ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ
Team Udayavani, Apr 24, 2024, 10:56 AM IST
ಬೆಂಗಳೂರು: ಅಶ್ಲೀಲ ವಿಡಿಯೋ ಮಾದರಿಯಲ್ಲಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಪೀಡಿಸುತ್ತಿದ್ದ ಮಹಿಳೆಯನ್ನು ಕೊಂದಿದ್ದ ಸಾಫ್ಟ್ವೇರ್ ಎಂಜಿನಿಯರ್ನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೇರೋಹಳ್ಳಿ ನಿವಾಸಿ ನವೀನ್(28) ಬಂಧಿತ ಆರೋಪಿ. ಈತ ಏ.19ರಂದು ಎಂ.ಶೋಭಾ(48) ಎಂಬಾಕೆಯನ್ನು ಕೊಲೆಗೈದು, ಆಕೆಯ ಕಾರು ಸಮೇತ ಪರಾರಿ ಯಾಗಿದ್ದ. ಈ ಸಂಬಂಧ ಶೋಭಾ ಅವರ ಪುತ್ರಿ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಶೋಭಾ ಪತಿ ಚಿಕ್ಕಪೇಟೆಯಲ್ಲಿ ವಾಸವಾಗಿದ್ದು, ಈಕೆ ಕೊಡಿಗೇಹಳ್ಳಿಯಲ್ಲಿ ಡ್ರೈವಿಂಗ್ ಶಾಲೆ ತೆರೆದು, 2ನೇ ಪುತ್ರಿಯ ಜತೆ ಗಣಪತಿನಗರದಲ್ಲಿ ಪ್ರತ್ಯೇಕವಾಗಿ ವಾಸವಾ ಗಿದ್ದರು. ಮೊದಲ ಪುತ್ರಿಗೆ ಮದುವೆಯಾಗಿದ್ದು, ಆಕೆ ಪತಿ ಜತೆ ವಾಸವಾಗಿದ್ದಾರೆ. ಏ.4ರಂದು ತಮ್ಮ 2ನೇ ಪುತ್ರಿಗೂ ಮದುವೆ ಮಾಡಿದ್ದರು. ಈ ನಡುವೆ ಶೋಭಾ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿದ್ದು, ಈ ವೇಳೆ ಮೈಸೂರು ಮೂಲದ ಟೆಕಿ ನವೀನ್ ಪರಿಚಯವಾಗಿದೆ. ಜತೆಗೆ ಈತ ಮಾಡುತ್ತಿದ್ದ ರೀಲ್ಸ್ಗಳನ್ನು ಈಕೆ ಲೈಕ್ ಮಾಡುತ್ತಿದ್ದರು. ಹೀಗಾಗಿ ಇಬ್ಬರು ಆನ್ಲೈನ್ನಲ್ಲಿ ಚಾಟಿಂಗ್ ಆರಂಭಿಸಿದ್ದಾರೆ. ನಂತರ ಪರಸ್ಪರ ಮೊಬೈಲ್ ನಂಬರ್ ಬದಲಾಯಿಸಿಕೊಂಡು, ಕರೆ ಹಾಗೂ ವಾಟ್ಸ್ ಆ್ಯಪ್ ಚಾಟಿಂಗ್ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದೆ. ಕೆಲ ತಿಂಗಳ ಹಿಂದೆ ಇಬ್ಬರು ಆರ್.ಟಿ.ನಗರದ ಹೋಟೆಲ್ವೊಂದರಲ್ಲಿ ಮೊದಲ ಬಾರಿ ಭೇಟಿಯಾಗಿದ್ದರು ಎಂದು ಪೊಲೀಸರು ಹೇಳಿದರು.
ಅತಿಯಾದ ಸೆಕ್ಸ್ ಆಸೆಗೆ ಬಲಿಯಾದ ಶೋಭಾ?: ಏ.18ರಂದು ಪ್ರಿಯಕರ ನವೀನ್ಗೆ ಕರೆ ಮಾಡಿದ ಶೋಭಾ, ರಾತ್ರಿ ಮನೆಗೆ ಬರುವಂತೆ ಆಹ್ವಾನಿ ಸಿದ್ದಾರೆ. ಅದರಂತೆ ರಾತ್ರಿ 10 ಗಂಟೆ ಸುಮಾರಿಗೆ ಹೆಬ್ಬಾಳ ಬಳಿ ಬಂದ ನವೀನ್ನನ್ನು ಈಕೆಯೇ ತನ್ನ ಕಾರಿನಲ್ಲಿ ಮನೆಗೆ ಕರೆ ತಂದಿದ್ದಾರೆ. ಬಳಿಕ ಇಬ್ಬರು ಊಟ ಮುಗಿ ಸಿದ್ದು, ಈಕೆ ಮದ್ಯ ಸೇವಿಸಿದ್ದಾಳೆ. ಬಳಿಕ ಶೋಭಾ, ನವೀನ್ಗೆ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಪ್ರಚೋದಿಸಿದ್ದಾರೆ. ಆದರೆ, ಆತ ನಿರಾಕರಿಸಿದ್ದಾನೆ. ಕೆಲ ಹೊತ್ತಿನ ಬಳಿಕ ನವೀನ್ನನ್ನು ಮತ್ತೂಮ್ಮೆ ಪ್ರಚೋದಿಸಿದ ಶೋಭಾ ಆತನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ.
ಬಳಿಕ ಮತ್ತೂಮ್ಮೆ ನವೀನ್ ಬಳಿ ಬಂದು ಅಶ್ಲೀಲ ವಿಡಿಯೋ ತೋರಿಸಿ, ಈ ಮಾದರಿಯಲ್ಲಿ ಲೈಂಗಿಕ ಕ್ರಿಯೆ ನಡೆಸೋಣ ಎಂದು ಪೀಡಿಸಿದ್ದಾರೆ. ಅದಕ್ಕೆ ನಿರಾಕರಿಸಿದ ನವೀನ್, ಈ ರೀತಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದಿ ದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಯಾಗಿದ್ದು, ಅದು ವಿಕೋಪಕ್ಕೆ ಹೋಗಿದೆ. ಅಲ್ಲದೆ, ಗಲಾಟೆ ವೇಳೆ ಗಾಯಗೊಂಡಿದ್ದ ಆತನ ಕೈಗೆ ಮತ್ತಷ್ಟು ಗಾಯಗೊಳಿಸಿದ್ದಾರೆ. ಅದರಿಂದ ಇನ್ನಷ್ಟು ಕೋಪಗೊಂಡ ಆರೋಪಿ, ಶೋಭಾರ ಕತ್ತು ಹಿಸುಕಿ ಕೊಲೆಗೈದು, ಬಳಿಕ ಮನೆ ಮುಂದೆ ನಿಂತಿದ್ದ ಶೋಭಾರ ಕಾರಿನಲ್ಲೇ ಪರಾರಿ ಯಾಗಿದ್ದ. ಮರು ದಿನ ಶೋಭಾರ 2ನೇ ಪುತ್ರಿ ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಅನುಮಾನಗೊಂಡು ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
1.80 ಲಕ್ಷ ರೂ. ಡ್ರಾ ಮಾಡಿದ್ದ ಆರೋಪಿ
ಶೋಭಾರನ್ನು ಹತ್ಯೆಗೈದ ಬಳಿಕ ಆರೋಪಿ ನವೀನ್, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಆಕೆಯ ಮೊಬೈಲ್, ಕಾರು ಕಳವು ಮಾಡಿ ಪರಾರಿಯಾಗಿದ್ದ. ಆಕೆಯ ಮೊಬೈಲ್ ಹಿಂಭಾಗದಲ್ಲಿದ್ದ ಎಟಿಎಂ ಕಾರ್ಡ್ನಿಂದ 2 ಎಟಿಎಂ ಕೇಂದ್ರದಲ್ಲಿ 1.80 ಲಕ್ಷ ರೂ. ಡ್ರಾ ಮಾಡಿದ್ದಾನೆ. ಅಲ್ಲದೆ, ಕಾರನ್ನು ನಗರದ ಗಡಿಭಾಗದಲ್ಲಿ ನಿಲ್ಲಿಸಿ ಪರಾರಿಯಾಗಿದ್ದ. ತನಿಖೆ ಆರಂಭಿಸಿದಾಗ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.