Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


Team Udayavani, Apr 23, 2024, 8:18 PM IST

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

ಚಿತ್ರದುರ್ಗ : ದೇಶದಲ್ಲಿ ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಗರಿಷ್ಠ ಪ್ರಮಾಣದಲ್ಲಿದೆ. 70 ಕೋಟಿ ನಿರುದ್ಯೋಗಿಗಳು ದೇಶದಲ್ಲಿದ್ದರೆ, ಕೇಂದ್ರ ಸರ್ಕಾರದಲ್ಲೇ 30 ಲಕ್ಷ ಹುದ್ದೆಗಳು ಖಾಲಿಯಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದರು.

ನಗರದಲ್ಲಿ ಮಂಗಳವಾರ “ಕಾಂಗ್ರೆಸ್‌ ನ್ಯಾಯ ಸಂಕಲ್ಪ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವ ನಾಯಕ ಎನ್ನಲಾಗುತ್ತಿದೆ. ಚಿಟಿಕೆ ಹೊಡೆದರೆ ಯುದ್ಧ ನಿಲ್ಲುತ್ತದೆ ಎಂದು ಬಿಂಬಿಸಲಾಗಿದೆ. ಇಷ್ಟು ದೊಡ್ಡ ನಾಯಕರಿದ್ದೂ ದೇಶದಲ್ಲಿ ಬಡತನ, ನಿರುದ್ಯೋಗ, ಬೆಲೆ ಏರಿಕೆಯಂತಹ ಸಮಸ್ಯೆಗಳು ಯಾಕೆ ಉಳಿದಿವೆ ಎಂದು ಪ್ರಶ್ನಿಸಿದರು.

ದೇಶದಲ್ಲಿ ಜನಜೀವನ ಸಂಘರ್ಷಕ್ಕೆ ಸಿಲುಕುತ್ತಲೇ ಇದೆ. ಶ್ರಮಜೀವಿಗಳು ಎಷ್ಟೇ ಕಷ್ಟಪಟ್ಟರೂ ಅವರ ಬದುಕಿನ ಸುಧಾರಣೆ ಆಗುತ್ತಿಲ್ಲ. ಆದರೆ, ಮೋದಿ ಅವರ ಇಬ್ಬರು ಗೆಳೆಯರು ಮಾತ್ರ ದಿನೇ ದಿನೇ ಬೆಳೆಯುತ್ತಿದ್ದಾರೆ. ಕೋವಿಡ್‌ ಪರಿಸ್ಥಿತಿಯಲ್ಲೂ ಅವರ ಆದಾಯ ಏರಿಕೆಯಾಗಿದೆ. ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ. ಆದರೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದರು.

ದೇಶದಲ್ಲಿ ಎರಡು ರೀತಿಯ ಸತ್ಯಗಳಿವೆ. ಒಂದು ನಿತ್ಯದ ಜಂಜಾಟದ ಬದುಕು, ಬೆಲೆ ಏರಿಕೆ. ಇನ್ನೊಂದು ಮಾಧ್ಯಮಗಳಲ್ಲಿ ತೋರಿಸುವ ದೇಶದ ವೈಭವ. ಆದರೆ, ವಾಸ್ತವದ ಬದುಕು ದುಸ್ತರವಾಗಿದೆ. ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌, ದಿನಸಿ, ಬಂಗಾರ, ಬೆಳ್ಳಿ ಬೆಲೆಗಳ ಏರಿಕೆಯಿಂದ ಜನ ತತ್ತರಿಸಿದ್ದಾರೆ ಎಂದರು.

ಎಲೆಕ್ಟ್ರೋಲ್‌ ಬಾಂಡ್‌ ಹೆಸರಿನಲ್ಲಿ ಸಾವಿರಾರು ಕೋಟಿ ಚಂದಾ ಎತ್ತಲಾಗಿದೆ. ಇದರಲ್ಲಿ ಆಗುತ್ತಿರುವ ವ್ಯತ್ಯಾಸ ಗಮನಿಸಿದ ಸುಪ್ರೀಂಕೋರ್ಟ್‌ ಎಲ್ಲ ವರದಿಗಳನ್ನು ತರಿಸಿಕೊಂಡು ಬಹಿರಂಗಪಡಿಸಿದಾಗ ಅನೇಕ ಸತ್ಯಗಳು ಬಯಲಿಗೆ ಬಂದಿವೆ. ಐಟಿ, ಇಡಿ ದಾಳಿ ನಡೆದ ಕಂಪನಿಗಳು ಚಂದಾ ಕೊಟ್ಟಿವೆ. ಅನಂತರ ಅವರ ಮೇಲಿನ ಪ್ರಕರಣಗಳು ಮುಚ್ಚಿ ಹೋಗಿವೆ. ಲಾಭವೇ ಇಲ್ಲದ ಕಂಪನಿಗಳು ಸಾವಿರ ಕೋಟಿ ದೇಣಿಗೆ ನೀಡಿವೆ. ಇದನ್ನು ಪ್ರಶ್ನೆ ಮಾಡಿದವರ ಮೇಲೆ ದೂರು ದಾಖಲಿಸಿ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದ್ದಾರೆ ಎಂದು ಹೇಳಿದರು.

ಹಿಂದೂ ಧರ್ಮ ಹಾಗೂ ದೇಶದ ಪರಂಪರೆಯಲ್ಲಿ ನಾಯಕನಾದವನು ಸತ್ಯ, ಧರ್ಮದ ಹಾದಿಯಲ್ಲಿರಬೇಕು. ಅಂಥವರು ನಮ್ಮ ನಾಯಕರಾಗಿರಬೇಕು. ಇದಕ್ಕೆ ಶ್ರೀರಾಮ, ಮಹಾತ್ಮಾ ಗಾಂಧಿಧೀಜಿ, ಹಿಂದಿನ ಅನೇಕ ಪ್ರಧಾನಿಗಳ ಉದಾಹರಣೆಯಿದೆ. ಆದರೆ, ಈಗಿನ ನಮ್ಮ ನಾಯಕರು ನಾಟಕ ಮಾಡುವವರಾಗಿದ್ದಾರೆ. ಅನೈತಿಕ ಮಾರ್ಗದಲ್ಲಿ ಅಧಿಕಾರ ಹಿಡಿದರೂ ನಮ್ಮ ಮಾಧ್ಯಮಗಳು ಮೋದಿ ಮಾಸ್ಟರ್‌ ಸ್ಟ್ರೋಕ್‌ ಎನ್ನುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕೊಡುತ್ತಿಲ್ಲ. ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಮಧ್ಯ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಈವರೆಗೂ ಅನುದಾನ ನೀಡಿಲ್ಲ. ಕಳಸಾ ಬಂಡೂರಿ, ರಾಯಚೂರು ಜಿಲ್ಲೆಯ ಏಮ್ಸ್‌ ಬೇಡಿಕೆಗೂ ಸ್ಪಂದಿಸಿಲ್ಲ ಎಂದು ದೂರಿದರು.

ಅನ್ಯಾಯ ಏಕೆ ಮಾಡುತ್ತಾರೆ. ಶುದ್ಧ ನಿಯತ್ತು, ಶುದ್ಧ ಹೃದಯದಿಂದ ಮೋದಿ ಕೆಲಸ ಮಾಡುತ್ತಿಲ್ಲ ಅವರಿಗೆ ಎಲ್ಲಿ ರಾಜಕೀಯ ಲಾಭವಾಗುತ್ತೋ ಅಲ್ಲಿಗೆ ಮಾತ್ರ ಅನುದಾನ ಕೊಡುತ್ತಾರೆ ಎಂದರು.

ಕಾಂಗ್ರೆಸ್‌ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಮಹಿಳೆಗೆ ಒಂದು ಲಕ್ಷ ರೂ. ಕೊಡುವ “ಮಹಾಲಕ್ಷ್ಮಿ’ ಯೋಜನೆ ರೂಪಿಸಲಾಗಿದೆ. ನರೇಗಾ ಕೂಲಿಯನ್ನು ರೂ.400ಕ್ಕೂ ಹೆಚ್ಚಿಸಲಾಗುತ್ತದೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌, ಸಚಿವ ಡಿ.ಸುಧಾಕರ್‌, ಮುಖಂಡ ಬಿ.ಕೆ.ಹರಿಪ್ರಸಾದ್‌ ಇನ್ನಿತರರು ಭಾಗವಹಿಸಿದ್ದರು.

ಕಾಡುಗೊಲ್ಲರಿಗೆ ಎಸ್ಟಿ ಮೀಸಲು
ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಡುಗೊಲ್ಲರನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗುವುದು ಎಂದೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.ದೇಶಾದ್ಯಂತ ಜಾತಿಗಣತಿ ನಡೆಸಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದು. ರೈತರಿಗೆ ಬೆಂಬಲ ಬೆಲೆ, ಬೆಳೆ ಹಾನಿಗೆ 30 ದಿನಗಳಲ್ಲಿ ಪರಿಹಾರ ನೀಡುವುದು, ಕೃಷಿಯನ್ನು ಜಿಎಸ್‌ಟಿ ಮುಕ್ತ ಮಾಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

SAnehalli

Chitradurga: “ಹಿಂದೂ’ ಧರ್ಮವೇ ಅಲ್ಲ: ಸಾಣೇಹಳ್ಳಿ ಶ್ರೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.