Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

ಮಂಗಳೂರು ವಿಶ್ವವಿದ್ಯಾನಿಲಯ: ಹಳಿಗೆ ಬಾರದ ಶೈಕ್ಷಣಿಕ ವೇಳಾಪಟ್ಟಿ

Team Udayavani, Apr 24, 2024, 7:25 AM IST

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿ ವಿದ್ಯಾರ್ಥಿಗಳು ಪದವಿ ಪ್ರವೇಶದ ನಿರೀಕ್ಷೆಯಲ್ಲಿದ್ದರೂ ಪದವಿ ತರಗತಿ ಪ್ರವೇಶಿಸಲು ಸುಮಾರು ನಾಲ್ಕು ತಿಂಗಳು ಕಾಯಬೇಕು! ಕೋವಿಡ್‌ ಸಂದರ್ಭ ಹಳಿ ತಪ್ಪಿದ ಪದವಿ ತರಗತಿಯ ಶೈಕ್ಷಣಿಕ ವೇಳಾಪಟ್ಟಿ ಇನ್ನೂ ಸರಿ ಹೋಗದೆ ಇರುವುದೇ ಇದಕ್ಕೆ ಕಾರಣ.

ಈ ಬಾರಿಯೂ
ಪದವಿ ತರಗತಿ ಆರಂಭ
ಸೆಪ್ಟಂಬರ್‌ ಬಳಿಕವೇ ಎಂಬಂತಿದೆ. ಹಿಂದೆ ಜೂನ್‌-ಜುಲೈ ವೇಳೆ ಕಾಲೇಜು ಆರಂಭ ವಾಗುತ್ತಿದ್ದರೆ ಕೋವಿಡ್‌ ಬಳಿಕ ಪ್ರತೀ ವರ್ಷ ಸೆಪ್ಟಂಬರ್‌ ಅವಧಿಯಲ್ಲಿಯೇ ಆರಂಭವಾಗುತ್ತಿದೆ.

ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಈಗಿನ ಅಂತಿಮ ಸೆಮಿಸ್ಟರ್‌ ಜೂ. 19ಕ್ಕೆ ಕೊನೆಗೊಳ್ಳುತ್ತದೆ. ಬಳಿಕ ಪರೀಕ್ಷೆ-ಮೌಲ್ಯಮಾಪನ ಜುಲೈ/ಆಗಸ್ಟ್‌ ವರೆಗೆ ನಡೆಯಲಿದೆ. ಅದಾದ ಬಳಿಕ ಪದವಿ ಹೊಸ ತರಗತಿಗಳ ಆರಂಭ. ಅಂದರೆ ಸುಮಾರು 4 ತಿಂಗಳು ತಗಲಲಿದೆ.

ಏಕರೂಪದ ಶೈಕ್ಷಣಿಕ ಕ್ಯಾಲೆಂಡರ್‌, ಪದವಿ ತರಗತಿಗಳ ಪಠ್ಯಕ್ರಮ ಕಡಿತ ಸಹಿತ ವಿವಿಧ ಪ್ರಯೋಗಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಏಕಕಾಲಕ್ಕೆ ಪದವಿ ತರಗತಿ ಆರಂಭಿಸಲು ರಾಜ್ಯ ಸರಕಾರ ಆಲೋಚಿಸಿತ್ತು. ಆದರೆ ಅದು ಇದುವರೆಗೆ ಸಾಧ್ಯವಾಗಿಲ್ಲ.

ತಡವಾದರೆ ಸಮಸ್ಯೆ ಏನು?
ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗದಿದ್ದರೆ ಪದವಿ ಸೇರಲು ಇಚ್ಛಿಸುವ ವಿದ್ಯಾರ್ಥಿಗಳ ನಾಲ್ಕು ತಿಂಗಳು ವ್ಯರ್ಥವಾಗುವುದಲ್ಲದೆ ಐಟಿಐ, ಡಿಪ್ಲೊಮಾ, ನರ್ಸಿಂಗ್‌ ಕೋರ್ಸ್‌ಗಳಿಗೆ ಸೇರಿಕೊಳ್ಳುವ ಸಾಧ್ಯತೆಯೂ ಹೆಚ್ಚಿದೆ. ಇದರಿಂದಾಗಿ ಪದವಿಗೆ ವಿದ್ಯಾರ್ಥಿಗಳ ಕೊರತೆ ಎದುರಾಗಬಹುದು.

“ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಲೇಜಿನಿಂದ ತೆರಳಿದ ಅನಂತರವಷ್ಟೇ ಹೊಸಬರಿಗೆ ಪ್ರವೇಶ. ಒಂದು ವೇಳೆ ಮೊದಲೇ ಹೊಸಬರು ಬಂದರೆ ತರಗತಿ ಕೋಣೆ, ಬೆಂಚು, ಮೇಜು, ಅಧ್ಯಾಪಕರ ಕೊರತೆ ಕಾಡಲಿದೆ. ಹೀಗಾಗಿ ಪದವಿಗೆ ಹೊಸ ವಿದ್ಯಾರ್ಥಿಗಳ ಪ್ರವೇಶ ತಡವಾಗಬಹುದು’ ಎನ್ನುತ್ತಾರೆ ಕಾರ್‌ಸ್ಟ್ರೀಟ್‌ ಸರಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ| ಜಯಕರ ಭಂಡಾರಿ.

ಪಿಯುಸಿ ಉತ್ತೀರ್ಣರಾಗಿ ಪದವಿ ಸೇರುವ ಮಕ್ಕಳು “ಯುಯುಸಿಎಂಎಸ್‌’ ಸಾಫ್ಟ್ವೇರ್‌ ಮೂಲಕ ಆನ್‌ಲೈನ್‌ನಲ್ಲಿ ದಾಖಲಾತಿ ಪಡೆಯಬೇಕು. ಆದರೆ “ಯುಯುಸಿಎಂಎಸ್‌’ ಪೋರ್ಟಲ್‌ ಮೂಲಕ ದಾಖಲಾತಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಇನ್ನೂ ಅಧಿಕೃತ ಅನುಮತಿ ಇನ್ನಷ್ಟೇ ಸಿಗಬೇಕಿದೆ. ಹಾಗಾಗಿ ಪೋರ್ಟಲ್‌ ಇನ್ನೂ ತೆರೆಯಬೇಕಿದೆ.

ಆನ್‌ಲೈನ್‌ ದಾಖಲಾತಿ ಇಲ್ಲ !
ಪದವಿಗೆ ಆನ್‌ಲೈನ್‌ ದಾಖಲಾತಿ ಆಗಬೇಕು. ಅದಿನ್ನೂ ಆರಂಭವಾಗಿಲ್ಲ. ಆದರೆ ಪಿಯುಸಿ ಫಲಿ ತಾಂಶ ಬಂದ ಕಾರಣ ವಿದ್ಯಾರ್ಥಿಗಳು ಕಾಲೇಜುಗಳಿಗೆ ಆಗಮಿಸಿ ದಾಖಲಾತಿಗೆ ಆಗ್ರಹಿಸುತ್ತಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಮರಳಿ ಕಳುಹಿಸಲು ಇಚ್ಛಿಸದ ಪ್ರಾಧ್ಯಾಪಕರು, ಮಾತನಾಡಿಸಿ ಅರ್ಜಿ ನೀಡುವಂತೆ ತಿಳಿಸುತ್ತಿದ್ದಾರೆ. ಪೋರ್ಟಲ್‌ ತೆರೆದ ಬಳಿಕ ಅದರಲ್ಲಿ ಅಧಿಕೃತವಾಗಿ ದಾಖಲಾತಿ ಮಾಡ ಲಾಗುವುದು ಎಂದು ಮನದಟ್ಟು ಮಾಡಬೇಕಾದ ಪ್ರಮೇಯ ಎದುರಾಗಿದೆ.

ಎನ್‌ಇಪಿ-ಎಸ್‌ಇಪಿ:
ಯಾವುದು ಈ ಬಾರಿ?
ಪದವಿ ತರಗತಿಗೆ ಈ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಬದಲು ಎಸ್‌ಇಪಿ ಜಾರಿ ಮಾಡುವುದಾಗಿ ರಾಜ್ಯ ಸರಕಾರ ತಿಳಿಸಿತ್ತು. ಅದರಂತೆ ಎಲ್ಲ ವಿ.ವಿ. ವ್ಯಾಪ್ತಿಯಲ್ಲಿ ವಿವಿಧ ಸಮಾಲೋಚನೆ-ಚರ್ಚೆ ನಡೆದಿತ್ತು. ಆದರೆ ಅದು ಅಂತಿಮ ಸ್ವರೂಪಕ್ಕೆ ಬಂದಿಲ್ಲ. ಸದ್ಯ ಚುನಾವಣೆ ಹಿನ್ನೆಲೆಯಲ್ಲಿ ಸರಕಾರವೂ ತೀರ್ಮಾನ ಕೈಗೊಳ್ಳುವುದು ಕಷ್ಟ. ಹೀಗಾಗಿ ಪದವಿ ಆರಂಭದವರೆಗೆ ಎನ್‌ಇಪಿ- ಎಸ್‌ಇಪಿ ಎಂಬ ಗೊಂದಲ ಹಾಗೆಯೇ ಮುಂದುವರಿಯಲಿದ್ದು, ವಿದ್ಯಾರ್ಥಿ ಗಳನ್ನು ಅಡಕತ್ತರಿಯಲ್ಲಿ ನಿಲ್ಲಿಸಿದೆ.

ಪದವಿಗೆ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಸಂಬಂಧ ಸರಕಾರದ ಆದೇಶವನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಎನ್‌ಇಪಿ, ಎಸ್‌ಇಪಿ ಚರ್ಚೆ ನಡೆಯುತ್ತಿದ್ದು, ಸರಕಾರ ಅಂತಿಮಗೊಳಿಸಿದ ಬಳಿಕ ಪದವಿ ತರಗತಿ ಆರಂಭಿಸಲಾಗುವುದು.
-ಪ್ರೊ| ಪಿ.ಎಲ್‌. ಧರ್ಮ, ಕುಲಪತಿ, ಮಂಗಳೂರು ವಿ.ವಿ.

-ದಿನೇಶ್‌ ಇರಾ

ಟಾಪ್ ನ್ಯೂಸ್

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-aie

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

1-asi

Mangaluru; ಕಾವೂರು ಎಎಸ್ಐ ಜಯರಾಮ್ ನಿಧನ

1-kamala

Mangaluru; ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ಕಮಲಾ ಭಟ್ ವಿಧಿವಶ

MNG-Nigirya-Arrest

Mangaluru: ನೈಜೀರಿಯಾ ಪ್ರಜೆ ಸೆರೆ; 11 ಲ.ರೂ. ಸೊತ್ತು ವಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

7

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.