Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Team Udayavani, Apr 24, 2024, 12:44 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ 1, 500 ಪೊಲೀಸ್ ಅಧಿಕಾರಿ ಮತ್ತು ಸಿಬಂದಿ ಹಾಗೂ ಸಿಎಪಿಎಫ್ (ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್)-2 ತುಕಡಿ, ಕೆಎಸ್ಆರ್ಪಿ ಒಂದು ತುಕಡಿ, ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1,600 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬಂದಿ, ಸಿಎಪಿಎಫ್ 3 ತುಕಡಿ ಮತ್ತು ಕೆಎಸ್ಆರ್ಪಿ-9 ಪ್ಲಟೂನ್ನಗಳನ್ನು ನಿಯೋಜಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಜಿಲ್ಲೆಯಲ್ಲಿ ಒಟ್ಟು 1157 ಮಂದಿಯ ಮೇಲೆ ಭದ್ರತಾ ಕಾಯ್ದೆಯಡಿ ಕ್ರಮಕೈಗೊಳ್ಳಲಾಗಿದೆ. ಅಪರಾಧ ಕೃತ್ಯ ಗಳಲ್ಲಿ ಗುರುತಿಸಿಕೊಂಡಿದ್ದ 806 ಮಂದಿಯಿಂದ ಮುಚ್ಚಳಿಕೆ ಬರೆಸಿ ಕೊಳ್ಳಲಾಗಿದೆ. 75 ಮಂದಿಯನ್ನು ಗಡೀ ಪಾರು ಮಾಡಲಾಗಿದೆ. 8 ಮಂದಿಯ ಮೇಲೆ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡಿದ್ದು, ಇದರಲ್ಲಿ 4ಮಂದಿಯ ಮೇಲೆ ಹೈಕೋರ್ಟ್ ಅಡ್ವೆಸರಿ ಕಮಿಟಿಯಿಂದ ಗೂಂಡಾ ಕಾಯ್ದೆ ಅನುಮೋದನೆಗೊಂಡಿದೆ. ಅವರನ್ನು ಒಂದು ವರ್ಷದ ವರೆಗೆ ಬಂಧನದಲ್ಲಿ ಇರಿಸಲಾಗುತ್ತದೆ ಎಂದರು.
42 ಕಡೆಗಳಲ್ಲಿ ಸಿಎಪಿಎಫ್ ತುಕಡಿ
ಒಳಗೊಂಡಂತೆ ಸ್ಥಳೀಯ ಸಿಬಂದಿ ಯೊಂದಿಗೆ ಪಥಸಂಚಲನ ನಡೆಸಲಾಗಿದ್ದು, 3 ಕಡೆ ದೊಡ್ಡ ಪ್ರಮಾಣದ ಪಥ ಸಂಚಲನ ನಡೆದಿದೆ. ಮಂಗಳೂರು ನಗರದಲ್ಲಿ ಮಂಗಳವಾರ ಪಥ ಸಂಚಲನ ನಡೆಸಲಾಗಿದ್ದು, 830 ಅಧಿಕಾರಿ ಸಿಬಂದಿ ಭಾಗವಹಿಸಿದ್ದಾರೆ. 12 ಕಡೆಗಳಲ್ಲಿ ಚೆಕ್ಪೋಸ್ಟ್ ತೆರೆಯ ಲಾಗಿದ್ದು, 22,24,489 ರೂ. ನಗದು, 8,87,950 ರೂ. ಮೌಲ್ಯದ ಅಮಲು ಪದಾರ್ಥ ವಶಪಡಿಸಿಕೊಳ್ಳಲಾಗಿದೆ. ಒಟ್ಟು 3 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದರು.
ಮತದಾರ ಜಾಗೃತಿ ಅಭಿಯಾನ
ದ.ಕ. ಜಿಲ್ಲೆಯಲ್ಲಿ ಹಿಂದಿನ ಚುನಾವಣೆಗಳಲ್ಲಿ 72 ಮತಗಟ್ಟೆ ಯಲ್ಲಿ ಕಡಿಮೆ ಮತದಾನ ಆಗಿತ್ತು. ಮಂಗಳೂರು ನಗರ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಇದು ಹೆಚ್ಚು. ಇದರ ಆಧಾರದಲ್ಲಿ ಈ ಮತಗಟ್ಟೆಯಲ್ಲಿ ಮತದಾನ ಹೆಚ್ಚಳಕ್ಕೆ ಸ್ವೀಪ್ ಮೂಲಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಮತದಾನದ ವಿಚಾರದಲ್ಲೂ ಜಾಗೃತಿ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಡಾ| ಆನಂದ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Mangaluru: ಮುಮ್ತಾಜ್ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.