾನೆ ವಾಯುವಿಹಾರ ಮುಗಿಸಿ ಸಿ.ಜಿ. ಹಾಸ್ಪಿಟಲ್ ಮುಂಭಾಗದಲ್ಲಿರುವ ಇಂಡಿಯನ್ ಕಾಫಿ ಬಾರ್ ಬಳಿ ಇದ್ದಾಗ ಸ್ಥಳಕ್ಕೆ ಬಂದು ಎಲ್ಲಾ ವಿಚಾರಗಳನ್ನು ಯಾವ ಅಧಿಕಾರಿಗಳಿಗೂ ತಿಳಿಸದೆ ಸುಮ್ಮನಿರಿ. ನಮ್ಮ ವಿಚಾರಕ್ಕೆ ಬಂದರೆ ಚೆನ್ನಾಗಿರಲ್ಲ. ಅದು ಯಾವ ಧೈರ್ಯದಿಂದ ಹರಿಹರಕ್ಕೆ ಬರುತ್ತೀಯಾ, ಯಾವುದೇ ಕಾರಣಕ್ಕೂ ನಿನ್ನನ್ನು ಉಳಿಸಲ್ಲ ಎಂದು ಬೆದರಿಕೆ ಹಾಕಿದ್ದಾರೆ.
ಅಮರಾವತಿಯ ಮಂಜುನಾಥ್ನನ್ನು ತಕ್ಷಣ ಬಂಧಿಸಿ ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು ಹಾಗೂ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ನನಗೆ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.