Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ


Team Udayavani, Apr 24, 2024, 11:12 AM IST

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದ ಬಿಹಾರ ಮೂಲದ ಆರೋಪಿ ಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುರೇಂದ್ರ ಕಾಮತ್‌ (29) ಬಂಧಿತ. ಆರೋಪಿಯಿಂದ 50 ಲಕ್ಷ ರೂ. ಮೌಲ್ಯದ 502 ಗ್ರಾಂ ಮೌಲ್ಯದ ಚಿನ್ನಾಭರಣ, 99.5 ಗ್ರಾಂ ಡೈಮಂಡ್‌ ಒಡವೆಗಳು, 199 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 12 ಸಾವಿರ ರೂ. ನಗದು ಹಾಗೂ ಅಮೆರಿಕನ್‌ ಡಾಲರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ, ದೊಡ್ಡನೆಕ್ಕುಂದಿಯ ಅಮಿತ್‌ ಜೈನ್‌ ಎಂಬುವರ ಮನೆಯಲ್ಲಿ  ಕಳ್ಳತನ ಮಾಡಿದ್ದ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದೂರುದಾರ ಅಮಿತ್‌ ಜೈನ್‌ ದೊಡ್ಡನೆಕ್ಕುಂದಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದು, 3 ವರ್ಷಗಳಿಂದ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಎಲ್ಲರ ನಂಬಿಕೆ ಗಳಿಸಿದ್ದ. ಹೀಗಾಗಿ ಮನೆಯ ಎಲ್ಲೆಡೆ ಓಡಾಡಲು ಅವಕಾಶ ನೀಡಲಾಗಿತ್ತು. ಅದನ್ನು ದುರುಪಯೋಗ ಪಡಿಸಿಕೊಂಡ ಆರೋಪಿ, ಮಾಲೀಕರು ಚಿನ್ನಾಭರಣಗಳನ್ನು ಇಟ್ಟಿರುವ ಜಾಗ ನೋಡಿಕೊಂಡಿದ್ದ. ಈ ಮಧ್ಯೆ ಅಮಿತ್‌ ಜೈನ್‌ ಮತ್ತು ಕುಟುಂಬ ಏ.12ರಂದು ಕಾರ್ಯನಿಮಿತ್ತ ಮುಂಬೈಗೆ ತೆರಳಿತ್ತು. ಆಗ ಆರೋಪಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಬಿಹಾರಕ್ಕೆ ಪರಾರಿಯಾಗಿªದ. ಏ.15ರಂದು ಅಮಿತ್‌ ಜೈನ್‌ ವಾಪಸ್‌ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ. ಬಳಿಕ ಸುರೇಂದ್ರ ಕುಮಾರ್‌ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ವಿಳಾಸ ಪಡೆದು ಬಿಹಾರಕ್ಕೆ ತೆರಳಿ ಪರಿಶೀಲಿಸಿದಾಗ, ಆತ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಮಾಹಿತಿ ಸಿಕ್ಕಿತ್ತು. ನಂತರ ವಿಜಯವಾಡದಲ್ಲಿ ಹುಡುಕಾಟ ನಡೆಸಿದ್ದಾಗ ವಿಜಯವಾಡದ ರೈಲ್ವೆ ನಿಲ್ದಾಣ ಬಳಿ ಪೊಲೀಸರನ್ನು ಕಂಡು ಆರೋಪಿ ಓಡಿ ಹೋಗಲು ಯತ್ನಿಸಿದ್ದಾನೆ. ಆತನನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಮನೆ ಕಳ್ಳತನದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು.

ವೈಟ್‌ಫೀಲ್ಡ್‌ ಉಪವಿಭಾಗದ ಡಿಸಿಪಿ ಡಾ ಶಿವಕುಮಾರ್‌ ಮತ್ತು ವೈಟ್‌ಫೀಲ್ಡ್‌ ಉಪವಿಭಾಗದ ಎಸಿಪಿ ಎಂ.ಸಿ.ಕವಿತಾ ನೇತೃತ್ವದಲ್ಲಿ ಮಹದೇವಪುರ ಠಾಣೆ ಇನ್‌ಸ್ಪೆಕ್ಟರ್‌ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.